AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಯುವತಿ ನಗ್ನ ಫೋಟೋ ಕಳಿಸಿ ಹಣಕ್ಕೆ ಬೇಡಿಕೆ; ರೌಡಿಶೀಟರ್, ಸಹಚರರ ಬಂಧಿಸಿದ ಸಿಸಿಬಿ

ಜೈಲಿನಲ್ಲೂ ಕೂಡ ಅಕ್ರಮ ಚಟುವಟಿಕೆಗಳು ನಡೆಯುತ್ತಿದೆ ಎಂದು ಟಿವಿ9 ವರದಿ ಮಾಡಿಕೊಂಡು ಬಂದಿದೆ. ಹಣವೊಂದಿದ್ದರೆ ಸಾಕು ಖೈದಿಗಳು ಸೆರೆಮನೆಯಲ್ಲೂ ರಾಜನಂತೆ ಇರಬಹುದು ಎಂಬುದು ಮತ್ತೊಮ್ಮೆ ಸಾಭೀತಾಗಿದೆ. ಇಲ್ಲೊಬ್ಬ ಜೈಲಿನಿಂದಲೇ ಮಹಿಳೆಯ ಬೆತ್ತಲೆ ಫೋಟೋ ಕಳುಹಿಸಿ ಬ್ಲ್ಯಾಕ್​ಮೇಲ್​ ಮಾಡಿದ್ದ. ಇದೀಗ ಆತನನ್ನು ಹಾಗೂ ಸಹಚರರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಜೈಲಿನಿಂದ ಯುವತಿ ನಗ್ನ ಫೋಟೋ ಕಳಿಸಿ ಹಣಕ್ಕೆ ಬೇಡಿಕೆ; ರೌಡಿಶೀಟರ್, ಸಹಚರರ ಬಂಧಿಸಿದ ಸಿಸಿಬಿ
ಬಂಧಿತರು
Jagadisha B
| Updated By: ಕಿರಣ್ ಹನುಮಂತ್​ ಮಾದಾರ್|

Updated on: Feb 18, 2024 | 9:25 AM

Share

ಬೆಂಗಳೂರು, ಫೆ.18: ಜೈಲಿನಿಂದ ಮಹಿಳೆಯ ಬೆತ್ತಲೆ ಫೋಟೋ ಕಳುಹಿಸಿದ್ದ ರೌಡಿಶೀಟರ್(Rowdy Sheeter) ಹಾಗೂ ಸಹಚರರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪರಿಚಯಸ್ಥ ಮಹಿಳೆಗೆ ಯಲಹಂಕ(Yalahanka) ರೌಡಿಶೀಟರ್ ಮನೋಜ್ ಅಲಿಯಾಸ್​ ಕೆಂಚ ಎಂಬಾತ ಜೈಲಲ್ಲಿ ಕುಳಿತುಕೊಂಡು ಮಾರ್ಫ್ ಮಾಡಿದ ಬೆತ್ತಲೆ ಫೋಟೋ ಕಳುಹಿಸಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ. ಈ ಹಿನ್ನಲೆ ಮನೋಜ್ ಅಲಿಯಾಸ್​ ಕೆಂಚ, ಸುಭಾಷ್ ಹಾಗೂ ಯೋಗೆಶ್ ಎಂಬುವವರನ್ನು ಬಂಧಿಸಲಾಗಿದೆ.

ಘಟನೆ ವಿವರ

ರೌಡಿಶೀಟರ್​​​ ಮನೋಜ್ ಕಳೆದ ವರ್ಷ ಅಗಸ್ಟ್​​ನಲ್ಲಿ ಯುವತಿಯ ತಾಯಿಗೆ ಕರೆ ಮಾಡಿ, ನಿನ್ನ ಮಗಳ ಬೆತ್ತಲೆ ಫೋಟೋವನ್ನು ನಿನ್ನ ಅಳಿಯನಿಗೆ ಕಳುಹಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ. ಇದರಿಂದ ಬೆದರಿದ ಯುವತಿಯ ತಾಯಿ, ರೌಡಿಶೀಟರ್​​​ ಮನೋಜ್​​ಗೆ 40 ಸಾವಿರ ಹಣ ನೀಡಿದ್ದರು. ನಂತರ ಫೆಬ್ರವರಿ 9 ರಂದು ಮನೋಜ್​ ಸಹಚರ ಕಾರ್ತಿಕ್ ಎಂಬಾತ​ ಯುವತಿಯ ತಾಯಿಗೆ ವಾಟ್ಸಪ್ ಮೂಲಕ ಕರೆ ಮಾಡಿ, ನಾನು (ಕಾರ್ತಿಕ್​) ಮನೋಜ್​ ಕಡೆಯ ಹುಡುಗ. ನೀವು 5 ಲಕ್ಷ ರೂ. ಕೊಡದಿದ್ದರೆ ನಿಮ್ಮಗಳ ಮಗಳ ನಗ್ನ ಫೋಟೋವನ್ನು ನಿನ್ನ ಅಳಿಯನಿಗೆ ಕಳಸುತ್ತೇನೆ ಎಂದು ಬ್ಲ್ಯಾಕ್​ಮೇಲ್​ ಮಾಡಿದ್ದಾನೆ.

ಇದನ್ನೂ ಓದಿ:ರೌಡೀಶೀಟರ್​ ಜೈಲಿನಿಂದ ಯುವತಿಯ ನಗ್ನ ಫೋಟೋ ಕಳಿಸಿ ಹಣ ನೀಡುವಂತೆ ಬೆದರಿಕೆ

ಇದಾದ ನಂತರ ಫೆಬ್ರವರಿ 12 ರಂದು ಮನೋಜ್​​ ಜೈಲಿನಿಂದಲೇ ಯುವತಿಯ ತಾಯಿ ವಾಟ್ಸಾಪ್ ಹಾಗೂ ಮೆಸೆಂಜರ್ ಮೂಲಕ ಕರೆ ಮಾಡಿ, ಹಣ ನೀಡದಿದ್ದರೆ ನಿನ್ನ ಮಗಳ ನಗ್ನ ಫೋಟೋ ರಿವೀಲ್ ಮಾಡುತ್ತೇನೆ ಅಂತ ಬೆದರಿಕೆ ಹಾಕಿದ್ದಾನೆ. ಇದರಿಂದ ರೋಸಿ ಹೋದ ಸಂತ್ರಸ್ತರು ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇನ್ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ 67, ಐಪಿಸಿ 34 ಅಂಡ್ 384 ಅಡಿ ಪ್ರಕರಣ ದಾಖಲಾಗಿತ್ತು. ಬಳಿಕ ಈ ಪ್ರಕರಣವನ್ನ ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಜೈಲಿನಲ್ಲಿದ್ದ ಮನೋಜ್ ಅಲಿಯಾಸ್​ ಕೆಂಚನನ್ನ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆದ ಸಿಸಿಬಿ, ಕೆಂಚನಿಗೆ ಸಹಾಯ ಮಾಡಿದ್ದ ಯೊಗೇಶ್ ಹಾಗೂ ಸುಭಾಷ್ ಅವರನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ