AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಲ ಶಂಕಿಸಿ ಪತ್ನಿಯ ಹತ್ಯೆ, ಪ್ರಿಯಕರನನ್ನೂ ಕೊಲೆ ಮಾಡುವುದಾಗಿ ಆಕೆಯ ಅಣ್ಣನಿಗೆ ಮೆಸೇಜ್ ಕಳುಹಿಸಿ ಆರೋಪಿ ಪರಾರಿ

ಶೀಲ ಶಂಕಿಸಿ ಪತ್ನಿಯನ್ನು ಹತ್ಯೆಗೈದ ಪತಿ ಪ್ರಿಯಕರನನ್ನೂ ಕೊಲ್ಲುವುದಾಗಿ ಆಕೆಯ ಅಣ್ಣನಿಗೆ ಬೆದರಿಕೆ ಸಂದೇಶ ಕಳುಹಿಸಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ

ಶೀಲ ಶಂಕಿಸಿ ಪತ್ನಿಯ ಹತ್ಯೆ, ಪ್ರಿಯಕರನನ್ನೂ ಕೊಲೆ ಮಾಡುವುದಾಗಿ ಆಕೆಯ ಅಣ್ಣನಿಗೆ ಮೆಸೇಜ್ ಕಳುಹಿಸಿ ಆರೋಪಿ ಪರಾರಿ
ಕೊಲೆಯಾದ ನಜ್​ ಮತ್ತು ನಜ್ ಪತಿಯೂ ಆಗಿರುವ ಕೊಲೆ ಆರೋಪಿ ನಾಸೀರ್ ಹುಸೇನ್
TV9 Web
| Edited By: Rakesh Nayak Manchi|

Updated on:Jan 16, 2023 | 10:33 PM

Share

ಬೆಂಗಳೂರು: ಶೀಲ ಶಂಕಿಸಿ ಪತ್ನಿಯನ್ನು ಹತ್ಯೆಗೈದ ಪತಿ (Husband kills wife) ಪ್ರಿಯಕರನನ್ನೂ ಕೊಲ್ಲುವುದಾಗಿ ಆಕೆಯ ಅಣ್ಣನಿಗೆ ಬೆದರಿಕೆ ಸಂದೇಶ ಕಳುಹಿಸಿ ಪರಾರಿಯಾದ ಘಟನೆ ನಗರದ ತಾವರೆಕೆರೆಯ ಸುಭಾಷ್ ನಗರದಲ್ಲಿ ನಡೆದಿದೆ. ನಾಜ್(22) ಕೊಲೆಯಾದ ಗೃಹಿಣಿಯಾಗಿದ್ದು, ಈಕೆಯ ಪತಿ ನಾಸೀರ್ ಹುಸೇನ್ ಕೊಲೆ ಆರೋಪಿಯಾಗಿದ್ದಾನೆ. ಕೊಲೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸುದ್ದುಗುಂಟೆ ಠಾಣಾ ಪೊಲೀಸರು ಆರೋಪಿಯ ಬಂಧನಕ್ಕೆ ತನಿಖೆ ಆರಂಭಿಸಿದ್ದಾರೆ.

ನಾಜ್ ಮತ್ತು ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಾಸೀರ್ ಹುಸೇನ್ ಪರಸ್ಪರ ಪ್ರೀತಿಸುತ್ತಿದ್ದರು. ನಾಸೀರ್​ಗೆ ತಂದೆ ಮತ್ತು ತಾಯಿ ಯಾರೂ ಇಲ್ಲದ ಹಿನ್ನಲೆ ಆತನ ಗುಣ ಸ್ವಭಾವ ಮೆಚ್ಚಿದ ನಾಜ್ ಪೋಷಕರು ಪ್ರೇಮ ವಿವಾಹಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಕಳೆದ ಆರು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ದಂಪತಿ ತಾವರೆಕೆರೆಯ ಸುಭಾಷ್ ನಗರದಲ್ಲಿ ಫ್ಲ್ಯಾಟ್​ವೊಂದರಲ್ಲಿ ವಾಸವಿದ್ದರು.

ಇದನ್ನೂ ಓದಿ: Murder: ದೃಶ್ಯ ಸಿನಿಮಾ ರೀತಿಯಲ್ಲೇ ಕೊಲೆ; ಗಂಡನನ್ನು ಕೊಂದು, ಶವದ ಮೇಲೆ ಟ್ಯಾಂಕ್ ಕಟ್ಟಿದ ಹೆಂಡತಿ!

ಪ್ರೀತಿಸಿ ಮದುವೆಯಾಗಿದ್ದ ಜೋಡಿ ಹಕ್ಕಿಯ ಸಂಸಾರ ಚೆನ್ನಾಗಿಯೇ ಸಾಗುತ್ತಿತ್ತು. ಆದರೆ ಇತ್ತೀಚೆಗೆ ನಾಜ್ ಗರ್ಭಿಣಿಯಾದಗ ಪತಿ ನಾಸೀರ್​ಗೆ ಅನುಮಾನದ ಪೆಂಡ ಭೂತ ತಲೆಗೆ ಹೊಕ್ಕಿದೆ. ಪತ್ನಿ ಗರ್ಭಿಣಿಯಾಗಿರುವುದು ದೃಢಪಡುತ್ತಿದ್ದಂತೆ ಹೆಂಡತಿ ಮೇಲೆ ಸಂದೇಹ ಪಟ್ಟಿದ್ದ ಪತಿ ನಾಸೀರ್, ಅದು ತನ್ನ ಮಗುವಲ್ಲ ಎಂದು ಕಿರಿಕ್ ಮಾಡಲು ಆರಂಭಿಸಿದ್ದಾನೆ. ಇದರ ಇಬ್ಬರ ನಡುವೆ ಜಗಳಕ್ಕೆ ಕಾರಣವಾಗಿದೆ.

ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ ನಾಸೀರ್ ಪತ್ನಿ ನಾಜ್​ಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸದ್ದುಗುಂಟೆಪಾಳ್ಯ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ನಾಜ್​ಳ ಮೃತದೇಹವನ್ನು ಸೆಂಟ್ ಜಾನ್ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಪತ್ನಿಯ ಪ್ರಿಯಕರನನ್ನು ಕೊಲ್ಲುವುದಾಗಿ ಮೆಸೇಜ್ ಮಾಡಿದ ಆರೋಪಿ

ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಕೊಲೆ ಮಾಡಿದ್ದಲ್ಲದೆ, ಆಕೆಯ ಅಣ್ಣನಿಗೆ ಬೆದರಿಕೆ ಸಂದೇಶವೊಂದನ್ನು ಕಳುಹಿಸಿ ಪರಾರಿಯಾಗಿದ್ದಾನೆ. ನಾಜ್​ಳ ಪ್ರಿಯಕರನನ್ನು ಕೂಡ ಕೊಲ್ಲುವುದಾಗಿ ಮೆಸೇಜ್ ಮಾಡಿ ಸ್ಥಳದಿಂದ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ನಾಸೀರ್​ ಬಂಧನಕ್ಕೆ ಶೋಧಕಾರ್ಯ ನಡೆಸುತ್ತಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:31 pm, Mon, 16 January 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ