AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್​ಗನ್ ಸಮೇತ ಮನೆಗೆ ನುಗ್ಗಿದ ದುಷ್ಕರ್ಮಿಗಳು: ವ್ಯಕ್ತಿಯ ಕತ್ತು ಕೊಯ್ದು ಪರಾರಿ

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ಹಾಡಹಗಲೇ ಪ್ರಾವಿಜನ್ ಸ್ಟೋರ್ ಮಾಲೀಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಏರ್​ಗನ್, ಚಾಕು ಸಮೇತ ಮನೆಗೆ ನುಗ್ಗಿದ ಹಂತಕರು ಕತ್ತು ಕೊಯ್ದು ಕೊಲೆ ಮಾಡಿ ಪರಾರಿ ಆಗಿದ್ದಾರೆ. ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಏರ್​ಗನ್ ಸಮೇತ ಮನೆಗೆ ನುಗ್ಗಿದ ದುಷ್ಕರ್ಮಿಗಳು: ವ್ಯಕ್ತಿಯ ಕತ್ತು ಕೊಯ್ದು ಪರಾರಿ
ಕೊಲೆಯಾದ ವ್ಯಕ್ತಿ
ರಾಮು, ಆನೇಕಲ್​
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 04, 2025 | 4:36 PM

Share

ಆನೇಕಲ್, ನವೆಂಬರ್​ 04: ಚಾಕುವಿನಿಂದ ಪ್ರಾವಿಜನ್ ಸ್ಟೋರ್ ಮಾಲೀಕನ ಕತ್ತು ಕೊಯ್ದು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ (kill) ಮಾಡಿರುವಂತಹ ಘಟನೆ ಮಂಗಳವಾರ ಹಾಡಹಗಲೇ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ನಡೆದಿದೆ. ಮಾದೇಶ್(40) ಕೊಲೆಯಾದ ವ್ಯಕ್ತಿ.

ಏರ್​ಗನ್, ಚಾಕು ಸಮೇತ ಮನೆಗೆ ನುಗ್ಗಿದ್ದ ಹಂತಕರು 

ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮಾದೇಶ್,​ ಪ್ರಾವಿಜನ್ ಸ್ಟೋರ್​​ ಇಟ್ಟುಕೊಂಡಿದ್ದರು. ಇಂದು ಮನೆಯಲ್ಲಿದ್ದಾಗ ಏಕಾಏಕಿ ದುಷ್ಕರ್ಮಿಗಳು ಏರ್​ಗನ್ ಮತ್ತು ಚಾಕು ಸಮೇತ ಮನೆಗೆ ನುಗ್ಗಿ ಹತ್ಯೆಗೈದು ಪರಾರಿ ಆಗಿದ್ದಾರೆ.

ಡಿಸಿಪಿ ನಾರಾಯಣ್ ಹೇಳಿದ್ದಿಷ್ಟು 

ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್​ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಕತ್ತು ಕೊಯ್ದು ಕೊಲೆ ಮಾಡಲಾಗಿದೆ ಎಂದು 112ಗೆ ಫೋನ್​ ಬಂದಿತ್ತು. ಕೂಡಲೇ ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಹರಿತವಾದ ಆಯುಧದಿಂದ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಪಕ್ಕದ ಮನೆಯ ನಿವಾಸಿಯೊಬ್ಬರು ಇದನ್ನ ನೋಡಿದ್ದಾರೆ. ಕೂಡಲೇ ಆರೋಪಿಯನ್ನ ಹಿಡಿಯಲು ಮುಂದಾಗಿದ್ದರು. ಈ ವೇಳೆ ಬೈಕ್ ಅಡ್ಡಗಟ್ಟುವಾಗ ಅವರ ಮೇಲೂ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಘಟನಾ ಸ್ಥಳದಲ್ಲಿ ಬ್ಯಾಗ್, ಹೆಲ್ಮೆಟ್,  ಏರ್ ಪಿಸ್ತೂಲ್ ಮತ್ತು ಮೆಟಲ್ ಡಿಟೆಕ್ಟರ್, ಟಾರ್ಚ್ ಕೂಡ ಪತ್ತೆಯಾಗಿದೆ. ಮನೆಯಲ್ಲಿ ಎರಡು ಲಕ್ಷ ರೂ ಹಣ ಕೂಡ ಇತ್ತು. ಅದನ್ನ ತೆಗೆದುಕೊಂಡು ಹೋಗಿಲ್ಲ ಎಂದರು.

ಇದನ್ನೂ ಓದಿ: ‘ಆಕೆ’ ಗರ್ಭಿಣಿಯಾಗಲು ತಾನಲ್ಲ ಕಾರಣ ಎಂದು ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವಕ!

ಮಾದೇಶ್​, ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಬಾರಂದೂರು ನಿವಾಸಿ. ಕಳೆದ ಹದಿನೈದು ವರ್ಷಗಳಿಂದ ಕಾಚನಾಯಕನಹಳ್ಳಿಯಲ್ಲಿ ವಾಸವಾಗಿದ್ದರು. ಸಿಗರೇಟ್ ವ್ಯಾಪಾರ ಮತ್ತು ಪ್ರಾವಿಜನ್ ಸ್ಟೋರ್​​ ಇಟ್ಟುಕೊಂಡಿದ್ದರು. ಊರಿನಲ್ಲಿ ಜಮೀನು ಮಾರಾಟ ಮಾಡಿ ಇಲ್ಲಿ ಹೊಸ ಮನೆ ಕಟ್ಟುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Bengaluru: ಹತ್ಯೆಯಾದವನ ಬರ್ತ್​ಡೇ ದಿನವೇ ಹಂತಕರಿಗೆ ಜೀವಾವಧಿ ಶಿಕ್ಷೆ

ಇತ್ತೀಚೆಗೆ ಗ್ಯಾಂಗ್ರೀನ್ ಆಗಿ ಕಾಲಿಗೆ ಗಾಯವಾಗಿ, ಮನೆಯಲ್ಲೇ ಇದ್ದರು. ಬೈಕ್​ನಲ್ಲಿ ಒಬ್ಬನೇ ಬಂದು ಕೃತ್ಯ ಎಸಗಿ ಹೋಗಿದ್ದಾನೆ. ಪರಿಚಿತರೇ ಮಾಡಿದ್ದಾರಾ ಅಥವಾ ಯಾವ ಉದ್ದೇಶಕ್ಕೆ ಮಾಡಲಾಗಿದೆ ಎಂದು ತನಿಖೆ ನಡೆಯುತ್ತಿದೆ. ಎಸಿಪಿ ಸತೀಶ್ ನೇತೃತ್ವದಲ್ಲಿ ಆರೋಪಿಯ ಪತ್ತೆಗೆ ಮೂರು ತಂಡಗಳನ್ನ ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 4:28 pm, Tue, 4 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್