AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ

ಬೆಂಗಳೂರಿನ ರಾಮಮೂರ್ತಿನಗರದಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಮತ್ತು ಹತ್ಯೆ ನಡೆದಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ ಎಂಬಾತ ಆರೋಪಿಯಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಘಟನೆ ಸೋಮವಾರ ರಾತ್ರಿ ನಡೆದಿದ್ದು, ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ.

ಬೆಂಗಳೂರಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: ವಿವೇಕ ಬಿರಾದಾರ|

Updated on:Jan 15, 2025 | 7:09 AM

Share

ಬೆಂಗಳೂರು, ಜನವರಿ 14: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ (Bengaluru) ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೇಪಾಳ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ 7.30ರ ಸುಮಾರಿಗೆ ಸುಮಾರಿಗೆ ಘಟನೆ ನಡೆದಿದೆ.

ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವೆಸಗುವ ವೇಳೆ ಬಾಲಕಿ ನರಳಿ ನರಳಿ ಪ್ರಾಣ ಬಿಟ್ಟಿದ್ದಾಳೆ. ಸದ್ಯ, ರಾಮಮೂರ್ತಿ ನಗರ ಠಾಣೆ ಪೊಲೀಸರು ಆರೋಪಿ ಅಭಿಷೇಕ್​ನನ್ನು ಬಂಧಿಸಿದ್ದಾರೆ. ಇನ್ನು, ಅಭಿಷೇಕ್​ ಕುಮಾರ್​ ಕೂಡ ಗಾರೆ ಕೆಲಸ ಮಾಡಿಕೊಂಡಿದ್ದನು ಎಂದು ತಿಳಿದು ಬಂದಿದೆ.

ನಡೆದಿದ್ದು ಏನು?

ಆರೋಪಿ ಅಭಿಷೇಕ್​ ಕುಮಾರ್​ ಇದೇ ಕಟ್ಟಡದಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿಕೊಂಡು ಇದ್ದನು. ಮೃತ ಬಾಲಕಿ ಮತ್ತು ದಂಪತಿ ಕೂಡಾ ಇಲ್ಲೇ ವಾಸವಾಗಿದ್ದರು. ಸಂಕ್ರಾಂತಿ ಹಬ್ಬ ಸಹಿ ತಿಂಡಿ ಮಾಡುವಂತೆ ಬಾಲಕಿ ಅಮ್ಮನನ್ನು ಕೇಳಿದ್ದಾಳೆ. ಹೀಗಾಗಿ ತಾಯಿ ಮಗುವನ್ನು ಕರೆದುಕೊಂಡು ಸಂಜೆ 5 ಗಂಟೆ ಹೊತ್ತಿಗೆ, ನಾಲ್ಕನೇ ಮಹಡಿಗೆ ಹೋಗಿದ್ದಾರೆ. ಅಲ್ಲಿ ಬಿದ್ದಿದ್ದ ಸೆಂಟ್ರಿಂಗ್‌ ಕಟ್ಟಿಗೆ ತರಲು ಹೋಗಿದ್ದರು.

ಅಮ್ಮನ ಹಿಂದೆಯೇ ಹೋದ ಬಾಲಕಿ ಒಂದನೇ ಮಹಡಿಯಲ್ಲಿ ಆಟ ಆಡುತ್ತಾ ನಿಂತು ಬಿಟ್ಟಿತ್ತು. ಅಮ್ಮ ಕೂಡ ಅಲ್ಲಿಯೇ ಬಿಟ್ಟು ಹೋಗಿದ್ದರು. ಆದರೆ, ತಾಯಿ ವಾಪಸ್‌ ಬರುತ್ತಿದ್ದಂತೆ ಶಾಕ್ ಎದುರಾಗಿತ್ತು. ಅಭಿಷೇಕ್​ ಬಾಲಕಿಯ ಮೇಲೆ ಮಲಗಿದ್ದನು. ಜೋರಾಗಿ ಕಿರುಚಿಕೊಂಡ ತಾಯಿ, ಈ ಅಭಿಷೇಕ್​ ಕುಮಾರ್​ಗೆ ಕಟ್ಟಿಗೆಯಿಂದಲೇ ಹೊಡೆದರು ಬಳಿಕ ಮಗುವನ್ನ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಬಾಲಕಿ ಪ್ರಾಣ ಬಿಟ್ಟಿದ್ದಳು.

ಇನ್ನು ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆಯಿಂದ ಕೆರಳಿದ ನೇಪಾಳ ಮೂಲದವರು ಆಕ್ರೋಶ ಹೊರಹಾಕಿದರು. ರಾಮಮೂರ್ತಿನಗರ ಠಾಣೆ ಮುಂದೆ ಧರಣಿ ನಡೆಸಿ, ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಒತ್ತಾಯಿಸಿ ಪ್ರತಿಭಟಿಸಿದರು. ನೂರಾರು ಸಂಖ್ಯೆಯಲ್ಲಿ ಆಕ್ರೋಶಿತರು ಜಮಾಯಿಸುತ್ತಿದ್ದಂತೆ ಪ್ರತಿಭಟನಾಕಾರರನ್ನು ಪೊಲೀಸರು ಚದುರಿಸಿದರು.

ಆರೋಪಿ ಅಭಿಷೇಕ್‌ ಕೈಗೆ ಕೋಳ ತೊಡಿಸಿರೋ ರಾಮಮೂರ್ತಿ ನಗರ ಪೊಲೀಸರು, ಪೋಕ್ಸೋ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:24 am, Tue, 14 January 25

Follow Us
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'