AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಲ ಶಂಕಿಸಿ ಪತ್ನಿಯ ಹತ್ಯೆ, ಪ್ರಿಯಕರನನ್ನೂ ಕೊಲೆ ಮಾಡುವುದಾಗಿ ಆಕೆಯ ಅಣ್ಣನಿಗೆ ಮೆಸೇಜ್ ಕಳುಹಿಸಿ ಆರೋಪಿ ಪರಾರಿ

ಶೀಲ ಶಂಕಿಸಿ ಪತ್ನಿಯನ್ನು ಹತ್ಯೆಗೈದ ಪತಿ ಪ್ರಿಯಕರನನ್ನೂ ಕೊಲ್ಲುವುದಾಗಿ ಆಕೆಯ ಅಣ್ಣನಿಗೆ ಬೆದರಿಕೆ ಸಂದೇಶ ಕಳುಹಿಸಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ

ಶೀಲ ಶಂಕಿಸಿ ಪತ್ನಿಯ ಹತ್ಯೆ, ಪ್ರಿಯಕರನನ್ನೂ ಕೊಲೆ ಮಾಡುವುದಾಗಿ ಆಕೆಯ ಅಣ್ಣನಿಗೆ ಮೆಸೇಜ್ ಕಳುಹಿಸಿ ಆರೋಪಿ ಪರಾರಿ
ಕೊಲೆಯಾದ ನಜ್​ ಮತ್ತು ನಜ್ ಪತಿಯೂ ಆಗಿರುವ ಕೊಲೆ ಆರೋಪಿ ನಾಸೀರ್ ಹುಸೇನ್
TV9 Web
| Edited By: |

Updated on:Jan 16, 2023 | 10:33 PM

Share

ಬೆಂಗಳೂರು: ಶೀಲ ಶಂಕಿಸಿ ಪತ್ನಿಯನ್ನು ಹತ್ಯೆಗೈದ ಪತಿ (Husband kills wife) ಪ್ರಿಯಕರನನ್ನೂ ಕೊಲ್ಲುವುದಾಗಿ ಆಕೆಯ ಅಣ್ಣನಿಗೆ ಬೆದರಿಕೆ ಸಂದೇಶ ಕಳುಹಿಸಿ ಪರಾರಿಯಾದ ಘಟನೆ ನಗರದ ತಾವರೆಕೆರೆಯ ಸುಭಾಷ್ ನಗರದಲ್ಲಿ ನಡೆದಿದೆ. ನಾಜ್(22) ಕೊಲೆಯಾದ ಗೃಹಿಣಿಯಾಗಿದ್ದು, ಈಕೆಯ ಪತಿ ನಾಸೀರ್ ಹುಸೇನ್ ಕೊಲೆ ಆರೋಪಿಯಾಗಿದ್ದಾನೆ. ಕೊಲೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸುದ್ದುಗುಂಟೆ ಠಾಣಾ ಪೊಲೀಸರು ಆರೋಪಿಯ ಬಂಧನಕ್ಕೆ ತನಿಖೆ ಆರಂಭಿಸಿದ್ದಾರೆ.

ನಾಜ್ ಮತ್ತು ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಾಸೀರ್ ಹುಸೇನ್ ಪರಸ್ಪರ ಪ್ರೀತಿಸುತ್ತಿದ್ದರು. ನಾಸೀರ್​ಗೆ ತಂದೆ ಮತ್ತು ತಾಯಿ ಯಾರೂ ಇಲ್ಲದ ಹಿನ್ನಲೆ ಆತನ ಗುಣ ಸ್ವಭಾವ ಮೆಚ್ಚಿದ ನಾಜ್ ಪೋಷಕರು ಪ್ರೇಮ ವಿವಾಹಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಕಳೆದ ಆರು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ದಂಪತಿ ತಾವರೆಕೆರೆಯ ಸುಭಾಷ್ ನಗರದಲ್ಲಿ ಫ್ಲ್ಯಾಟ್​ವೊಂದರಲ್ಲಿ ವಾಸವಿದ್ದರು.

ಇದನ್ನೂ ಓದಿ: Murder: ದೃಶ್ಯ ಸಿನಿಮಾ ರೀತಿಯಲ್ಲೇ ಕೊಲೆ; ಗಂಡನನ್ನು ಕೊಂದು, ಶವದ ಮೇಲೆ ಟ್ಯಾಂಕ್ ಕಟ್ಟಿದ ಹೆಂಡತಿ!

ಪ್ರೀತಿಸಿ ಮದುವೆಯಾಗಿದ್ದ ಜೋಡಿ ಹಕ್ಕಿಯ ಸಂಸಾರ ಚೆನ್ನಾಗಿಯೇ ಸಾಗುತ್ತಿತ್ತು. ಆದರೆ ಇತ್ತೀಚೆಗೆ ನಾಜ್ ಗರ್ಭಿಣಿಯಾದಗ ಪತಿ ನಾಸೀರ್​ಗೆ ಅನುಮಾನದ ಪೆಂಡ ಭೂತ ತಲೆಗೆ ಹೊಕ್ಕಿದೆ. ಪತ್ನಿ ಗರ್ಭಿಣಿಯಾಗಿರುವುದು ದೃಢಪಡುತ್ತಿದ್ದಂತೆ ಹೆಂಡತಿ ಮೇಲೆ ಸಂದೇಹ ಪಟ್ಟಿದ್ದ ಪತಿ ನಾಸೀರ್, ಅದು ತನ್ನ ಮಗುವಲ್ಲ ಎಂದು ಕಿರಿಕ್ ಮಾಡಲು ಆರಂಭಿಸಿದ್ದಾನೆ. ಇದರ ಇಬ್ಬರ ನಡುವೆ ಜಗಳಕ್ಕೆ ಕಾರಣವಾಗಿದೆ.

ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ ನಾಸೀರ್ ಪತ್ನಿ ನಾಜ್​ಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸದ್ದುಗುಂಟೆಪಾಳ್ಯ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ನಾಜ್​ಳ ಮೃತದೇಹವನ್ನು ಸೆಂಟ್ ಜಾನ್ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಪತ್ನಿಯ ಪ್ರಿಯಕರನನ್ನು ಕೊಲ್ಲುವುದಾಗಿ ಮೆಸೇಜ್ ಮಾಡಿದ ಆರೋಪಿ

ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಕೊಲೆ ಮಾಡಿದ್ದಲ್ಲದೆ, ಆಕೆಯ ಅಣ್ಣನಿಗೆ ಬೆದರಿಕೆ ಸಂದೇಶವೊಂದನ್ನು ಕಳುಹಿಸಿ ಪರಾರಿಯಾಗಿದ್ದಾನೆ. ನಾಜ್​ಳ ಪ್ರಿಯಕರನನ್ನು ಕೂಡ ಕೊಲ್ಲುವುದಾಗಿ ಮೆಸೇಜ್ ಮಾಡಿ ಸ್ಥಳದಿಂದ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ನಾಸೀರ್​ ಬಂಧನಕ್ಕೆ ಶೋಧಕಾರ್ಯ ನಡೆಸುತ್ತಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:31 pm, Mon, 16 January 23

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?