AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಸೂಲಿಬೆಲೆ ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಡಿಸೆಂಬರ್ 10 ರಂದು ಸಂಜೆ ಭಾಗ್ಯ, ಆಕೆಯ ಮಗಳು ವರ್ಷಾ ಮತ್ತು ಆಕೆಯ ಅಪ್ರಾಪ್ತ ಮಗ ವೃದ್ಧ ದಂಪತಿಯ ಮನೆಗೆ ಭೇಟಿ ನೀಡಿ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇವನಹಳ್ಳಿ: ಸೂಲಿಬೆಲೆ ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ನರಸಿಂಹ ಮತ್ತು ಅವರ ಪತ್ನಿ ಭಾಗ್ಯ
TV9 Web
| Edited By: |

Updated on: Dec 13, 2023 | 2:39 PM

Share

ಬೆಂಗಳೂರು, ಡಿಸೆಂಬರ್ 13: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಸೂಲಿಬೆಲೆ (Sulibele) ಗ್ರಾಮದಲ್ಲಿ ನಡೆದ ವಯೋವೃದ್ಧ ದಂಪತಿಯ ಹತ್ಯೆ ಪ್ರಕರಣಕ್ಕೆ ಇದೀಗ ದೊಡ್ಡ ತಿರುವು ದೊರೆತಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ದಂಪತಿಯನ್ನು ಸೊಸೆ ಮತ್ತು ಮೊಮ್ಮಕ್ಕಳೇ ಹತ್ಯೆ ಮಾಡಿರುವುದು ಪೊಲೀಸರು ನಡೆಸಿದ ತನಿಖೆಯಿಂದ ಬೆಳಕಿಗೆ ಬಂದಿದೆ. 70ರ ಹರೆಯದ ತಂದೆ ರಾಮಕೃಷ್ಣಪ್ಪ ಮತ್ತು 65 ವರ್ಷದ ತಾಯಿ ಮುನಿರಾಮಕ್ಕ ಅವರ ಕೊಲೆ ಪ್ರಕರಣದ ಪ್ರಮುಖ ಆರೋಪಿ ನರಸಿಂಹ ಎಂಬಾತ ಡಿಸೆಂಬರ್ 10ರಂದು ತನ್ನ ಪತ್ನಿ ಭಾಗ್ಯ ಮತ್ತು ಮಕ್ಕಳು ಸೇರಿ ಇಬ್ಬರನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಪೋಲೀಸರ ಪ್ರಕಾರ, ನಾಲ್ಕು ಹೆಣ್ಣುಮಕ್ಕಳು ಸೇರಿದಂತೆ ತಮ್ಮೆಲ್ಲಾ ಐದು ಮಕ್ಕಳಿಗೆ ಆಸ್ತಿಯನ್ನು ಹಂಚಲು ವೃದ್ಧ ದಂಪತಿ ನಿರ್ಧರಿಸಿದ ನಂತರ ತನ್ನ ಅತ್ತೆಯ ಕೊಲೆಗೆ ಭಾಗ್ಯ ಸಂಚು ಹೂಡಿದ್ದಳು. ಇತ್ತೀಚಿಗೆ ನರಸಿಂಹ ವ್ಯಾಪಾರದಲ್ಲಿ ಅಪಾರ ನಷ್ಟ ಅನುಭವಿಸಿದ್ದರು. ತಂದೆ-ತಾಯಿಯಿಂದ ಆಸ್ತಿ ಪಡೆದು ಸಾಲ ತೀರಿಸುವಂತೆ ಪತಿಗೆ ಭಾಗ್ಯ ಸೂಚಿಸಿದ್ದಾಳೆ. ಇದೇ ವೇಳೆ ನರಸಿಂಹ ಅವರ ಪೋಷಕರು ಆಸ್ತಿಯನ್ನು ಅವರ ನಾಲ್ವರು ಸಹೋದರಿಯರಿಗೂ ನೀಡಲು ಯೋಜಿಸಿದ್ದರು.

ಡಿಸೆಂಬರ್ 10 ರಂದು ಸಂಜೆ ಭಾಗ್ಯ, ಆಕೆಯ ಮಗಳು ವರ್ಷಾ ಮತ್ತು ಆಕೆಯ ಅಪ್ರಾಪ್ತ ಮಗ ವೃದ್ಧ ದಂಪತಿಯ ಮನೆಗೆ ಭೇಟಿ ನೀಡಿ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೂಲಿಬೆಲೆಯ ವಾಲ್ಮೀಕಿ ನಗರದಲ್ಲಿ ವೃದ್ಧ ದಂಪತಿಯನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಕೊಲೆಯಾದ ದಂಪತಿಯ ಪುತ್ರ ನರಸಿಂಹ ಪ್ರಮುಖ ಆರೋಪಿಯಾಗಿದ್ದು, ಆತನನ್ನು ಬಂಧಿಸಲಾಗಿತ್ತು. ತನ್ನ ಪತ್ನಿ ಮತ್ತು ಮಕ್ಕಳು ದಂಪತಿಯನ್ನು ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ನರಸಿಂಹ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ದೇವನಹಳ್ಳಿ: ಆಸ್ತಿಗಾಗಿ ಹೆತ್ತ ತಂದೆ-ತಾಯಿಯ ಕೊಲೆಗೈದ ಆರೋಪದಲ್ಲಿ ಮಗ ಅರೆಸ್ಟ್​​

ಪತಿ ತನ್ನ ವ್ಯಾಪಾರದಲ್ಲಿ ಅಪಾರ ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ನರಸಿಂಹ ಪತ್ನಿ ಭಾಗ್ಯ ಕೊಲೆಗೆ ಸಂಚು ಹೂಡಿದ್ದಳು. ಭಾಗ್ಯ, ಆಕೆಯ ಮಗಳು ವರ್ಷಾ ಮತ್ತು ಆಕೆಯ ಅಪ್ರಾಪ್ತ ಪುತ್ರ ವೃದ್ಧ ದಂಪತಿಯನ್ನು ಕೊಲೆ ಮಾಡಲು ಮನೆಗೆ ಭೇಟಿ ನೀಡಿದ್ದರು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಲದಂಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ