AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಬಾರಿ ಅರೆಸ್ಟ್ ಆಗಿ ವಿದೇಶಕ್ಕೆ ಪರಾರಿಯಾಗಿದ್ದ ಜುನೈದ್ ಅಹಮದ್; ಈತನೇ ಬೆಂಗಳೂರಿನಲ್ಲಿ ಬಂಧಿತ ಶಂಕಿತ ಉಗ್ರರ ಮಾಸ್ಟರ್ ಮೈಂಡ್

ಬೆಂಗಳೂರಿನಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಈ ಭಯೋತ್ಪಾದನಾ ಘಟಕವನ್ನು ಸಕ್ರಿಯಗೊಳಿಸಿದವನು ಜುನೈದ್ ಎಂಬುದನ್ನು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಅವರು ಈಗಾಗಲೇ ಖಚಿತಪಡಿಸಿದ್ದಾರೆ.

ಮೂರು ಬಾರಿ ಅರೆಸ್ಟ್ ಆಗಿ ವಿದೇಶಕ್ಕೆ ಪರಾರಿಯಾಗಿದ್ದ ಜುನೈದ್ ಅಹಮದ್; ಈತನೇ ಬೆಂಗಳೂರಿನಲ್ಲಿ ಬಂಧಿತ ಶಂಕಿತ ಉಗ್ರರ ಮಾಸ್ಟರ್ ಮೈಂಡ್
ಜುನೈದ್ ಅಹಮದ್
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: Ganapathi Sharma|

Updated on:Jul 20, 2023 | 4:01 PM

Share

ಬೆಂಗಳೂರು, ಜುಲೈ 19: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಬಂಧನಕ್ಕೊಳಗಾಗಿರುವ ಐವರು ಶಂಕಿತ ಉಗ್ರರ ಪ್ರಮುಖ ಸೂತ್ರದಾರ, ವಿಧ್ವಂಸಕ ಕೃತ್ಯಗಳಿಗೆ ಸಂಚು ಹೂಡಿದ್ದ ಎನ್ನಲಾದ ಜುನೈದ್ ಅಹಮದ್​ ಈ ಹಿಂದೆ ಮೂರು ಬಾರಿ ಬಂಧನಕ್ಕೊಳಗಾಗಿದ್ದ. ಆ ನಂತರ ವಿದೇಶಕ್ಕೆ ಪಲಾಯನಗೈದಿದ್ದ ಎಂಬ ವಿಚಾರ ತಿಳಿದುಬಂದಿದೆ. ಖಚಿತ ಮಾಹಿತಿ ಮೇರೆಗೆ ಬೆಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮನೆಯೊಂದರ ಮೇಲೆ ದಾಳಿ ನಡೆಸಿ ಅನುಮಾನಾಸ್ಪದ ಚಟುವಟಿಕೆಗಳಲ್ಲಿ ತೊಡಗಿದ್ದ ಐವರನ್ನು ಬಂಧಿಸಿದ್ದರು. ದಾಳಿಯಲ್ಲಿ ಸಂದರ್ಭ ದೇಶಿ ನಿರ್ಮಿತ ಬಂದೂಕುಗಳು ಮತ್ತು 45 ಸುತ್ತು ಸಜೀವ ಮದ್ದುಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ನಗರದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಈ ಭಯೋತ್ಪಾದನಾ ಘಟಕವನ್ನು ಸಕ್ರಿಯಗೊಳಿಸಿದವನು ಜುನೈದ್ ಎಂಬುದನ್ನು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಅವರು ಈಗಾಗಲೇ ಖಚಿತಪಡಿಸಿದ್ದಾರೆ.

ಬಂಧಿತರಾಗಿರುವ ಐವರು ಆರೋಪಿಗಳು ಪರಾರಿಯಾಗಿರುವ ಮತ್ತೋರ್ವ ವ್ಯಕ್ತಿ (ಜುನೈದ್) ಜೊತೆಗೆ ಸಂಪರ್ಕ ಹೊಂದಿರುವ ಸಾಧ್ಯತೆ ಇದೆ ಎಂಬುದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ಇವರೆಲ್ಲ 2017ರಲ್ಲಿ ಬೆಂಗಳೂರು ನಗರದ ಆರ್‌ಟಿ ನಗರದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬುದು ತಿಳಿದುಬಂದಿದೆ. ಇವರು ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿಗಳಾಗಿದ್ದಾಗ, 2008ರಲ್ಲಿ ಬೆಂಗಳೂರಿನಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಟಿ ನಜೀರ್‌ನ ಸಂಪರ್ಕಕ್ಕೆ ಬಂದರು. ಇವರಿಗೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ನಜೀರ್ ಕುಮ್ಮಕ್ಕು ನೀಡಿದ್ದಾನೆ ಎಂದು ದಯಾನಂದ ಹೇಳಿರುವುದಾಗಿ ‘ನ್ಯೂಸ್ 9’ ವರದಿ ಮಾಡಿದೆ.

ಮಾಸ್ಟರ್ ಮೈಂಡ್ ಜುನೈದ್ ಅಹಮದ್ ಯಾರು?

ಬೆಂಗಳೂರಿನಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಸಂಚು ರೂಪಿಸಿದ್ದಕ್ಕಾಗಿ ಪೊಲೀಸರಿಗೆ ಬೇಕಾಗಿರುವ 29 ವರ್ಷದ ಯುವಕ ನಗರದ ಆರ್‌ಟಿ ನಗರ ಸಮೀಪದ ಕನಕನಗರದ ನಿವಾಸಿ. 2017ರಲ್ಲಿ ವ್ಯಾಪಾರ ವೈಷಮ್ಯದ ಹಿನ್ನೆಲೆಯಲ್ಲಿ ನೂರ್ ಅಹ್ಮದ್‌ನನ್ನು ಅಪಹರಿಸಿ ಕೊಲೆ ಮಾಡಿದ್ದಕ್ಕಾಗಿ ಆತನನ್ನು ಇತರ ಐವರನ್ನೊಳಗೊಂಡಂತೆ ಪೊಲೀಸರು ಬಂಧಿಸಿದ್ದರು.

2017ರ ಅಕ್ಟೋಬರ್ 10 ರಂದು ಜುನೈದ್ ಮತ್ತು ಇತರ ಐವರನ್ನು ಪೊಲೀಸರು ಬಂಧಿಸಿದ್ದರು. ಆರೋಪಿಗಳನ್ನು ವಿಚಾರಣಾಧೀನ ಕೈದಿಗಳಾಗಿ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನಲ್ಲಿ ಇರಿಸಲಾಗಿತ್ತು. ಜುನೈದ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ನಜೀರ್‌ನ ಸಂಪರ್ಕಕ್ಕೆ ಬಂದಿದ್ದ. ಪೊಲೀಸರ ಪ್ರಕಾರ, ನಜೀರ್‌ಗೆ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಜತೆ ಸಂಪರ್ಕವಿದೆ ಎನ್ನಲಾಗಿದೆ.

ಇದನ್ನೂ ಓದಿ: ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು, ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ

ಜುನೈದ್ ಮತ್ತು ಇತರರು 18 ತಿಂಗಳ ಕಾಲ ಜೈಲಿನಲ್ಲಿದ್ದು, ನಂಗರ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದರು.

2020 ರಲ್ಲಿ, ಜುನೈದ್ ಅನ್ನು ಕೆಂಪು ಮರಳು ಕಳ್ಳಸಾಗಣೆ ಪ್ರಕರಣದಲ್ಲಿ ಮತ್ತೆ ಬಂಧಿಸಲಾಯಿತು. 2021 ರಲ್ಲಿ ಡಕಾಯಿತಿಗೆ ಯೋಜಿಸುತ್ತಿದ್ದಾಗ ಮತ್ತೊಮ್ಮೆ ಅವರನ್ನು ಬಂಧಿಸಲಾಯಿತು. ಅದೇ ವರ್ಷದಲ್ಲಿ, ಆತ ಜಾಮೀನಿನಿಂದ ಹೊರಬಂದಿದ್ದ ಮತ್ತು ಅಂದಿನಿಂದ ತಲೆಮರೆಸಿಕೊಂಡಿದ್ದ. ಜುನೈದ್ ಸದ್ಯ ಮಧ್ಯಪ್ರಾಚ್ಯ ರಾಷ್ಟ್ರವೊಂದರಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನಷ್ಟು ಕ್ರೈಂ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:09 pm, Wed, 19 July 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ