ಬೆಂಗಳೂರು: ತಂದೆಯ ಕೊಲೆ ಪ್ರತೀಕಾರಕ್ಕಾಗಿ ಮಾವನನ್ನು ಕೊಂದ ಪುತ್ರ

ಬೆಂಗಳೂರಿನಲ್ಲಿ ಭೀಕರ ಘಟನೆಯೊಂದು ನಡೆದಿದೆ. ತನ್ನ ತಂದೆಯನ್ನು ಕೊಲೆ ಮಾಡಿದ್ದ ಪ್ರತೀಕಾರವಾಗಿ ಪುತ್ರ ಸ್ವಂತ ಸೋದರ ಮಾವನನ್ನು ಕೊಲೆ ಮಾಡಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಈ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಠಾಣೆ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು: ತಂದೆಯ ಕೊಲೆ ಪ್ರತೀಕಾರಕ್ಕಾಗಿ ಮಾವನನ್ನು ಕೊಂದ ಪುತ್ರ
ರಾಮಮೂರ್ತಿ ನಗರ ಪೊಲೀಸ್​ ಠಾಣೆ
Edited By:

Updated on: May 05, 2025 | 8:28 PM

ಬೆಂಗಳೂರು, ಮೇ 05: ತಂದೆಯ ಕೊಲೆ ಪ್ರತೀಕಾರಕ್ಕಾಗಿ ಪುತ್ರ ತನ್ನ ಮಾವನನ್ನು (Father in Law) ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು (Bengaluru) ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಟಿನ್ ಫ್ಯಾಕ್ಟರಿ ಬಳಿ ನಡೆದಿದೆ. ಸಿರಾಜ್ ​(32) ಕೊಲೆಯಾದ ವ್ಯಕ್ತಿ. ಫಹಾದ್ ಕೊಲೆ ಮಾಡಿದ ಆರೋಪಿ. ಆರೋಪಿ ಫಹಾದ್​ ಚಿಕ್ಕವನಿದ್ದಾಗ ಆತನ ಕಣ್ಣೆದುರೇ ತಂದೆ ಅನ್ಸರ್ ಪಾಷಾನನ್ನು ಸಿರಾಜ್ ಕೊಚ್ಚಿ ಕೊಂದಿದ್ದನು. ತನ್ನ ತಂದೆಯ ಸಾವಿಗೆ ಪ್ರತಿಕಾರಕ್ಕಾಗಿ 16 ವರ್ಷಗಳ ಕಾಲ ಕಾಯ್ದು ಮಾವ ಸಿರಾಜ್​ನನ್ನು ಫಹಾದ್ ಕೊಲೆ ಮಾಡಿದ್ದಾನೆ.

ಅನ್ಸರ್ ಪಾಷಾ ಹತ್ಯೆ ಪ್ರಕರಣದಲ್ಲಿ ಸಿರಾಜ್ 10 ವರ್ಷ ಜೈಲಿನಲ್ಲಿದ್ದನು. ಸಿರಾಜ್​ ಜೈಲಿಂದ ಹೊರಗೆ ಬಂದ ಮೇಲೆ ತನ್ನ ಪ್ರತಿಕಾರವನ್ನು ಫಹಾದ್​ ತೀರಿಸಿಕೊಂಡಿದ್ದಾನೆ.  ಕೊಲೆಯಾದ ಸಿರಾಜ್, ಅನ್ಸರ್​ ಪಾಷಾನ ಸಹೋದರಿಯ ಪುತ್ರನಾಗಿದ್ದನು. ಕೊಲೆಯಾದ ಸಿರಾಜ್ ಹೋಟೆಲ್​ವೊಂದರಲ್ಲಿ ಉಳಿದುಕೊಂಡಿದ್ದನು. ರವಿವಾರ (ಮೇ.4) ರಂದು ರಾತ್ರಿ ನಡುರಸ್ತೆಯಲ್ಲಿ ಅಟ್ಟಾಡಿಸಿ ಸಿರಾಜ್​ನನ್ನು ಫಹಾದ್ ಕೊಲೆ ಮಾಡಿದ್ದಾನೆ. ಆರೋಪಿ ಫಹಾದ್​​ನನ್ನು ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ.

ಮನನೊಂದು ಯುವಕ ಆತ್ಮಹತ್ಯೆ

ರಾಯಚೂರು: ಅಪ್ಪ- ಅಮ್ಮ ಬುದ್ಧಿಮಾತು ಹೇಳಿದಕ್ಕೆ ಮನನೊಂದು ಯುವಕ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ತಾಲ್ಲೂಕಿನ ಶಕ್ತಿನಗರದಲ್ಲಿ ನಡೆದಿದೆ.
ಸಂದೀಪ್ ಕುಮಾರ್ (21) ಮೃತ ದುರ್ವೈವಿ. ಸಂದೀಪ್ ಕುಮಾರ್ ಖಾಸಗಿ ಕಂಪನಿಯಲ್ಲಿ ಹೆಲ್ಪರ್ ಆಗಿದ್ದರು.

ಇದನ್ನೂ ಓದಿ
ಲವ್ವರ್​ ಜತೆ ಪತ್ನಿ ಚಕ್ಕಂದ; ಕಣ್ಣಾರೆ ಕಂಡ ಪತಿ ಮಾಡಿದ್ದೇನು ಗೊತ್ತಾ?
ಪಲ್ಯ‌, ಸಾಂಬಾರ್ ಸರಿ ಮಾಡಲ್ಲ ಎಂದು ಹೆಂಡ್ತಿಯನ್ನೇ ಕೊಂದ ಪತಿ
ವೇಷ ಬದಲಿಸಿಕೊಂಡು ಬಂದು ಅತ್ತೆಯ ಕಣ್ಣಿಗೆ ಖಾರದಪುಡಿ ಎರಚಿ ಒಡವೆ ದೋಚಿದ ಅಳಿಯ
ಅಪ್ರಾಪ್ತೆಯನ್ನ ಕರೆದೊಯ್ದು ಅತ್ಯಾಚಾರ ಎಸಗಿದ ಇಬ್ಬರು ಸ್ನೇಹಿತರು!

ಸಂದೀಪ್ ಕುಮಾರ್ ನಿತ್ಯ ಮನೆಗೆ ತಡವಾಗಿ ಬರುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೋಷಕರು ಬೈದು ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದು ಸಂದೀಪ್​ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಕ್ತಿನಗರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ತನಗಿಂತ 2 ವರ್ಷ ದೊಡ್ಡವಳೊಂದಿಗೆ ಲವ್​: ವಾರ್ನ್​ ಮಾಡಿದ್ರೂ ಯುವತಿ ಹಿಂದೆ ಬಿದ್ದ ಯುವಕ ಹತ್ಯೆ

ಅಪಘಾತ, ಬೈಕ್​ ಸವಾರ ಸಾವು

ಹಾವೇರಿ: ಹಾವೇರಿ ತಾಲೂಕಿನ ಗೌರಾಪುರ ಗ್ರಾಮದ ಬಳಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಾನಗಲ್ ತಾಲೂಕಿನ ವರ್ದಿ ಗ್ರಾಮದ ನಿವಾಸಿ ಗಾಯಗೊಂಡಿದ್ದಾನೆ. ನಾಗರಾಜ್ ಪವಾಡಿ (35) ಮೃತ ಬೈಕ್ ಸವಾರ. ಹೊಸ ಬೈಕ್ ಖರೀದಿಸಿ ಊರಿಗೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:29 pm, Mon, 5 May 25