AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬೈಕ್​ಗಳನ್ನ ಕದ್ದು ಕಡಿಮೆ ಬೆಲೆಗೆ ಮಾರುತ್ತಿದ್ದ ಕಳ್ಳನ ಬಂಧನ

ಬೈಕ್​ಗಳನ್ನ ಕದ್ದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿ ನಿತಿನ್​​​​​​(20)ಎಂಬಾತನನ್ನ ಇದೀಗ ಸಿದ್ದಾಪುರ ಪೊಲೀಸರು ಬಂಧಿಸಿದ್ದು, ಆತನಿಂದ 6 ಲಕ್ಷ ಮೌಲ್ಯದ 12 ದ್ವಿಚಕ್ರ ವಾಹನವನ್ನ ವಶಪಡಿಸಿಕೊಂಡಿದ್ದಾರೆ.

Bengaluru: ಬೈಕ್​ಗಳನ್ನ ಕದ್ದು ಕಡಿಮೆ ಬೆಲೆಗೆ ಮಾರುತ್ತಿದ್ದ ಕಳ್ಳನ ಬಂಧನ
ಬೈಕ್​ ಕಳ್ಳತನ ಮಾಡುತ್ತಿದ್ದ ನಿತಿನ್​​​​​​(20)ಎಂಬಾತನ ಬಂಧನ
TV9 Web
| Edited By: |

Updated on:Mar 04, 2023 | 1:30 PM

Share

ಬೆಂಗಳೂರು: ಬೈಕ್​ಗಳನ್ನ ಕದ್ದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಕಳ್ಳ ನಿತಿನ್​​​​​​(20)ಎಂಬಾತನನ್ನ ಇದೀಗ ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 6 ಲಕ್ಷ ಮೌಲ್ಯದ ಹೋಂಡಾ ಡಿಯೋ, ಪಲ್ಸರ್ , ಆರ್ ಎಕ್ಸ್ ಬೈಕ್​ಗಳು ಸೇರಿ ಒಟ್ಟು 12 ದ್ವಿಚಕ್ರ ವಾಹನವನ್ನ ವಶಪಡಿಸಿಕೊಂಡಿದ್ದಾರೆ. ಮನೆ ಮುಂದೆ ನಿಲ್ಲಿಸುತ್ತಿದ್ದ ಬೈಕ್​ಗಳನ್ನು ಕದ್ದು, ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ, ಆರೋಪಿ ನಿತಿನ್​​​ ವಿರುದ್ಧ ಈಗಾಗಲೇ ಹಲವು ಕಡೆ ಪ್ರಕರಣ ದಾಖಲಾಗಿದ್ದಾವೆ. ಬೆಂಗಳೂರಿನ ಸಿದ್ದಾಪುರ, ಕಲಾಸಿಪಾಳ್ಯ, ವರ್ತೂರು, ಚಂದ್ರಾಲೇಔಟ್, ಕೆ.ಎಸ್.ಲೇಔಟ್ ಸೇರಿ ಒಟ್ಟು 12 ಕಡೆ ಪ್ರಕರಣಗಳು ದಾಖಲಾಗಿದ್ದು, ಸಿದ್ದಾಪುರ ಪೊಲೀಸರು ಇದೀಗ ಬಂಧಿಸಿದ್ದಾರೆ.

ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕುರಿಗಳ ಸಮೇತ ಓರ್ವ ವ್ಯಕ್ತಿ ಸಾವು

ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಘಾಳಪೂಜಿ ಗ್ರಾಮದಲ್ಲಿ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕುರಿಗಳ ಸಮೇತ ಸಣ್ಣತಮ್ಮಪ್ಪ ಜಾಡರ್​​(60)ಎಂಬಾತ ಸಾವನ್ನಪ್ಪಿರುವ ಘಟನೆ ನಡೆದಿದೆ. ಕುರಿ ಕಟ್ಟುವ ಚಪ್ಪರದ ಮನೆಯಲ್ಲಿ ಒಂಟಿಯಾಗಿ ಮಲಗುತ್ತಿದ್ದ ಸಣ್ಣತಮ್ಮಪ್ಪ ಜಾಡರ್, ನಿನ್ನೆ(ಮಾ.3) ರಾತ್ರಿ ವೇಳೆ ಇದ್ದಕ್ಕಿದ್ದ ಹಾಗೆ ಬೆಂಕಿ ಹೊತ್ತಿ ಚಪ್ಪರದ ಮನೆ ಸಮೇತ ಸುಟ್ಟು ಕರಕಲಾಗಿದೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ:81 ವರ್ಷದ ವೃದ್ಧ ಅಪರಾಧಿಗೆ 1 ವರ್ಷ ಅಂಗನವಾಡಿಯಲ್ಲಿ ಉಚಿತ ಸೇವೆ ಸಲ್ಲಿಸುವಂತೆ ವಿಭಿನ್ನ ಶಿಕ್ಷೆ ವಿಧಿಸಿದ ಕರ್ನಾಟಕ ಹೈಕೋರ್ಟ್

ವಿದ್ಯುತ್ ತಂತಿ ತಗುಲಿ 7 ಎಕರೆ ಕಬ್ಬು ಬೆಳೆ ಬೆಂಕಿಗಾಹುತಿ

ಮೈಸೂರು: ಟಿ.ನರಸೀಪುರ ತಾಲೂಕಿನ ವಾಟಾಳು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ನಾಗೇಶ್​ ಎಂಬುವವರಿಗೆ ಸೇರಿದ 7 ಎಕರೆ ಕಬ್ಬು ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. 200ಟನ್ ಕಬ್ಬು ಬೆಳದಿದ್ದ ರೈತ ಅಂದಾಜು 9 ಲಕ್ಷ ರೂಪಾಯಿ ಬೆಲೆಯ ಕಬ್ಬು ಬೆಂಕಿಗಾಹುತಿಯಾಗಿದೆ. ದಿಕ್ಕು ತೋಚದೆ ಕಂಗಲಾದ ರೈತ ನಾಗೇಶ್ ಪರಿಹಾರಕ್ಕಾಗಿ ಒತ್ತಾಯ ಮಾಡಿದ್ದಾರೆ.

ಕಿಡಿಗೇಡಿಗಳ ಕೃತ್ಯಕ್ಕೆ ಧಗಧಗನೆ ಹೊತ್ತಿ ಉರಿದ ಅರಣ್ಯ ಪ್ರದೇಶ

ಹಾವೇರಿ: ಹಾನಗಲ್ ತಾಲೂಕಿನ ಶಿವಪುರ ಬಳಿ 15ಕ್ಕೂ ಹೆಚ್ಚು ಎಕರೆಯಲ್ಲಿದ್ದ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ತೇಗ, ಅಕೇಶಿಯಾ ಸೇರಿದಂತೆ ಬೀಟೆ ಮರಗಳು ಸುಟ್ಟು ಭಸ್ಮವಾಗಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕ್ರಮಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:28 am, Sat, 4 March 23

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!