AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್​ಗನ್ ಸಮೇತ ಮನೆಗೆ ನುಗ್ಗಿದ ದುಷ್ಕರ್ಮಿಗಳು: ವ್ಯಕ್ತಿಯ ಕತ್ತು ಕೊಯ್ದು ಪರಾರಿ

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ಹಾಡಹಗಲೇ ಪ್ರಾವಿಜನ್ ಸ್ಟೋರ್ ಮಾಲೀಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಏರ್​ಗನ್, ಚಾಕು ಸಮೇತ ಮನೆಗೆ ನುಗ್ಗಿದ ಹಂತಕರು ಕತ್ತು ಕೊಯ್ದು ಕೊಲೆ ಮಾಡಿ ಪರಾರಿ ಆಗಿದ್ದಾರೆ. ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಏರ್​ಗನ್ ಸಮೇತ ಮನೆಗೆ ನುಗ್ಗಿದ ದುಷ್ಕರ್ಮಿಗಳು: ವ್ಯಕ್ತಿಯ ಕತ್ತು ಕೊಯ್ದು ಪರಾರಿ
ಕೊಲೆಯಾದ ವ್ಯಕ್ತಿ
ರಾಮು, ಆನೇಕಲ್​
| Edited By: |

Updated on:Nov 04, 2025 | 4:36 PM

Share

ಆನೇಕಲ್, ನವೆಂಬರ್​ 04: ಚಾಕುವಿನಿಂದ ಪ್ರಾವಿಜನ್ ಸ್ಟೋರ್ ಮಾಲೀಕನ ಕತ್ತು ಕೊಯ್ದು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ (kill) ಮಾಡಿರುವಂತಹ ಘಟನೆ ಮಂಗಳವಾರ ಹಾಡಹಗಲೇ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ನಡೆದಿದೆ. ಮಾದೇಶ್(40) ಕೊಲೆಯಾದ ವ್ಯಕ್ತಿ.

ಏರ್​ಗನ್, ಚಾಕು ಸಮೇತ ಮನೆಗೆ ನುಗ್ಗಿದ್ದ ಹಂತಕರು 

ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮಾದೇಶ್,​ ಪ್ರಾವಿಜನ್ ಸ್ಟೋರ್​​ ಇಟ್ಟುಕೊಂಡಿದ್ದರು. ಇಂದು ಮನೆಯಲ್ಲಿದ್ದಾಗ ಏಕಾಏಕಿ ದುಷ್ಕರ್ಮಿಗಳು ಏರ್​ಗನ್ ಮತ್ತು ಚಾಕು ಸಮೇತ ಮನೆಗೆ ನುಗ್ಗಿ ಹತ್ಯೆಗೈದು ಪರಾರಿ ಆಗಿದ್ದಾರೆ.

ಡಿಸಿಪಿ ನಾರಾಯಣ್ ಹೇಳಿದ್ದಿಷ್ಟು 

ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್​ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಕತ್ತು ಕೊಯ್ದು ಕೊಲೆ ಮಾಡಲಾಗಿದೆ ಎಂದು 112ಗೆ ಫೋನ್​ ಬಂದಿತ್ತು. ಕೂಡಲೇ ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಹರಿತವಾದ ಆಯುಧದಿಂದ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಪಕ್ಕದ ಮನೆಯ ನಿವಾಸಿಯೊಬ್ಬರು ಇದನ್ನ ನೋಡಿದ್ದಾರೆ. ಕೂಡಲೇ ಆರೋಪಿಯನ್ನ ಹಿಡಿಯಲು ಮುಂದಾಗಿದ್ದರು. ಈ ವೇಳೆ ಬೈಕ್ ಅಡ್ಡಗಟ್ಟುವಾಗ ಅವರ ಮೇಲೂ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಘಟನಾ ಸ್ಥಳದಲ್ಲಿ ಬ್ಯಾಗ್, ಹೆಲ್ಮೆಟ್,  ಏರ್ ಪಿಸ್ತೂಲ್ ಮತ್ತು ಮೆಟಲ್ ಡಿಟೆಕ್ಟರ್, ಟಾರ್ಚ್ ಕೂಡ ಪತ್ತೆಯಾಗಿದೆ. ಮನೆಯಲ್ಲಿ ಎರಡು ಲಕ್ಷ ರೂ ಹಣ ಕೂಡ ಇತ್ತು. ಅದನ್ನ ತೆಗೆದುಕೊಂಡು ಹೋಗಿಲ್ಲ ಎಂದರು.

ಇದನ್ನೂ ಓದಿ: ‘ಆಕೆ’ ಗರ್ಭಿಣಿಯಾಗಲು ತಾನಲ್ಲ ಕಾರಣ ಎಂದು ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವಕ!

ಮಾದೇಶ್​, ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಬಾರಂದೂರು ನಿವಾಸಿ. ಕಳೆದ ಹದಿನೈದು ವರ್ಷಗಳಿಂದ ಕಾಚನಾಯಕನಹಳ್ಳಿಯಲ್ಲಿ ವಾಸವಾಗಿದ್ದರು. ಸಿಗರೇಟ್ ವ್ಯಾಪಾರ ಮತ್ತು ಪ್ರಾವಿಜನ್ ಸ್ಟೋರ್​​ ಇಟ್ಟುಕೊಂಡಿದ್ದರು. ಊರಿನಲ್ಲಿ ಜಮೀನು ಮಾರಾಟ ಮಾಡಿ ಇಲ್ಲಿ ಹೊಸ ಮನೆ ಕಟ್ಟುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Bengaluru: ಹತ್ಯೆಯಾದವನ ಬರ್ತ್​ಡೇ ದಿನವೇ ಹಂತಕರಿಗೆ ಜೀವಾವಧಿ ಶಿಕ್ಷೆ

ಇತ್ತೀಚೆಗೆ ಗ್ಯಾಂಗ್ರೀನ್ ಆಗಿ ಕಾಲಿಗೆ ಗಾಯವಾಗಿ, ಮನೆಯಲ್ಲೇ ಇದ್ದರು. ಬೈಕ್​ನಲ್ಲಿ ಒಬ್ಬನೇ ಬಂದು ಕೃತ್ಯ ಎಸಗಿ ಹೋಗಿದ್ದಾನೆ. ಪರಿಚಿತರೇ ಮಾಡಿದ್ದಾರಾ ಅಥವಾ ಯಾವ ಉದ್ದೇಶಕ್ಕೆ ಮಾಡಲಾಗಿದೆ ಎಂದು ತನಿಖೆ ನಡೆಯುತ್ತಿದೆ. ಎಸಿಪಿ ಸತೀಶ್ ನೇತೃತ್ವದಲ್ಲಿ ಆರೋಪಿಯ ಪತ್ತೆಗೆ ಮೂರು ತಂಡಗಳನ್ನ ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 4:28 pm, Tue, 4 November 25

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ