ಬೆಂಗಳೂರಿನಲ್ಲಿ ಖಾಸಗಿ ಶಾಲಾ ಬಸ್​​ಗೆ ಸರ್ಕಾರಿ ಶಾಲಾ ವಿದ್ಯಾರ್ಥಿ ಬಲಿ

ಸರ್ಕಾರಿ ಶಾಲೆಯ ವಿದ್ಯಾರ್ಥಿಗೆ ಖಾಸಗಿ ಶಾಲಾ ಬಸ್​ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಖಾಸಗಿ ಶಾಲಾ ಬಸ್​​ಗೆ ಸರ್ಕಾರಿ ಶಾಲಾ ವಿದ್ಯಾರ್ಥಿ ಬಲಿ
ಪ್ರಾತಿನಿಧಿಕ ಚಿತ್ರ
Updated By: ವಿವೇಕ ಬಿರಾದಾರ

Updated on: Sep 14, 2022 | 10:37 PM

ಬೆಂಗಳೂರು: ಸರ್ಕಾರಿ ಶಾಲೆಯ ವಿದ್ಯಾರ್ಥಿಗೆ ಖಾಸಗಿ ಶಾಲಾ ಬಸ್​ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿದ್ಯಾರ್ಥಿ ನಿತೀಶ್ ಮೃತ ದುರ್ದೈವಿ. ನಿತೀಶ್ ನಡೆದುಕೊಂಡು ಮುನ್ನೆಕೊಳಲು ಸರ್ಕಾರಿ ಶಾಲೆಗೆ ಹೋಗುತ್ತಿದ್ದನು. ಈ ವೇಳೆ ರಾಯನ್ ಇಂಟರ್ ನ್ಯಾಷನಲ್ ಶಾಲೆಯ ಬಸ್​ ಡಿಕ್ಕಿ ಹೊಡೆದಿದೆ. ಕೂಡಲೇ ಬಸ್​ ಚಾಲಕ ಬಾಲಕನ ಬಳಿಗೆ ಬಂದು, ಕೆಳಗೆ ಬಿದ್ದ ಬಾಲಕನನ್ನು ಮೇಲೆತ್ತಿ ಏನು ಆಗಿಲ್ಲ ಅಂತ ನೀರು ಕುಡಿಸಿದ್ದಾನೆ.

ನಿತೀಶ್ ಆಪಘಾತದ ವೇಳೆ ಚೆನ್ನಾಗಿ ಮಾತಾನಾಡಿಕೊಂಡಿದ್ದನು. ಬಳಿಕ ನಡೆದುಕೊಂಡೇ ಶಾಲೆಗೆ ಹೋಗಿದ್ದಾನೆ. ಕ್ಲಾಸ್ ರೂಂ ನಲ್ಲಿ ಕುಳಿತಿದ್ದ ವೇಳೆ ತಲೆಯಲ್ಲಿ ಊತ ಕಾಣಿಸಿಕೊಂಡು ಬಾಲಕ ಕೆಳಗೆ ಬಿದ್ದಿದ್ದಾನೆ. ಕೂಡಲೇ ಶಾಲಾ ಸಿಬ್ಬಂದಿ ಪೋಷಕರಿಗೆ ವಿಷಯ ತಿಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆಸ್ಪತ್ರೆಗೆ ದಾಖಲಾದ ಕೇವಲ ಒಂದು ಗಂಟೆಯಲ್ಲಿ ಬಾಲಕ ನಿತೀಶ್ ಸಾವನ್ನಪ್ಪಿದ್ದಾನೆ. ಆಂತರಿಕ ರಕ್ತಸ್ರಾವದಿಂದ ಬಾಲಕ ನಿತೀಶ್ಸ್ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಹೆಚ್ಎಎಲ್ ಸಂಚಾರಿ ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಾಲಕ ವಿಠಲ್​ನನ್ನು ಬಂಧಿಸಿ, ಬಸ್ ಸೀಜ್ ಮಾಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ