AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಫಿ ಟೆಕ್ಕಿ ಮೊಹಮ್ಮದ್ ಮುಜೀಬ್ ಜಾಮೀನು ಅರ್ಜಿ ವಜಾ

ಬೆಂಗಳೂರು: ರಂಜಾನ್ ಹಬ್ಬದ ದಿನವಾದರೂ ತನಗೆ ಜಾಮೀನು ಜಾಮೂನು ದಕ್ಕಲಿದೆ ಎಂದು ಬಯಸಿದ್ದವನಿಗೆ ಕೋರ್ಟ್ ಜಾಮೀನು ಭಾಗ್ಯ ನೀಡಲು ನಿರಾಕರಿಸಿತು. ‘ಹೊರಗೆ ಹೋಗಿ ಸೀನಿ, ವೈರಸ್ ಹರಡಿ’, ‘ಕೊರೊನಾ ಸೋಂಕು ಹರಡಿ ಪ್ರಪಂಚ ಕೊನೆಗಾಣಿಸಿ’, ‘ನಾಯಿಗಳನ್ನು ಸಾಯಿಸಲು ನನ್ನ ಸ್ಟೆನ್ ಗನ್ ರೆಡಿ’ ಹೀಗೆಂದು ವಿಲಕ್ಷಣವಾಗಿ ಫೇಸ್ ಬುಕ್ ಪೋಸ್ಟ್ ಹಾಕಿದ್ದ ಟೆಕ್ಕಿ ಮುಜೀಬ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಇನ್ಫಿ ಟೆಕ್ಕಿ ಮೊಹಮ್ಮದ್ ಮುಜೀಬ್ ತನಿಖೆ ವೇಳೆ ಹಲವು ಮಹತ್ವದ ಅಂಶಗಳು ಪತ್ತೆಯಾಗಿವೆ. ಟೆಕ್ಕಿ ಮುಜೀಬ್ […]

ಇನ್ಫಿ ಟೆಕ್ಕಿ ಮೊಹಮ್ಮದ್ ಮುಜೀಬ್ ಜಾಮೀನು ಅರ್ಜಿ ವಜಾ
Follow us
ಸಾಧು ಶ್ರೀನಾಥ್​
|

Updated on:May 25, 2020 | 6:31 PM

ಬೆಂಗಳೂರು: ರಂಜಾನ್ ಹಬ್ಬದ ದಿನವಾದರೂ ತನಗೆ ಜಾಮೀನು ಜಾಮೂನು ದಕ್ಕಲಿದೆ ಎಂದು ಬಯಸಿದ್ದವನಿಗೆ ಕೋರ್ಟ್ ಜಾಮೀನು ಭಾಗ್ಯ ನೀಡಲು ನಿರಾಕರಿಸಿತು.

‘ಹೊರಗೆ ಹೋಗಿ ಸೀನಿ, ವೈರಸ್ ಹರಡಿ’, ‘ಕೊರೊನಾ ಸೋಂಕು ಹರಡಿ ಪ್ರಪಂಚ ಕೊನೆಗಾಣಿಸಿ’, ‘ನಾಯಿಗಳನ್ನು ಸಾಯಿಸಲು ನನ್ನ ಸ್ಟೆನ್ ಗನ್ ರೆಡಿ’ ಹೀಗೆಂದು ವಿಲಕ್ಷಣವಾಗಿ ಫೇಸ್ ಬುಕ್ ಪೋಸ್ಟ್ ಹಾಕಿದ್ದ ಟೆಕ್ಕಿ ಮುಜೀಬ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಇನ್ಫಿ ಟೆಕ್ಕಿ ಮೊಹಮ್ಮದ್ ಮುಜೀಬ್ ತನಿಖೆ ವೇಳೆ ಹಲವು ಮಹತ್ವದ ಅಂಶಗಳು ಪತ್ತೆಯಾಗಿವೆ. ಟೆಕ್ಕಿ ಮುಜೀಬ್ ಪಾಕಿಸ್ತಾನದ ವಾಟ್ಸಾಪ್ ನಂಬರ್ ಶೇರ್ ಮಾಡಿದ್ದ. ಧಾರ್ಮಿಕ ಮೂಲಭೂತವಾದ, ದೇಶ ವಿರೋಧಿ ಚಿಂತನೆ ಹೊಂದಿದ್ದ. ಎನ್ಐಎ ಕೂಡಾ ಮುಜೀಬ್ ಲಿಂಕ್​ಗಳ ತನಿಖೆ ನಡೆಸುತ್ತಿದೆ ಎಂದು ತನಿಖೆ ವಿವರವನ್ನು ಪೊಲೀಸರು ಕೋರ್ಟ್​ಗೆ ಸಲ್ಲಿಸಿದ್ದರು.

ಇಂತಹ ಪೋಸ್ಟ್​ಗಳಿಂದ ಸಾಮರಸ್ಯ, ಸಮಗ್ರತೆಗೆ ಧಕ್ಕೆ: ಹೈಕೋರ್ಟ್ ಆರ್ಟಿಕಲ್ 21ಅಡಿ ವೈಯಕ್ತಿಕ ಸ್ವಾತಂತ್ರ್ಯ ಮೂಲಭೂತ ಹಕ್ಕು ಎಂದು ಆರೋಪಿ ಮೊಹಮ್ಮದ್ ಮುಜೀಬ್ ಪರ ವಾದ ಮಂಡಿಸಲಾಗಿತ್ತು. ಆದ್ರೆ ಆರ್ಟಿಕಲ್ 21ಕ್ಕಿಂತ ಸಂವಿಧಾನದ ಮುನ್ನುಡಿಗೆ ಪ್ರಾಮುಖ್ಯತೆ ಇದೆ. ಕೊವಿಡ್ 19ಗೆ ಹೆದರಿರುವ ಜನರಲ್ಲಿ ಭೀತಿ ಹುಟ್ಟಿಸುವ ಯತ್ನ ನಡೆದಿದೆ. ಇಂತಹ ಪೋಸ್ಟ್​ಗಳಿಂದ ಸಾಮರಸ್ಯ, ಸಮಗ್ರತೆಗೆ ಧಕ್ಕೆಯೊದಗಲಿದೆ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್ ನ್ಯಾ. ಕೆ.ಎಸ್.ಮುದಗಲ್ ಟೆಕ್ಕಿ ಮೊಹಮ್ಮದ್ ಮುಜೀಬ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.

Published On - 6:18 pm, Mon, 25 May 20

ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್