AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವಿದ್ಯಾರ್ಥಿ ಮೇಲಿನ ಹಲ್ಲೆ ಪ್ರಕರಣಕ್ಕೆ ತಳುಕು ಹಾಕಿದ ಹುಡುಗಿ ವಿಚಾರ; ಪೊಲೀಸರ ಮುಂದೆ ಕಣ್ಣೀರಾದ ವಿದ್ಯಾರ್ಥಿಗಳು

Bengaluru news: ನಾಗರಬಾವಿಯಲ್ಲಿರುವ ಖಾಸಗಿ ಕಾಲೇಜಿನ ಮುಂದೆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ವೈಷಮ್ಯ ಇರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ಬೆಂಗಳೂರು: ವಿದ್ಯಾರ್ಥಿ ಮೇಲಿನ ಹಲ್ಲೆ ಪ್ರಕರಣಕ್ಕೆ ತಳುಕು ಹಾಕಿದ ಹುಡುಗಿ ವಿಚಾರ; ಪೊಲೀಸರ ಮುಂದೆ ಕಣ್ಣೀರಾದ ವಿದ್ಯಾರ್ಥಿಗಳು
ವಿದ್ಯಾರ್ಥಿ ಮೇಲಿನ ಹಲ್ಲೆ ಪ್ರಕರಣ ಸಂಬಂಧ ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ವೈಷಮ್ಯ ಇರುವ ವಿಚಾರ ಬೆಳಕಿಗೆ ಬಂದಿದೆ (ಸಾಂದರ್ಭಿಕ ಚಿತ್ರ)
ರಾಚಪ್ಪಾಜಿ ನಾಯ್ಕ್
| Edited By: |

Updated on: Jun 29, 2023 | 11:28 AM

Share

ಬೆಂಗಳೂರು: ನಗರದ ನಾಗರಾಭಾವಿ ಖಾಸಗಿ ಕಾಲೇಜು ಮುಂದೆ ವಿದ್ಯಾರ್ಥಿ ಮೇಲೆ ಲಾಂಗ್​ನಿಂದ ಹಲ್ಲೆ (Assault) ನಡೆಸಿದ ಪ್ರಕರಣದ ಹಿಂದಿನ ಅಸಲಿ ಕಾರಣ ಪೊಲೀಸ್ ತನಿಖೆಯಿಂದ ಹೊರಬಿದ್ದಿದೆ. ಹಲ್ಲೆಗೊಳಗಾದ ದರ್ಶನ್ ಹಾಗೂ ಪ್ರಮುಖ ಆರೋಪಿ ಸಾಹಸ್ ಗೌಡ ಅಲಿಯಾಸ್ ಸತ್ಯ ಎಂಬವರ ನಡುವೆ ವೈಷಮ್ಯ ಇತ್ತು. ಈ ವಿಚಾರವಾಗಿಯೇ ಗಲಾಟೆಗಳು ನಡೆದಿದ್ದವು ಎಂದು ತಿಳಿದುಬಂದಿದೆ. ಅಷ್ಟಕ್ಕೂ ಹಲ್ಲೆಗೆ ಕಾರಣವೇನು? ವಿದ್ಯಾರ್ಥಿಗಳು ಪೊಲೀಸರ ಮುಂದೆ ಕಣ್ಣೀರು ಹಾಕಿದ್ದು ಯಾಕೆ? ಇಲ್ಲಿದೆ ನೋಡಿ ಮಾಹಿತಿ.

ಸ್ನೇಹಿತರನ್ನೊಳಗೊಂಡ ದರ್ಶನ್ ಗುಂಪು ಮತ್ತು ಸಾಹಸ್ ಗುಂಪು ಓರ್ವ ಯುವತಿಯ ವಿಚಾರದಲ್ಲಿ ಕೆಲ ತಿಂಗಳ ಹಿಂದೆ ಜಗಳ ಮಾಡಿಕೊಂಡಿದ್ದವು. ಈ ವೇಳೆ ಸಾಹಸ್ ಗೌಡ ಹಲ್ಲೆಗೆ ಮುಂದಾದಾಗ ದರ್ಶನ್ ಸ್ಥಳದಿಂದ ಓಡಿ ಹೋಗಿದ್ದ. ನಂತರ ಸಾಹಸ್ ಮೇಲೆ ದ್ವೇಷ ಬೆಳೆಸಿಕೊಂಡ ದರ್ಶನ್, ಸಾಹಸ್​ನನ್ನು ಹೊಡೆಯುತ್ತೇನೆ ಅಂತ ಹೇಳಿಕೊಳ್ಳುತ್ತಿದ್ದನು.

ಇದನ್ನೂ ಓದಿ: Video Viral: ಕೈಯಲ್ಲಿ ಮಚ್ಚು ಹಿಡಿದು ಯುವತಿಯನ್ನು ಅಟ್ಟಿಸಿಕೊಂಡು ಹೋಗಿ ಹಲ್ಲೆ ಮಾಡಿದ ವ್ಯಕ್ತಿ

ಅಲ್ಲದೆ ಗಲಾಟೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಾಹಸ್ ಗೌಡ ಕಾಲೇಜಿನಿಂದ ಸಸ್ಪೆಂಡ್ ಆಗಿದ್ದ. ಹೀಗೆ ಬಿಟ್ಟರೆ ದರ್ಶನ್ ನನ್ನನ್ನೇ ಹೊಡಿತಾನೆ ಅಂತಾ ಯೋಚಿಸಿದ ಆರೋಪಿ, ಬೇರೆ ಕಾಲೇಜಿನ ಮೂವರು ವಿದ್ಯಾರ್ಥಿಗಳು ಹಾಗೂ ಹೊರಗಿನ ಮೂವರು ಹುಡುಗರನ್ನ ಕರೆತಂದು ಕಾಲೇಜು ಮುಂಭಾಗದಲ್ಲೇ ದರ್ಶನ್ ಮೇಲೆ ಲಾಂಗ್​ನಿಂದ ಹಲ್ಲೆ ನಡೆಸಿರುವುದು ತನಿಖೆಯಿಂದ ತಿಳಿದುಬಂದಿದೆ.

ಪೊಲೀಸರ ಮುಂದೆ ಕಣ್ಣೀರಾದ ವಿದ್ಯಾರ್ಥಿಗಳು

ಹಲ್ಲೆ ಪ್ರಕರಣ ಸಂಬಂಧ ವಿಚಾರಣೆ ವೇಳೆ ವಿದ್ಯಾರ್ಥಿಗಳು ಪೊಲೀಸರ ಮುಂದೆ ಕಣ್ಣೀರಿಟ್ಟ ಘಟನೆ ನಡೆದಿದೆ. ಸುಮ್ಮನೆ ಹೆದರಿಸಲು ಅಂತಾ ಕರೆದುಕೊಂಡು ಬಂದಿದ್ದ. ಆದರೆ ಸಾಹಸ್ ಲಾಂಗ್ ತಂದಿರುವುದು ಗೊತ್ತಾಗಿಲ್ಲ. ನಮ್ಮ ಜೀವನವೇ ಹಾಳಾಯಿತು ಎಂದು ವಿದ್ಯಾರ್ಥಿಗಳು ತನಿಖಾಧಿಕಾರಿಗಳ ಮುಂದೆ ಕಣ್ಣೀರಿಟ್ಟಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?