AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಕೆಲಸ ಕೊಡಿಸುವ ಆಸೆ ಹುಟ್ಟಿಸಿ ಯುವತಿಯನ್ನು ವೇಶ್ಯಾವಾಟಿಕೆಗೆ ಬಳಕೆ; ಪೊಲೀಸರ ದಾಳಿ ವೇಳೆ ಜಾಲ ಪತ್ತೆ

Crime News: ಹಣ, ಎರಡು ಮೊಬೈಲ್ ಹಾಗೂ ಕಾಂಡೋಮ್ ಬಾಕ್ಸ್ ಜಪ್ತಿ ಮಾಡಲಾಗಿದೆ. ಮೊಬೈಲ್ ಕರೆಗಳ ಮುಖಾಂತರವಾಗಿ ಗಿರಾಕಿಗಳನ್ನ ಕರೆಸಿಕೊಂಡು ಹಣ ಸಂಪಾದನೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Bengaluru Crime: ಕೆಲಸ ಕೊಡಿಸುವ ಆಸೆ ಹುಟ್ಟಿಸಿ ಯುವತಿಯನ್ನು ವೇಶ್ಯಾವಾಟಿಕೆಗೆ ಬಳಕೆ; ಪೊಲೀಸರ ದಾಳಿ ವೇಳೆ ಜಾಲ ಪತ್ತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 13, 2021 | 6:05 PM

Share

ನೆಲಮಂಗಲ: ಕೆಲಸ ಕೊಡಿಸುವುದಾಗಿ ಆಸೆ ಹುಟ್ಟಿಸಿ ಹೊರ ರಾಜ್ಯದ ಯುವತಿಯನ್ನು ವೇಶ್ಯಾವಾಟಿಕೆಗೆ ಬಳಕೆ ಮಾಡಿದ ಘಟನೆ ನಡೆದಿದೆ. ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿ ರಕ್ಷಣೆ ಮಾಡಿದ್ದಾರೆ. ಪಶ್ಚಿಮ ಬಂಗಾಳದ 25 ವರ್ಷದ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಕಿಂಗ್ ಪಿನ್ ಆಶಾ (38) ವಶಕ್ಕೆ ಪಡೆಯಲಾಗಿದೆ. ತಲೆಮರೆಸಿಕೊಂಡಿರುವ ರಾಜುಗೆ ತಲಾಷ್ ನೀಡಲಾಗಿದೆ. ಹಣ, ಎರಡು ಮೊಬೈಲ್ ಹಾಗೂ ಕಾಂಡೋಮ್ ಬಾಕ್ಸ್ ಜಪ್ತಿ ಮಾಡಲಾಗಿದೆ. ಮೊಬೈಲ್ ಕರೆಗಳ ಮುಖಾಂತರವಾಗಿ ಗಿರಾಕಿಗಳನ್ನ ಕರೆಸಿಕೊಂಡು ಹಣ ಸಂಪಾದನೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇಲ್ಲಿನ ವೀರಭದ್ರೇಶ್ವರ ನಗರ ಪ್ರಸನ್ನ ಬಡಾವಣೆ ಕಟ್ಟಡದ 2ನೇ ಮಹಡಿಯಲ್ಲಿ ಹುಡುಗಿಯರನ್ನು ಇಟ್ಟುಕೊಂಡು ಮೊಬೈಲ್ ಕರೆಗಳ ಮೂಲಕ ಗಿರಾಕಿಗಳನ್ನು ಬರಮಾಡಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿತ್ತು. ತಮ್ಮ ಜೊತೆ ಬಂದರೆ ಸ್ಥಳ ತೋರಿಸುವುದಾಗಿ ಮಾಹಿತಿಯನ್ನು ತಿಳಿಸಿದ ಮೇರೆಗೆ ಮೇಲಾಧಿಕಾರಿಗಳಿಗೆ ತಿಳಿಸಿ, ಅನುಮತಿಯನ್ನು ಪಡೆದುಕೊಂಡು ಇಬ್ಬರು ಆ ವಿಳಾಸದ ಬಳಿ ಹೋಗಿ ಮನೆಯ ಮೇಲೆ ದಾಳಿ ನಡೆಸಿದ್ದಾರೆ.

ಆ ವೇಳೆ, ಮನೆಯಲ್ಲಿದ್ದ ಒಬ್ಬಾತ ತಪ್ಪಿಸಿಕೊಂಡಿದ್ದಾನೆ. ನಂತರ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.  ನೊಂದ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಬಡಕುಟುಂಬದ ಹೆಣು ಮಕ್ಕಳಿಗೆ ಹೆಚ್ಚಿನ ಸಂಬಳ ಬರುವ ಕೆಲಸ ಕೊಡಿಸುವುದಾಗಿ ನಂಬಿಸಿ ಮಾನವಸಾಗಣೆ ಮಾಡಿಕೊಂಡು ಬಂದು, ವೇಶ್ಯಾವಾಟಿಕೆಯಲ್ಲಿ ತೊಡಗಿದರೆ ಹೆಚ್ಚಿನ ಹಣ ಸಂಪಾದನೆ ಮಾಡಬಹುದು ಎಂದು ಅಮೀಷ ತೋರಿಸಿ, ಗಿರಾಕಿಗಳೊಂದಿಗೆ ವೇಶ್ಯಾವಾಟಿಕೆಯಲ್ಲಿ ತೊಡಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಬೆಂಗಳೂರು: ನೈಜೀರಿಯಾ ಮೂಲದ ವಿಕ್ಟರ್ ಕೊಂದಿದ್ದ ಮೂವರು ವಶಕ್ಕೆ ಬೆಂಗಳೂರಿನಲ್ಲಿ ವಿದೇಶಿ ಪ್ರಜೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನೈಜೀರಿಯಾ ಮೂಲದ ವಿಕ್ಟರ್ ಕೊಂದಿದ್ದ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಕಮ್ಮನಹಳ್ಳಿ ಕುಳ್ಳಪ್ಪ ಸರ್ಕಲ್​ನಲ್ಲಿ ನಿನ್ನೆ ನಡೆದಿದ್ದ ಹತ್ಯೆ ಕೇಸ್ ಸಂಬಂಧಿಸಿ ಅರುಣ್​​, ನೀಲಕಂಠ, ಫಿಲಿಪ್ ರಾಜ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಯರ್, ಸಿಗರೇಟ್ ವಿಚಾರಕ್ಕೆ ಗಲಾಟೆ ನಡೆದು ಕೊಲೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಬಿಯರ್ ಬಾಟಲಿಯಿಂದ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಗೆ ಮಾಡಲಾಗಿದೆ. ಬಾಣಸವಾಡಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮಂಗಳೂರು: ಗಾಂಜಾ ಸಾಗಿಸ್ತಿದ್ದ ವಿದ್ಯಾರ್ಥಿಗಳ ಬಂಧನ ಸ್ಕೂಟರ್​​ನಲ್ಲಿ ಗಾಂಜಾ ಸಾಗಿಸ್ತಿದ್ದ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಮಂಗಳೂರು ಸಮೀಪದ ಉಳ್ಳಾಲದ ಬಗಂಬಿಲ ಬಳಿ ಸೆರೆ ಹಿಡಿಯಲಾಗಿದೆ. ಕೇರಳ ಮೂಲದ ವಿದ್ಯಾರ್ಥಿ ಆದರ್ಶ್ ಜ್ಯೋತಿ ಹಾಗೂ ಕೊಟ್ಟಾಯಂನ ಲೋಯಲ್ ಜೋಯ್ಸ್ ಬಂಧಿತ ವಿದ್ಯಾರ್ಥಿಗಳು. ಬಂಧಿತ ವಿದ್ಯಾರ್ಥಿಗಳಿಂದ 220 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Crime News: ತಾಯಿ ಮಗಳ ಸರ ಕದಿಯಲು ಯತ್ನ; ಸರಗಳ್ಳರನ್ನು ಚೇಸ್ ಮಾಡಿ ಸೆರೆಹಿಡಿದ ಪೊಲೀಸರು!

ಇದನ್ನೂ ಓದಿ: Crime News: ಒಮಿಕ್ರಾನ್ ಪಾಸಿಟಿವ್ ವ್ಯಕ್ತಿ ಎಸ್ಕೇಪ್ ಪ್ರಕರಣದಲ್ಲಿ ನಾಲ್ವರ ಸೆರೆ, ಬೆಂಗಳೂರಿನಲ್ಲಿ ವಿದೇಶಿ ಪ್ರಜೆಯ ಹತ್ಯೆ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!