AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಯಿಂಗ್ ಮಾಡೋ ಯುವಕರಿಂದ ಬೈಕ್ ಸವಾರನ ಮೇಲೆ ತೀವ್ರ ಹಲ್ಲೆ

ಬೆಂಗಳೂರು: ಬೆಂಗಳೂರು ಟ್ರಾಫಿಕ್​ ಪೊಲೀಸರು ಮತ್ತೊಮ್ಮೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಬೈಕ್ ಟೋಯಿಂಗ್ ಮಾಡೋ ಯುವಕರು ಬೈಕ್ ಸವಾರನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಹೆಬ್ಬಾಳ ಬಳಿಯ ಬ್ಯಾಪ್ಟಿಸ್ಟ್ ಆಸ್ಪತ್ರೆ ಬಳಿ ಘಟನೆ ನಡೆದಿದ್ದು, ಬೈಕ್ ಸವಾರ ಕಿರಣ್ ಮೂರ್ತಿ ಅವರು ನೋ ಪಾರ್ಕಿಂಗ್ ಜಾಗದಲ್ಲಿ ಬೈಕ್ ನಿಲ್ಲಿಸಿದ್ದರು. ಈ ವೇಳೆ, ಆರ್.ಟಿ. ನಗರ ಸಂಚಾರಿ ಪೊಲೀಸರು ಬೈಕ್ ತೆಗೆದುಕೊಂಡು ಹೋಗಿದ್ದಾರೆ. ಕಿರಣ್ ಮೂರ್ತಿ ತಮ್ಮ ಬೈಕ್ ವಾಪಸ್ ಕೇಳಲು ಹೋಗಿದ್ದಾರೆ. ಆಗ1600 ರೂಪಾಯಿ […]

ಟೋಯಿಂಗ್ ಮಾಡೋ ಯುವಕರಿಂದ ಬೈಕ್ ಸವಾರನ ಮೇಲೆ ತೀವ್ರ ಹಲ್ಲೆ
ಸಾಧು ಶ್ರೀನಾಥ್​
|

Updated on: Nov 13, 2019 | 5:08 PM

Share

ಬೆಂಗಳೂರು: ಬೆಂಗಳೂರು ಟ್ರಾಫಿಕ್​ ಪೊಲೀಸರು ಮತ್ತೊಮ್ಮೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಬೈಕ್ ಟೋಯಿಂಗ್ ಮಾಡೋ ಯುವಕರು ಬೈಕ್ ಸವಾರನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಹೆಬ್ಬಾಳ ಬಳಿಯ ಬ್ಯಾಪ್ಟಿಸ್ಟ್ ಆಸ್ಪತ್ರೆ ಬಳಿ ಘಟನೆ ನಡೆದಿದ್ದು, ಬೈಕ್ ಸವಾರ ಕಿರಣ್ ಮೂರ್ತಿ ಅವರು ನೋ ಪಾರ್ಕಿಂಗ್ ಜಾಗದಲ್ಲಿ ಬೈಕ್ ನಿಲ್ಲಿಸಿದ್ದರು. ಈ ವೇಳೆ, ಆರ್.ಟಿ. ನಗರ ಸಂಚಾರಿ ಪೊಲೀಸರು ಬೈಕ್ ತೆಗೆದುಕೊಂಡು ಹೋಗಿದ್ದಾರೆ. ಕಿರಣ್ ಮೂರ್ತಿ ತಮ್ಮ ಬೈಕ್ ವಾಪಸ್ ಕೇಳಲು ಹೋಗಿದ್ದಾರೆ. ಆಗ1600 ರೂಪಾಯಿ ಫೈನ್ ಕಟ್ಟುವಂತೆ ಟೋಯಿಂಗ್ ಸಿಬ್ಬಂದಿ ಸೂಚಿಸಿದ್ದಾರೆ. ಅದರಂತೆ ಕಿರಣ್ ಮೂರ್ತಿ 2 ಸಾವಿರ ನೋಟು ಕೊಟ್ಟಿದ್ದಾರೆ. ಆದರೆ ಟೋಯಿಂಗ್ ಬಾಯ್ 1 ಸಾವಿರ ವಾಪಸ್ ಕೊಟ್ಟಿದ್ದಾನೆ.

ಅದಾದನಂತರ, ಸಂಚಾರಿ ಪೊಲೀಸರ ಬಳಿ ಇರಬೇಕಾದ ಫೈನ್ ಹಾಕುವ ಮಿಷನ್ ನಿಮ್ಮ ಬಳಿ ಹೇಗೆ ಬಂತು ಎಂದು ಪ್ರಶ್ನಿಸಿ, ರಸೀದಿ ಕೊಡುವಂತೆ ಬೈಕ್ ಸವಾರ ಕೇಳಿದ್ದಾರೆ. ಈ ವೇಳೆ, ಮಾತಿಗೆ ಮಾತು ಬೆಳೆದು ಕಿರಣ್ ಮೂರ್ತಿ ಮೇಲೆ ಟೋಯಿಂಗ್ ಬಾಯ್ ಹಲ್ಲೆ ನಡೆಸಿದ್ದಾನೆ. ಮುಖ, ಕಿವಿಗೆ ಹೊಡೆದು, ಬೈಕ್ ಟೋಯಿಂಗ್ ಯುವಕರು ಹಲ್ಲೆ ನಡೆಸಿದ್ದಾರೆ. ಆರ್.ಟಿ.ನಗರ ಸಂಚಾರಿ ಠಾಣೆ ಎಎಸ್ಐ ಜಯಪ್ರಕಾಶ್ ಅವರಿಗೆ ಸೇರಿದ ಫೈನ್ ಮಿಷನ್ ಇಟ್ಕೊಂಡು ಟೋಯಿಂಗ್ ಸಿಬ್ಬಂದಿ ಫೈನ್ ಹಾಕ್ತಿದ್ದರು ಎಂದು ಕಿರಣ್ ಆರೋಪಿಸಿದ್ದಾರೆ. ಆರ್ ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು