AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜೋಡಿ ಕೊಲೆ ಪ್ರಕರಣ; ಹತ್ಯೆಗೆ ಕಾರಣ ಬಾಯ್ಬಿಟ್ಟ ಆರೋಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ನಿನ್ನೆ ಬೆಂಗಳೂರಿನ ಕುಂಬಾರಪೇಟೆಯ(Kumbarpet) ಹರಿ ಅಂಗಡಿ ಮಳಿಗೆಯಲ್ಲಿ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಇಬ್ಬರನ್ನು ಬರ್ಬರ ಹತ್ಯೆ ಮಾಡಿದ್ದ. ಕೂಡಲೇ ಆತನನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹತ್ಯೆಗೆ ನಿಖರ ಕಾರಣ ಆರೋಪಿ ಬಾಯ್ಬಿಟ್ಟಿದ್ದಾನೆ.

ಬೆಂಗಳೂರು ಜೋಡಿ ಕೊಲೆ ಪ್ರಕರಣ; ಹತ್ಯೆಗೆ ಕಾರಣ ಬಾಯ್ಬಿಟ್ಟ ಆರೋಪಿ
ಬೆಂಗಳೂರು ಜೋಡಿ ಕೊಲೆ ಆರೋಪಿ ಬದ್ರಿ
ಶಿವಪ್ರಸಾದ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 08, 2024 | 2:51 PM

Share

ಬೆಂಗಳೂರು, ಫೆ.08: ಹಲಸೂರು ಗೇಟ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ(ಫೆ.07) ರಾತ್ರಿ 8.30 ರ ಸುಮಾರಿಗೆ ದುಷ್ಕರ್ಮಿಯೊಬ್ಬ ಇಬ್ಬರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಬದ್ರಿ ಎಂಬಾತನನ್ನು ಬಂಧಿಸಲಾಗಿತ್ತು. ಬಳಿಕ ಆತನನ್ನು ತಡರಾತ್ರಿವರೆಗೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆ ತನ್ನ ಸಂಸಾರ ಹಾಳಾಗುವುದಕ್ಕೆ ಮೃತ ಸುರೇಶ್ ಕಾರಣವಾಗಿದ್ದ, ಈ ಹಿನ್ನಲೆ ಕೊಲೆ ಮಾಡಿದ್ದಾಗಿ ಹೇಳಿಕೆ ನೀಡಿದ್ದ. ಇನ್ನು ಈ ಪ್ರಕರಣದ ತನಿಖೆ ವೇಳೆ ಎರಡು ಅಂಶಗಳ ಬಗ್ಗೆ ಮಾಹಿತಿ ದೊರೆತಿದೆ.

ಕಟ್ಟಡದ ವಿಚಾರವಾಗಿ ಹಲವಾರು ವರ್ಷಗಳಿಂದ ಕಲಹ ಇತ್ತು

ಹತ್ಯೆಯಾದ ಸುರೇಶ್​ ಹಾಗೂ ಆರೋಪಿ ಬದ್ರಿ ಜೊತೆ ಕಟ್ಟಡದ ವಿಚಾರವಾಗಿ ಹಲವಾರು ವರ್ಷಗಳಿಂದ ಕಲಹ ಇತ್ತು. ಇತ್ತಿಚೇಗೆ ನ್ಯಾಯಾಲಯದಲ್ಲಿ ಕೇಸ್ ಮೃತನ ಪರವಾಗಿ ಆಗಿದ್ದ ಕಾರಣ ಅರೋಪಿ ಕೋಪಗೊಂಡಿದ್ದ. ಆದಾದ ಬಳಿಕ ಮೂರು ನಾಲ್ಕು ಬಾರಿ ಜಗಳ ಮಾಡಿಕೊಂಡು ಹಲಸೂರು ಗೇಟ್ ಪೊಲೀಸ್ ಠಾಣೆಗೆ ಹೋಗಿದ್ದರು. ಈ ವೇಳೆ CRPC 107 ಅನ್ವಯ ಬಾಂಡ್ ಬರೆಸಿಕೊಂಡ ಪೊಲೀಸರು, ಇಬ್ಬರಿಗೂ ವಾರ್ನ್ ಮಾಡಿದ್ದರು. ಮುಂದೆ ಗಲಾಟೆ ಮಾಡಿಕೊಂಡರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಜೋಡಿ ಕೊಲೆ; ಚಾಕುವಿನಿಂದ ಇರಿದು ಬರ್ಬರ ಹತ್ಯೆ

ಅರೋಪಿ ಬದ್ರಿಯನ್ನ ಪತ್ನಿ ಬಿಟ್ಟಿದ್ದಳು

ಅರೋಪಿ ಬದ್ರಿ ಪತ್ನಿ ಸುರೇಶ್ ಮಾತು ಕೇಳಿ ನನ್ನನ್ನು ಬಿಟ್ಟಿದ್ದಾಳೆ. ಇದು ಡೈವರ್ಸ್ ಹಂತಕ್ಕೆ ಹೋಗಲು ಸುರೇಶ್​ನೇ ಕಾರಣ ಎನ್ನುವ ವಿಚಾರಕ್ಕೆ ಬದ್ರಿಗೆ ಕೋಪವಿತ್ತು. ಇನ್ನು ಆರೋಪಿ ಪತ್ನಿಯೇ ‘ನೀನು ಸರಿ ಇಲ್ಲ, ನಾನು ನಿನ್ನೊಟ್ಟಿಗೆ ಇರುವುದಿಲ್ಲ ಎಂದು ಪೊಲೀಸರ ಮುಂದೆಯೇ ಹೇಳಿ ಹೋಗಿದ್ದಳು. ಈ ಎಲ್ಲಾ ಕಾರಣಗಳಿಂದ ಬೇಸತ್ತು‌ ಕೊಲೆ‌ ಮಾಡಿದೆ ಎಂದು ಪೊಲೀಸರ ತನಿಖೆ ವೇಳೆ ಆರೋಪಿ  ಬಾಯ್ಬಿಟ್ಟಿದ್ದಾನೆ. ಸದ್ಯ ಪ್ರಾಥಮಿಕ ತನಿಖೆ ವೇಳೆ ಕೊಲೆಯನ್ನು ಒಬ್ಬನೇ ಬಂದು ಮಾಡಿರುವುದು ದೃಢಪಟ್ಟಿದೆ. ಆದ್ರೆ, ಕೊಲೆಗೆ ಬೇರೆ ಯಾರಾದರೂ ಪ್ರೇರಣೆ ನೀಡಿದ್ದಾರಾ ಎಂದು ಪರಿಶೀಲನೆ ಶುರುವಾಗಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Thu, 8 February 24

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ