ರಿಚ್​ಮಂಡ್ ಟೌನ್​ನಲ್ಲಿ ಹಾಡಹಗಲೇ ಚಾಕು ತೋರಿಸಿ ದರೋಡೆಗೆ ಯತ್ನ: ದುಷ್ಕರ್ಮಿ ಸ್ಥಳೀಯರ ಕಣ್ಣೆದುರೇ ಪರಾರಿ

ಇಡೀ ಘಟನೆಯ ದೃಶ್ಯಾವಳಿ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ. ಈಕುರಿತು ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಿಚ್​ಮಂಡ್ ಟೌನ್​ನಲ್ಲಿ ಹಾಡಹಗಲೇ ಚಾಕು ತೋರಿಸಿ ದರೋಡೆಗೆ ಯತ್ನ: ದುಷ್ಕರ್ಮಿ ಸ್ಥಳೀಯರ ಕಣ್ಣೆದುರೇ ಪರಾರಿ
ವಿಡಿಯೋದ ದೃಶ್ಯ
Follow us
| Updated By: guruganesh bhat

Updated on:Sep 01, 2021 | 6:36 PM

ಬೆಂಗಳೂರು: ನಗರದ ರಿಚ್ಮಂಡ್ ಟೌನ್​ನಲ್ಲಿ ಅಪರಿಚಿತನೋರ್ವ ಹಾಡಹಗಲೇ ಚಾಕು ತೋರಿಸಿ ಸುಲಿಗೆಗೆ ಪ್ರಯತ್ನಿಸಿದ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಕ್ಯಾಬ್ ಒಂದಕ್ಕೆ ನುಗ್ಗಿ ಚಾಲಕನಿಗೆ ಚಾಕು ತೋರಿಸಿ ಯುವಕನೋರ್ವ ಸುಲಿಗೆ ಮಾಡಲು ಯತ್ನಿಸಿದ್ದಾನೆ. ಚಾಕು ಕಂಡು ಕ್ಯಾಬ್ ಚಾಲಕ ಗಾಬರಿಯಿಂದ ಕಿರುಚಾಡಿದ್ದಾನೆ. ಇದೇ ವೇಳೆ ಡ್ರೈವರ್​ಗೆ ಚಾಕುವಿನಿಂದ ಇರಿಯಲು ದುಷ್ಕರ್ಮಿ ಯತ್ನಿಸಿದ್ದಾನೆ. ಈ ವೇಳೆ ಹತ್ತಿರದಲ್ಲೇ ಇದ್ದ ಸ್ಥಳೀಯರು ದರೋಡೆಕೋರನನ್ನು ಹಿಡಿದು ಥಳಿಸಿದ್ದಾರೆ. ಆದರೆ ಹಿಡಿಯಲು ಯತ್ನಿಸಿದ ಸ್ಥಳೀಯರಿಗೂ ದುಷ್ಕರ್ಮಿ ಚಾಕು ತೋರಿಸಿ ಧಮ್ಕಿ ಹಾಕಿದ್ದಾನೆ. ಹಿಡಿಯಲು ಯತ್ನಿಸಿದವರಿಂದ ತಪ್ಪಿಸಿಕೊಳ್ಳಲು ನಡುರಸ್ತೆಯಲ್ಲೇ ಅಡ್ಡಾದಿಡ್ಡಿ ಓಡಿದ್ದಾನೆ. ಕೊನೆಗೂ ಸ್ಥಳೀಯರಿಂದ ತಪ್ಪಿಸಿಕೊಂಡು ಓಡಿ ಪಾರಾಗಿದ್ದಾನೆ. ಇಡೀ ಘಟನೆಯ ದೃಶ್ಯಾವಳಿ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ. ಈಕುರಿತು ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆ ಹೆಚ್ಚಳ; ಸರಸ್ವತಿ ನಗರಕ್ಕೆ ಹೊಸ ಪೊಲೀಸ್ ಠಾಣೆ ಮಂಜೂರು ಬೆಂಗಳೂರು ನಗರದ ಪಶ್ಚಿಮ ವಿಭಾಗ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಕಾರಣ ಗೋವಿಂದರಾಜ ನಗರದ ಸರಸ್ವತಿ ನಗರದಲ್ಲಿ ನೂತನ ಪೊಲೀಸ್ ಠಾಣೆ ಸ್ಥಾಪಿಸಲು ಸರ್ಕಾರ ಅನುಮತಿ ನೀಡಿ ಆದೇಶ ಪ್ರಕಟಿಸಿದೆ. ಅಪರಾಧ ಪ್ರಕರಣಗಳಾದ ಮೊಬೈಲ್ ಅಪಹರಣ, ಸರಗಳ್ಳತನ, ವಾಹನ ಕಳವು ಪ್ರಕರಣಗಳು ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿವೆ. ವಿಜಯನಗರದಲ್ಲಿ A ಪಟ್ಟಿ ರೌಡಿಶೀಟರ್ 42 ಜನ, ಬಿ ಪಟ್ಟಿ ರೌಡಿಶೀಟರ್ 51, ಒಟ್ಟು 93 ರೌಡಿಶೀಟರ್​ಗಳಿದ್ದಾರೆ. ಹಾಗಾಗಿ ವಿಜಯನಗರ ಠಾಣೆಯನ್ನ ವಿಭಜಿಸಿ ನೂತನ ಪೊಲೀಸ್ ಠಾಣೆ ತೆರೆಯಲು ಮನವಿ ಮಾಡಲಾಗಿತ್ತು. ಮನವಿಯನ್ನು ಪುರಸ್ಕರಿಸಿದ ಸರ್ಕಾರ ಅಪರಾಧ ಪ್ರಕರಣಗಳನ್ನು ತಡೆಯುವ ಕಾರಣದಿಂದ ಹೊಸ ಪೊಲೀಸ್ ಠಾಣೆ ತೆರೆಯಲು ಆದೇಶ ನೀಡಿದೆ.

ಹೆಬ್ಬಗೋಡಿ ಪೊಲೀಸ್ ಠಾಣೆಯ ಗೋಡೆಯಲ್ಲಿ ಬಿರುಕು ಮೆಟ್ರೋ ಕಾಮಗಾರಿಯ ಕಾರಣದಿಂದ ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣೆಯ ಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಕಾಮಗಾರಿ ನಡೆಸುತ್ತಿರುವ ಬಿಎಂಆರ್​ಸಿಎಲ್ ಈಗಾಗಲೇ ಪೊಲೀಸ್ ಠಾಣೆಯನ್ನು ತೆರವುಗೊಳಿಸುವಂತೆ ಸೂಚಿಸಿದೆ. ಆದರೆ ಪೊಲೀಸ್ ಠಾಣೆಯ ಬಳಿಯ ಕಾಮಗಾರಿಯನ್ನು ಮುಂಚಿತವಾಗಿ ಮುಗಿಸಿಕೊಡಲು ಪೊಲೀಸ್ ಸಿಬ್ಬಂದಿ ಮನವಿ ಮಾಡಿದ್ದಾರೆ. ಮೆಟ್ರೋ ಪಿಲ್ಲರ್ ಮಧ್ಯೆಯೇ ಹೆಬ್ಬಗೋಡಿ ಉಪ ವಿಭಾಗ ಪೊಲೀಸ್ ಠಾಣೆಯಿದ್ದು, ಶಬ್ದ ಮಾಲಿನ್ಯದ ಮಧ್ಯೆ ಕೆಲಸ ಮಾಡಲು ಪೊಲೀಸರಿಗೆ ಕಿರಿಕಿರಿಯಾಗುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:

Afghanistan Crisis: ಅಫ್ಘಾನಿಸ್ತಾನದಲ್ಲಿ ಇಂದು ಅಥವಾ ನಾಳೆ ತಾಲಿಬಾನ್ ಸರ್ಕಾರ ರಚನೆ ಸಾಧ್ಯತೆ

ವರ್ಷಪೂರ್ತಿ ಆಗುವ ಮಾಲಿನ್ಯ ಗಣೇಶ ಹಬ್ಬದಂದೇ ನೆನಪಾಗುವುದೇಕೆ? ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಶ್ನೆ

(Bengaluru Richmond Town a man shows knife and try to rob cab driver video viral)

Published On - 6:32 pm, Wed, 1 September 21

ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ