ಬೆಂಗಳೂರು: ವೈದ್ಯನನ್ನು ಅಪಹರಿಸಿ ಕೊಲೆಗೈದಿದ್ದ ಹಂತಕರನ್ನ ಒಂದು ತಿಂಗಳ ಬಳಿಕ ಬಂಧಿಸಿದ ಪೊಲೀಸರು

ಫೆ.7ರಂದು ಖಾಸಗಿ ಆಸ್ಪತ್ರೆಯ ವೈದ್ಯ ಶ್ರೀಧರ್ ಎಂಬುವವರನ್ನ ಅಪಹರಿಸಿ ಕೊಲೆಗೈದು ಸೋಲದೇವನಹಳ್ಳಿ ಬಳಿ ನಿರ್ಜನ ಪ್ರದೇಶದಲ್ಲಿ ಪೆಟ್ರೋಲ್ ಸುರಿದು ಶವವನ್ನು ಸುಟ್ಟುಹಾಕಲಾಗಿತ್ತು. ಇದೀಗ ಕೃತ್ಯ ಎಸಗಿದ ಹಂತಕರನ್ನ ಒಂದು ತಿಂಗಳ ಬಳಿಕ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಬೆಂಗಳೂರು: ವೈದ್ಯನನ್ನು ಅಪಹರಿಸಿ ಕೊಲೆಗೈದಿದ್ದ ಹಂತಕರನ್ನ ಒಂದು ತಿಂಗಳ ಬಳಿಕ ಬಂಧಿಸಿದ ಪೊಲೀಸರು
ಖಾಸಗಿ ಆಸ್ಪತ್ರೆಯ ವೈದ್ಯ ಶ್ರೀಧರ್
Follow us
|

Updated on:Mar 06, 2023 | 12:17 PM

ಬೆಂಗಳೂರು: ಫೆ.7ರಂದು ಯಲಹಂಕದ ಖಾಸಗಿ ಅಸ್ಪತ್ರೆಯಲ್ಲಿ ಫಿಸಿಯೋ ಥೆರಪಿಸ್ಟ್(Physiotherapist) ಅಗಿದ್ದ ಶ್ರೀಧರ್ ಎಂಬುವವರನ್ನ ಅಪಹರಿಸಿ ಕೊಲೆಗೈದು ಸೋಲದೇವನಹಳ್ಳಿ ಬಳಿ ನಿರ್ಜನ ಪ್ರದೇಶದಲ್ಲಿ ಪೆಟ್ರೋಲ್ ಸುರಿದು ಶವವನ್ನು ಸುಟ್ಟುಹಾಕಲಾಗಿತ್ತು. ಇದೀಗ ಒಂದು ತಿಂಗಳ ಬಳಿಕ ಆಂಧ್ರ ಮೂಲದ ಮೂವರು ಅರೋಪಿಗಳಾದ ವೀರಾಂಜನೆಯೆಲು ಅಲಿಯಾಸ್ ಪುಲಿ, ಗೋವರ್ಧನ ಅಲಿಯಾಸ್ ಡಿಜೆ, ಭಾಸ್ಕರ್ ಅಲಿಯಾಸ್ ಬುಡಪ್ಪನನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಇನ್ನು ಮೊದಲಿಗೆ ಬೆಂಕಿಯಲ್ಲಿ ಸುಟ್ಟು ಅಪರಿಚಿತ ಅನುಮಾನಾಸ್ಪದ ಸಾವು ಎಂದು ಕೇಸ್ ದಾಖಲು ಮಾಡಲಾಗಿತ್ತು. ಬಳಿಕ ತನಿಖೆ ವೇಳೆ ಅದು ವೈದ್ಯ ಶ್ರೀಧರ್ ಎಂಬುದು ಬೆಳಕಿ ಬಂದಿದೆ. ನಂತರ ಹಲವಾರು ಆಯಾಮದಿಂದ ತನಿಖೆ ಮಾಡಿದ ಬಳಿಕ ಶ್ರೀಧರ್​ನನ್ನು ಕೊಲೆ ಮಾಡಿ ಸುಟ್ಟು ಹಾಕಲಾಗಿದೆ ಎಂದು ಗೊತ್ತಾಗಿದೆ. ಈ ವೇಳೆ ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ಹಲವಾರು ದಿನಗಳ ಹಿಂದೆ ಬಾರ್​ನಲ್ಲಿ ಆಂಧ್ರ ಮೂಲದ ಈ ಮೂರು ವ್ಯಕ್ತಿಗಳ ನಡುವೆ ನಡೆದಿದ್ದ ಒಂದು ಗಲಾಟೆ ಈ ಕೊಲೆಗೆ ಕಾರಣ ಎಂಬುದು ಗೊತ್ತಾಗಿದೆ. ಕೂಡಲೇ ಮೂವರನ್ನು ಅರೆಸ್ಟ್ ಮಾಡಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ರಾತ್ರಿ ಮನೆಯಿಂದ ಆಚೆ ಹೋದವ ಬರ್ಬರವಾಗಿ ಕೊಲೆಯಾದ, ಆಂಟಿಗಾಗಿ ಬಿತ್ತು ಹೆಣ

ವಿಷ ಸೇವಿಸಿ ಪತಿ ಆತ್ಮಹತ್ಯೆ, ಪತ್ನಿ ವಿರುದ್ಧ ಪೊಲೀಸರಿಗೆ ದೂರು

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಉಗ್ಗೆಹಳ್ಳಿ ಗ್ರಾಮದ ಜಗದೀಶ್ ಎಂಬಾತ ಎರಡು ದಿನದ ಹಿಂದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದಕ್ಕೆ ಆತನ ಪತ್ನಿಯೇ ಕಾರಣ ಎಂದು ಮೃತನ ಕುಟುಂಬಸ್ಥರು ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ನೇತ್ರಾವತಿ ವಿರುದ್ಧ ದೂರು ನೀಡಿದ್ದರು. ನಿನ್ನೆ(ಮಾ.5) ಮನೆಯಿಂದ ನಾಪತ್ತೆಯಾಗಿದ್ದ ಮೃತನ ಪತ್ನಿ ನೇತ್ರಾವತಿ, ಮನನೊಂದು ಮನೆಯ ಸಮೀಪದ ಕಾಫಿ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತುಪ್ರಕರಣ ದಾಖಲಾಗಿತ್ತು.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:17 pm, Mon, 6 March 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ