AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಸೂಲಿಬೆಲೆ ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಡಿಸೆಂಬರ್ 10 ರಂದು ಸಂಜೆ ಭಾಗ್ಯ, ಆಕೆಯ ಮಗಳು ವರ್ಷಾ ಮತ್ತು ಆಕೆಯ ಅಪ್ರಾಪ್ತ ಮಗ ವೃದ್ಧ ದಂಪತಿಯ ಮನೆಗೆ ಭೇಟಿ ನೀಡಿ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇವನಹಳ್ಳಿ: ಸೂಲಿಬೆಲೆ ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ನರಸಿಂಹ ಮತ್ತು ಅವರ ಪತ್ನಿ ಭಾಗ್ಯ
TV9 Web
| Edited By: |

Updated on: Dec 13, 2023 | 2:39 PM

Share

ಬೆಂಗಳೂರು, ಡಿಸೆಂಬರ್ 13: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಸೂಲಿಬೆಲೆ (Sulibele) ಗ್ರಾಮದಲ್ಲಿ ನಡೆದ ವಯೋವೃದ್ಧ ದಂಪತಿಯ ಹತ್ಯೆ ಪ್ರಕರಣಕ್ಕೆ ಇದೀಗ ದೊಡ್ಡ ತಿರುವು ದೊರೆತಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ದಂಪತಿಯನ್ನು ಸೊಸೆ ಮತ್ತು ಮೊಮ್ಮಕ್ಕಳೇ ಹತ್ಯೆ ಮಾಡಿರುವುದು ಪೊಲೀಸರು ನಡೆಸಿದ ತನಿಖೆಯಿಂದ ಬೆಳಕಿಗೆ ಬಂದಿದೆ. 70ರ ಹರೆಯದ ತಂದೆ ರಾಮಕೃಷ್ಣಪ್ಪ ಮತ್ತು 65 ವರ್ಷದ ತಾಯಿ ಮುನಿರಾಮಕ್ಕ ಅವರ ಕೊಲೆ ಪ್ರಕರಣದ ಪ್ರಮುಖ ಆರೋಪಿ ನರಸಿಂಹ ಎಂಬಾತ ಡಿಸೆಂಬರ್ 10ರಂದು ತನ್ನ ಪತ್ನಿ ಭಾಗ್ಯ ಮತ್ತು ಮಕ್ಕಳು ಸೇರಿ ಇಬ್ಬರನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಪೋಲೀಸರ ಪ್ರಕಾರ, ನಾಲ್ಕು ಹೆಣ್ಣುಮಕ್ಕಳು ಸೇರಿದಂತೆ ತಮ್ಮೆಲ್ಲಾ ಐದು ಮಕ್ಕಳಿಗೆ ಆಸ್ತಿಯನ್ನು ಹಂಚಲು ವೃದ್ಧ ದಂಪತಿ ನಿರ್ಧರಿಸಿದ ನಂತರ ತನ್ನ ಅತ್ತೆಯ ಕೊಲೆಗೆ ಭಾಗ್ಯ ಸಂಚು ಹೂಡಿದ್ದಳು. ಇತ್ತೀಚಿಗೆ ನರಸಿಂಹ ವ್ಯಾಪಾರದಲ್ಲಿ ಅಪಾರ ನಷ್ಟ ಅನುಭವಿಸಿದ್ದರು. ತಂದೆ-ತಾಯಿಯಿಂದ ಆಸ್ತಿ ಪಡೆದು ಸಾಲ ತೀರಿಸುವಂತೆ ಪತಿಗೆ ಭಾಗ್ಯ ಸೂಚಿಸಿದ್ದಾಳೆ. ಇದೇ ವೇಳೆ ನರಸಿಂಹ ಅವರ ಪೋಷಕರು ಆಸ್ತಿಯನ್ನು ಅವರ ನಾಲ್ವರು ಸಹೋದರಿಯರಿಗೂ ನೀಡಲು ಯೋಜಿಸಿದ್ದರು.

ಡಿಸೆಂಬರ್ 10 ರಂದು ಸಂಜೆ ಭಾಗ್ಯ, ಆಕೆಯ ಮಗಳು ವರ್ಷಾ ಮತ್ತು ಆಕೆಯ ಅಪ್ರಾಪ್ತ ಮಗ ವೃದ್ಧ ದಂಪತಿಯ ಮನೆಗೆ ಭೇಟಿ ನೀಡಿ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೂಲಿಬೆಲೆಯ ವಾಲ್ಮೀಕಿ ನಗರದಲ್ಲಿ ವೃದ್ಧ ದಂಪತಿಯನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಕೊಲೆಯಾದ ದಂಪತಿಯ ಪುತ್ರ ನರಸಿಂಹ ಪ್ರಮುಖ ಆರೋಪಿಯಾಗಿದ್ದು, ಆತನನ್ನು ಬಂಧಿಸಲಾಗಿತ್ತು. ತನ್ನ ಪತ್ನಿ ಮತ್ತು ಮಕ್ಕಳು ದಂಪತಿಯನ್ನು ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ನರಸಿಂಹ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ದೇವನಹಳ್ಳಿ: ಆಸ್ತಿಗಾಗಿ ಹೆತ್ತ ತಂದೆ-ತಾಯಿಯ ಕೊಲೆಗೈದ ಆರೋಪದಲ್ಲಿ ಮಗ ಅರೆಸ್ಟ್​​

ಪತಿ ತನ್ನ ವ್ಯಾಪಾರದಲ್ಲಿ ಅಪಾರ ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ನರಸಿಂಹ ಪತ್ನಿ ಭಾಗ್ಯ ಕೊಲೆಗೆ ಸಂಚು ಹೂಡಿದ್ದಳು. ಭಾಗ್ಯ, ಆಕೆಯ ಮಗಳು ವರ್ಷಾ ಮತ್ತು ಆಕೆಯ ಅಪ್ರಾಪ್ತ ಪುತ್ರ ವೃದ್ಧ ದಂಪತಿಯನ್ನು ಕೊಲೆ ಮಾಡಲು ಮನೆಗೆ ಭೇಟಿ ನೀಡಿದ್ದರು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಲದಂಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ