AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Crime: ಹೊಸ ಮೊಬೈಲ್​ಗೆ ಸಿಮ್​ ಹಾಕಿದ್ದೇ ತಡ ಟೆಕ್ಕಿ ಬ್ಯಾಂಕ್​ ಖಾತೆಯಲ್ಲಿದ್ದ 2 ಕೋಟಿ ರೂ. ಮಾಯ

ಬೆಂಗಳೂರಿನಲ್ಲಿ ಸೈಬರ್​ ಕ್ರೈಂ ಪ್ರಕರಣಗಳು ದಿನದಿನಕ್ಕೆ ಹೆಚ್ಚುತ್ತಿವೆ. ಸೈಬರ್​ ವಂಚಕರು ಹೊಸ ಹೊಸ ಮಾರ್ಗಗಳ ಮುಖಾಂತರ ವಂಚನೆ ಮಾಡುತ್ತಿದ್ದಾರೆ. ಬೆಂಗಳೂರಿನ ಟೆಕ್ಕಿ‌ಯೊಬ್ಬರು ಸೈಬರ್​ ವಂಚಕರ ಬಲೆಗೆ ಬಿದ್ದು ಕೋಟ್ಯಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಅಷ್ಟಕ್ಕೂ ಟೆಕ್ಕಿ ಸೈಬರ್​ ವಂಚಕರ ಬಲೆಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿವರ

Cyber Crime: ಹೊಸ ಮೊಬೈಲ್​ಗೆ ಸಿಮ್​ ಹಾಕಿದ್ದೇ ತಡ ಟೆಕ್ಕಿ ಬ್ಯಾಂಕ್​ ಖಾತೆಯಲ್ಲಿದ್ದ 2 ಕೋಟಿ ರೂ. ಮಾಯ
ಸೈಬರ್​ ಕ್ರೈಂ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ವಿವೇಕ ಬಿರಾದಾರ|

Updated on:Jan 19, 2025 | 10:50 AM

Share

ಬೆಂಗಳೂರು, ಜನವರಿ 19: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸೈಬರ್​ ಕ್ರೈಂ (Cyber Crime) ಪ್ರಕರಣಗಳು ದಿನದಿನಕ್ಕೆ ಹೆಚ್ಚುತ್ತಿವೆ. ಸೈಬರ್​ ವಂಚಕರು ಹೊಸ ಹೊಸ ಮಾರ್ಗಗಳ ಮುಖಾಂತರ ವಂಚನೆ ಮಾಡುತ್ತಿದ್ದಾರೆ. ಬೆಂಗಳೂರಿನ ಟೆಕ್ಕಿ‌ಯೊಬ್ಬರಿಗೆ ಹೊಸ ಮೊಬೈಲ್ ಕಳಿಸಿ, ಅದರ ಮೂಲಕ ಸೈಬರ್ ವಂಚಕರು 2.80 ಕೋಟಿ ರೂ. ದೋಚಿದ್ದಾರೆ. ಇದು ಸೈಬರ್ ಕ್ರೈಂ ಖದೀಮರ ಹೊಸ ಪ್ಲಾನ್ ಆಗಿದೆ.

ಬೆಂಗಳೂರಿನ ಟೆಕ್ಕಿಯೊಬ್ಬರ ವಿಳಾಸಕ್ಕೆ ಸೈಬರ್​ ವಂಚಕರು ನೀವು ಹೊಸ ಸಿಮ್ ಖರೀದಿ ಮಾಡಿದ್ದೀರಿ, ಅದಕ್ಕೆ ಗಿಫ್ಟ್ ಎಂದು ಮೊಬೈಲ್ ಕಳುಹಿಸಿದ್ದರು. ಗಿಫ್ಟ್​​ ಸ್ವೀಕರಿಸಿದ ಟೆಕ್ಕಿ ಸಿಮ್​ನ್ನು ಮೊಬೈಲ್​​ನಲ್ಲಿ ಹಾಕಿದ್ದಾರೆ. ಸಿಮ್​ ಹಾಕಿದ ಕೆಲವೇ ಗಂಟೆಗಳಲ್ಲಿ ಟೆಕ್ಕಿ ಖಾತೆಯಲ್ಲಿದ್ದ 2.80 ಕೋಟಿ ರೂ. ಅನ್ನು ಸೈಬರ್​ ಖದೀಮರು ತಮ್ಮ ಖಾತೆಗೆ ಜಮಾವಣೆ ಮಡಿಕೊಂಡಿದ್ದಾರೆ.

ಇದನ್ನೂ ಓದಿ: ಸೈಬರ್​ ಕ್ರೈಂ: ವೃದ್ಧೆಯಿಂದ 1 ಕೋಟಿಗೂ ಅಧಿಕ ಹಣ ದೋಚಿದ ವಂಚಕರು

ಟೆಕ್ಕಿಯ ಬ್ಯಾಂಕ್​ ಡೀಟೇಲ್ಸ್​ ಸಿಕ್ಕಿದ್ದು ಹೇಗೆ?

ಸೈಬರ್​ ವಂಚಕರು ಮೊಬೈಲ್​ನಲ್ಲಿ ಮೊದಲೇ ಕೆಲವು ಆ್ಯಪ್​ಗಳನ್ನು ಇನ್​ಸ್ಟಾಲ್​ ಮಾಡಿದ್ದರು. ಟೆಕ್ಕಿ ಮೊಬೈಲ್​ಗೆ ಸಿಮ್​ ಹಾಕುತ್ತಿದ್ದಂತೆ, ಹಲವು ಸಂದೇಶಗಳು ಬಂದಿವೆ. ಈ ಮೊಬೈಲ್​ಗೆ ಬರುವ ಸಂದೇಶಗಳು ಮತ್ತು ಒಟಿಪಿಗಳು ತಮಗೂ ಬರುವಂತೆ ವಂಚಕರು ಸೆಟ್ ಮಾಡಿದ್ದರು. ಸಂದೇಶಗಳು ಮತ್ತು ಒಟಿಪಿ ಮೂಲಕ ಟೆಕ್ಕಿಯ ಬ್ಯಾಂಕ್​ ಖಾತೆ ಮಾಹಿತಿ ಪಡೆದಿದ್ದಾರೆ.

ನಂತರ ಟೆಕ್ಕಿಯ ಬ್ಯಾಂಕ್ ಅಕೌಂಟ್ ಸೇರಿ ಎಲ್ಲವನ್ನು ಪರಿಶೀಲಿಸಿದ್ದಾರೆ. ಕೊನೆಗೆ ಬ್ಯಾಂಕ್ ಎಫ್​ಡಿಯಲ್ಲಿ ಇಟ್ಟಿದ್ದ 2.80 ರೂ. ಅನ್ನು ಖದೀಮರು ಎಗರಿಸಿದ್ದಾರೆ. ವೈಟ್​ಫೀಲ್ಡ್ ಸೆನ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

11 ಕೋಟಿ ವಂಚಿಸಿದ್ದ ಆರೋಪಿಗಳು ಅರೆಸ್ಟ್​

ಮತ್ತೊಂದು ಪ್ರಕರಣದಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಟೆಕ್ಕಿಗೆ 11 ಕೋಟಿ ರೂ. ವಂಚಿಸಿದ್ದ ಆರೋಪಿಗಳನ್ನು ಬೆಂಗಳೂರು ಈಶಾನ್ಯ ವಿಭಾಗದ ಸಿಇಎನ್​ ಪೊಲೀಸರು ಬಂಧಿಸಿದ್ದಾರೆ. ಕರಣ್, ತರುಣ್ ನಟಾನಿ, ಧವಲ್ ಷಾ ಬಂಧಿತರು. ವಂಚಕರು ಟೆಕ್ಕಿ ವಿಜಯ್ ಕುಮಾರ್​ ಅವರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಹಣಕ್ಕೆ ಬೇಡಿಕೆ ಇಟ್ಟಿದ್ದರು.

ವಂಚಕರ ಬೆದರಿಕೆಗೆ ಹೆದರಿದ ಟೆಕ್ಕಿ, “ನನ್ನ ಖಾತೆಯಲ್ಲಿ ಕೇವಲ 2 ಲಕ್ಷ ರೂ. ಇದೆ ಕೊಡುತ್ತೇನೆ ಎಂದು ಹೇಳಿದ್ದರು. ಬಳಿಕ ಟೆಕ್ಕಿ, ಸೈಬರ್ ವಂಚಕರು ಹೇಳಿದ್ದ ಅಕೌಂಟ್​ಗೆ 2 ಲಕ್ಷ ಹಣ ವರ್ಗಾವಣೆ ಮಾಡಿದ್ದರು. ಮತ್ತೆ ಮತ್ತೆ ಹಣಕ್ಕಾಗಿ ಟೆಕ್ಕಿ ವಿಜಯ್ ಕುಮಾರ್​ಗೆ ವಂಚಕರು ಧಮ್ಕಿ ಹಾಕುತ್ತಿದ್ದರು.

ಬಳಿಕ, ಟೆಕ್ಕಿ ವಿಜಯ್ ಕುಮಾರ್ ತಾನು ಕೆಲಸ ಮಾಡುತ್ತಿದ್ದ ಕಂಪನಿಯ ಅಮೆರಿಕದಲ್ಲಿನ ಷೇರಿನ ಬಗ್ಗೆ ವಂಚಕರಿಗೆ ಮಾಹಿತಿ ನೀಡಿದ್ದರು. ಬಳಿಕ ವಂಚಕರು ಪೊಲೀಸರು, ಕಸ್ಟಮ್ಸ್ ಅಧಿಕಾರಿಗಳು, ಇಡಿ ಅಧಿಕಾರಿಗಳೆಂದು ಬೆದರಿಕೆ ಹಾಕಲು ಆರಂಭಿಸಿದ್ದಾರೆ. ಅಕ್ರಮ ಹಣ ವರ್ಗಾವಣೆಯಾಗಿದೆ ಎಂದು ಟೆಕ್ಕಿಗೆ ನಿರಂತರ ಕರೆಮಾಡಿ ಬೆದರಿಕೆ ಹಾಕಿದ್ದಾರೆ.

ಇದರಿಂದ ಹೆದರಿದ್ದ ಟೆಕ್ಕಿ ವಿಜಯ್​ ಕುಮಾರ್ ಅಕೌಂಟ್ ನಂಬರ್, ಆಧಾರ್, ಪಾನ್​ಕಾರ್ಡ್ ನಂಬರ್ ನೀಡಿದ್ದನು. ಬಳಿಕ, ವಂಚಕರು ತಾವು ಕಳಿಸುವ ಸರ್ಕಾರಿ ಅಕೌಂಟ್​​ಗೆ ಹಣ ಹಾಕುವಂತೆ ಸೂಚಿಸಿದದಾರೆ. ನಾವು ಹೇಳಿದ ಅಕೌಂಟ್​ಗೆ ಹಣ ಹಾಕಿದರೆ ಸಹಾಯ ಮಾಡುತ್ತೇವೆ ಎಂದಿದ್ದಾರೆ. ಒಟ್ಟು 9 ಖಾತೆಗಳ ನಂಬರ್ ನೀಡಿ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ವಂಚಕರು ತಿಂಗಳ ಕಾಲ ಕಾಡಿದ್ದರು. ಬಳಿಕ ಟೆಕ್ಕಿ ವಿಜಯ್​ ಕುಮಾರ್ ದೂರು ನೀಡಿದ್ದಾರೆ. ಸೈಬರ್ ಪೊಲೀಸರು ಟೆಕ್ಕಿ ಅಕೌಂಟ್ ಜಾಡು ಹಿಡಿದು ತನಿಖೆ ನಡೆಸಿದ ತನಿಖೆಗೆ ಇಳಿದಾಗ, ಅಲಹಾಬಾದ್​ನ ಒಂದು ಖಾತೆಗೆ 7.5 ಕೋಟಿ ಹೋಗಿರುವುದು ತಿಳಿದಿದೆ.

ಗುಜರಾತ್​ನ ಸೂರತ್ ಚಿನ್ನದ ವ್ಯಾಪಾರಿ ಬಗ್ಗೆ ಮಾಹಿತಿ ಗೊತ್ತಾಗಿದೆ. ಸೂರತ್​ಗೆ ತೆರಳಿದ ಪೊಲೀಸರು ಚಿನ್ನ ವ್ಯಾಪಾರಿ ಹತ್ತಿರ ಮಾಹಿತಿ ಸಂಗ್ರಹಿಸಿದ್ದಾರೆ. ವಂಚಿಸಿದ ಕೋಟಿ ಕೋಟಿ ಹಣದಲ್ಲಿ ಸೈಬರ್​ ವಂಚಕರು ಚಿನ್ನಾಭರಣ ಖರೀದಿಸಿ ಪರಾರಿಯಾಗಿದ್ದರು. ಕೊನೆಗೂ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:11 am, Sun, 19 January 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!