AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ

ಬೆಂಗಳೂರಿನ ರಾಮಮೂರ್ತಿನಗರದಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಮತ್ತು ಹತ್ಯೆ ನಡೆದಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ ಎಂಬಾತ ಆರೋಪಿಯಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಘಟನೆ ಸೋಮವಾರ ರಾತ್ರಿ ನಡೆದಿದ್ದು, ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ.

ಬೆಂಗಳೂರಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on:Jan 15, 2025 | 7:09 AM

Share

ಬೆಂಗಳೂರು, ಜನವರಿ 14: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ (Bengaluru) ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೇಪಾಳ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ 7.30ರ ಸುಮಾರಿಗೆ ಸುಮಾರಿಗೆ ಘಟನೆ ನಡೆದಿದೆ.

ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವೆಸಗುವ ವೇಳೆ ಬಾಲಕಿ ನರಳಿ ನರಳಿ ಪ್ರಾಣ ಬಿಟ್ಟಿದ್ದಾಳೆ. ಸದ್ಯ, ರಾಮಮೂರ್ತಿ ನಗರ ಠಾಣೆ ಪೊಲೀಸರು ಆರೋಪಿ ಅಭಿಷೇಕ್​ನನ್ನು ಬಂಧಿಸಿದ್ದಾರೆ. ಇನ್ನು, ಅಭಿಷೇಕ್​ ಕುಮಾರ್​ ಕೂಡ ಗಾರೆ ಕೆಲಸ ಮಾಡಿಕೊಂಡಿದ್ದನು ಎಂದು ತಿಳಿದು ಬಂದಿದೆ.

ನಡೆದಿದ್ದು ಏನು?

ಆರೋಪಿ ಅಭಿಷೇಕ್​ ಕುಮಾರ್​ ಇದೇ ಕಟ್ಟಡದಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿಕೊಂಡು ಇದ್ದನು. ಮೃತ ಬಾಲಕಿ ಮತ್ತು ದಂಪತಿ ಕೂಡಾ ಇಲ್ಲೇ ವಾಸವಾಗಿದ್ದರು. ಸಂಕ್ರಾಂತಿ ಹಬ್ಬ ಸಹಿ ತಿಂಡಿ ಮಾಡುವಂತೆ ಬಾಲಕಿ ಅಮ್ಮನನ್ನು ಕೇಳಿದ್ದಾಳೆ. ಹೀಗಾಗಿ ತಾಯಿ ಮಗುವನ್ನು ಕರೆದುಕೊಂಡು ಸಂಜೆ 5 ಗಂಟೆ ಹೊತ್ತಿಗೆ, ನಾಲ್ಕನೇ ಮಹಡಿಗೆ ಹೋಗಿದ್ದಾರೆ. ಅಲ್ಲಿ ಬಿದ್ದಿದ್ದ ಸೆಂಟ್ರಿಂಗ್‌ ಕಟ್ಟಿಗೆ ತರಲು ಹೋಗಿದ್ದರು.

ಅಮ್ಮನ ಹಿಂದೆಯೇ ಹೋದ ಬಾಲಕಿ ಒಂದನೇ ಮಹಡಿಯಲ್ಲಿ ಆಟ ಆಡುತ್ತಾ ನಿಂತು ಬಿಟ್ಟಿತ್ತು. ಅಮ್ಮ ಕೂಡ ಅಲ್ಲಿಯೇ ಬಿಟ್ಟು ಹೋಗಿದ್ದರು. ಆದರೆ, ತಾಯಿ ವಾಪಸ್‌ ಬರುತ್ತಿದ್ದಂತೆ ಶಾಕ್ ಎದುರಾಗಿತ್ತು. ಅಭಿಷೇಕ್​ ಬಾಲಕಿಯ ಮೇಲೆ ಮಲಗಿದ್ದನು. ಜೋರಾಗಿ ಕಿರುಚಿಕೊಂಡ ತಾಯಿ, ಈ ಅಭಿಷೇಕ್​ ಕುಮಾರ್​ಗೆ ಕಟ್ಟಿಗೆಯಿಂದಲೇ ಹೊಡೆದರು ಬಳಿಕ ಮಗುವನ್ನ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಬಾಲಕಿ ಪ್ರಾಣ ಬಿಟ್ಟಿದ್ದಳು.

ಇನ್ನು ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆಯಿಂದ ಕೆರಳಿದ ನೇಪಾಳ ಮೂಲದವರು ಆಕ್ರೋಶ ಹೊರಹಾಕಿದರು. ರಾಮಮೂರ್ತಿನಗರ ಠಾಣೆ ಮುಂದೆ ಧರಣಿ ನಡೆಸಿ, ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಒತ್ತಾಯಿಸಿ ಪ್ರತಿಭಟಿಸಿದರು. ನೂರಾರು ಸಂಖ್ಯೆಯಲ್ಲಿ ಆಕ್ರೋಶಿತರು ಜಮಾಯಿಸುತ್ತಿದ್ದಂತೆ ಪ್ರತಿಭಟನಾಕಾರರನ್ನು ಪೊಲೀಸರು ಚದುರಿಸಿದರು.

ಆರೋಪಿ ಅಭಿಷೇಕ್‌ ಕೈಗೆ ಕೋಳ ತೊಡಿಸಿರೋ ರಾಮಮೂರ್ತಿ ನಗರ ಪೊಲೀಸರು, ಪೋಕ್ಸೋ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:24 am, Tue, 14 January 25

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್