ಜಮೀರ್ ಅಹ್ಮದ್ ಸಂಧಾನಕ್ಕೂ ಬಗ್ಗದ ರೌಡಿಗಳು: ಫೇಸ್​ಬುಕ್​ನಲ್ಲಿ ಬೆದರಿಕೆ ಹಾಕಿದ್ದವನಿಂದ ನಡೆಯಿತು ಭೀಕರ ಕೊಲೆ

ಬೆಂಗಳೂರಿನಲ್ಲಿ ರೌಡಿಶೀಟರ್ ನಾಗನ ಕೊಲೆಯಾಗಿದೆ. ಈ ಕೊಲೆ ಮಾಡಿದ ಆರೋಪಿ ವೆಂಕಟೇಶ್​​ 8 ತಿಂಗಳ ಹಿಂದೆಯೇ ನಿನ್ನನ್ನು ಕೊಲೆ ಮಾಡುತ್ತೇನೆ ಅಂತ ನಾಗ ಫೇಸ್​ಬುಕ್​ ಲೈವ್​ನಲ್ಲಿ ಬೆದರಿಕೆ ಹಾಕಿದ್ದನು. ಬೆದರಿಕೆ ಬಳಿಕ ಸಚಿವ ಜಮೀರ್​ ಅಹ್ಮದ್​ ನಾಗ ಮತ್ತು ವೆಂಕಟೇಶ್​ನನ್ನು ಕರೆಸಿ ಸಂಧಾನ ಮಾಡಿದ್ದರು. ಆದರೂ ಕೂಡ ಕೊಲೆ ನಡೆದಿದೆ.

ಜಮೀರ್ ಅಹ್ಮದ್ ಸಂಧಾನಕ್ಕೂ ಬಗ್ಗದ ರೌಡಿಗಳು: ಫೇಸ್​ಬುಕ್​ನಲ್ಲಿ ಬೆದರಿಕೆ ಹಾಕಿದ್ದವನಿಂದ ನಡೆಯಿತು ಭೀಕರ ಕೊಲೆ
ಜಮೀರ್​ ಅಹ್ಮದ್​ ನೇತೃತ್ವದಲ್ಲಿ ರೌಡಿಗಳ ಸಂಧಾನ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jun 14, 2024 | 7:09 PM

ಬೆಂಗಳೂರು, ಜೂನ್​ 14: ನಗರದಲ್ಲಿ (Bengaluru)  ರೌಡಿಗಳ ಅಟ್ಟಹಾಸ ಮಿತಿ ಮೀರಿದೆ. ಪೊಲೀಸರು ಕಣ್ಮುಚ್ಚಿ ಕುಳತಿದ್ದಾರೆ ಎಂಬ ಅನುಮಾನ ಶುರುವಾಗಿದೆ. ಓರ್ವ​ ರೌಡಿ ಫೇಸ್​ಬುಕ್​ ಲೈವ್​ನಲ್ಲಿ (Facebook Live) ಕೊಲೆ ಬೆದರಿಕೆ ಹಾಕಿದ 8 ತಿಂಗಳಲ್ಲಿ ಹತ್ಯೆ ಮಾಡಿದ್ದಾನೆ. ಫೇಸ್​ಬುಕ್​ ಲೈವ್​​ ಅಲ್ಲಿ ಕೊಲೆ ಬೆದರಿಕೆ ಹಾಕಿದ್ದ ರೌಡಿ ನಾಗನನ್ನು ರೌಡಿ ವೆಂಕಟೇಶ್ ಹತ್ಯೆ ಮಾಡಿದ್ದಾನೆ. ಗುರುವಾರ (ಜೂ.13) ರಂದು ಜ್ಞಾನ ಭಾರತಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ರೌಡಿ ನಾಗ ಬೈಕ್​ ಚಾಲನೆ ಮಾಡುತ್ತ ಫೇಸ್​ಬುಕ್ ಲೈವ್​ನಲ್ಲಿ “ನಿನ್ನೂ ಕೊಲೆ ಮಾಡುವೆ ಇದ್ನ ಸೇವ್​ ಮಾಡಕೊ ಶಿಷ್ಯ. ಬದುಕಬೇಕೆಂದರೆ ಕ್ಷಮೆ ಕೇಳು. ಇಲ್ಲವಾದರೆ ಕೊಲೆ ಮಾಡುವೆ” ಎಂದು ರೌಡಿ ನಾಗ ವೆಂಕಟೇಶ್​ಗೆ ​​ಬೆದರಿಕೆ ಹಾಕಿದ್ದನು. ಇದಾದ ಬಳಿಕ ಸಚಿವ ಜಮೀರ್ ಅಹ್ಮದ್ ಸಮ್ಮುಖದಲ್ಲಿ ಸಂಧಾನ ನಡೆದಿತ್ತು. ಸಚಿವರ ಬಳಿ ರೌಡಿಗಳ ಸಂಧಾನ ನಡೆದ ಬಳಿಕ ಪೊಲೀಸರು ಸೈಲೆಂಟ್ ಆಗಿದ್ದರು. ಆದರೆ, ಗುರುವಾರ ರೌಡಿ ವೆಂಕಟೇಶ್​ ಏಕಾಏಕಿ ಗ್ಯಾಂಗ್​ ಕಟ್ಟಿಕೊಂಡು ಹೋಗಿ ಅಟ್ಯಾಕ್ ಮಾಡಿ ನಾಗ್​​ನನ್ನು ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: ಎದೆ ನೋವೆಂದ ಯುವತಿಗೆ ಪರೀಕ್ಷೆಯ ನೆಪದಲ್ಲಿ ಉಡುಪು ಬಿಚ್ಚಿಸಿ ಮುತ್ತಿಟ್ಟ ಬೆಂಗಳೂರಿನ ವೈದ್ಯ! ಹೈಕೋರ್ಟ್​ನಲ್ಲೂ ಸಿಗಲಿಲ್ಲ ರಿಲೀಫ್

ಓರ್ವ ರೌಡಿ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿದ್ದರೂ, ಪೊಲೀಸರು ಮಾತ್ರ ಕಂಡು ಕಾಣದಂತೆ ಕೂತಿದ್ದು ಮಾತ್ರ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ, ನಗರದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಅನುಮಾನ ಹುಟ್ಟುವಂತೆ ಮಾಡಿದೆ. ಪೊಲೀಸರ ನಿರ್ಲಕ್ಷ್ಯವೆ ರೌಡಿಶೀಟರ್ ನಾಗನ​​ ಬರ್ಬರವಾಗಿ ಹತ್ಯೆಯಾಗಲು ಕಾರಣವಾಯಿತೇ ಎಂಬ ಪ್ರಶ್ನೆ ಮೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:58 pm, Fri, 14 June 24

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು