AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಹಿಳೆಗೆ ಕಿರುಕುಳ ಆರೋಪ; ಮಾಜಿ ಕುಲಸಚಿವ ಪ್ರೊ. ಮೈಲಾರಪ್ಪ ಬಂಧನ

ಮಹಿಳೆಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಪ್ರೊ. ಬಿ.ಸಿ. ಮೈಲಾರಪ್ಪ ಅವರನ್ನು ಮೈಲಾರಪ್ಪ ಬಂಧಿಸಿದ್ದಾರೆ. ವಿರುದ್ಧ ಮಹಿಳೆಯ ಆಸ್ತಿವಿವಾದದ ವಿಚಾರದಲ್ಲಿ ಕಾನೂನು ಸಹಾಯದ ನೆಪದಲ್ಲಿ ಮಹಿಳೆಯನ್ನು ನಿಂದಿಸಿ, ಬಾಗಿಲು ತೆರೆಯುವಂತೆ ಬಲವಂತಪಡಿಸಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಮಹಿಳೆಯ ದೂರಿನ ಆಧಾರದಲ್ಲಿ ಬಸವೇಶ್ವರನಗರ ಪೊಲೀಸ್ ಠಾಣೆ ಕ್ರಮ ಕೈಗೊಂಡಿದೆ.

ಬೆಂಗಳೂರು: ಮಹಿಳೆಗೆ ಕಿರುಕುಳ ಆರೋಪ;  ಮಾಜಿ ಕುಲಸಚಿವ ಪ್ರೊ. ಮೈಲಾರಪ್ಪ ಬಂಧನ
ಮಹಿಳೆಗೆ ಕಿರುಕುಳ ಆರೋಪ, ಪ್ರೊ.ಬಿ.ಸಿ.ಮೈಲಾರಪ್ಪ ಬಂಧನ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Oct 31, 2025 | 11:56 AM

Share

ಬೆಂಗಳೂರು, ಅಕ್ಟೋಬರ್ 31: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಪ್ರೊ. ಬಿ.ಸಿ. ಮೈಲಾರಪ್ಪ (B C Mylarappa Arrest) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ಠಾಣೆಯಲ್ಲಿ ಮಹಿಳೆ ನೀಡಿದ ದೂರು ಆಧಾರದಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಸಂತ್ರಸ್ತೆಯ ವಿರುದ್ಧ ದಾಖಲಾಗಿದ್ದ ಕೇಸ್​ನಲ್ಲಿ ಆಕೆಯ ಪರ ವಾದಿಸಿದ್ದ ಮೈಲಾರಪ್ಪ

ಸಂತ್ರಸ್ತೆ 2022ನೇ ಸಾಲಿನ ನವೆಂಬರ್ ತಿಂಗಳಲ್ಲಿ ಅಂದಿನ ಬೆಂಗಳೂರು ವಿ.ವಿ ನಿರ್ದೇಶಕರಾದ ಪ್ರೊಫೇಸರ್ ಶ್ರೀ.ಬಿ.ಸಿ ಮೈಲಾರಪ್ಪ ನಡೆಸುತ್ತಿದ್ದ ಕರ್ನಾಟಕ ರಾಜ್ಯ ಹರಿಜನ ಸೇವಕ ಸಂಘದಲ್ಲಿ ಲಸಕ್ಕೆ ಸೇರಿದ್ದರು. ಆಗಿನಿಂದ 2 ವರ್ಷ ಅಲ್ಲಿಯೇ ಕೆಲಸ ಮಾಡಿದ್ದರು. ಈ ವೇಳೆ ಆಕೆಯ ಪತಿಯೂ ಅಸಹಜವಾಗಿ ಸಾವನ್ನಪ್ಪಿದ್ದರು. ಈ ವೇಳೆ ಪತಿಯ ಸಾವಿಗೆ ಆಕೆಯೇ ಕಾರಣವೆಂದು ಆಕೆಯ ಅತ್ತೆ, ಮಾವ ದೂರನ್ನೂ ದಾಖಲಿಸಿದ್ದರು. ಅಷ್ಟೇ ಅಲ್ಲದೆ ಸಂತ್ರಸ್ತೆಯ ಹೆಸರಿನಲ್ಲಿದ್ದ ಆಸ್ತಿಯನ್ನು ತಮಗೆ ಬರೆದುಕೊಡುವಂತೆ ಪೀಡಿಸಿದ್ದರು. ಈ ಸಮಯದಲ್ಲಿ ಬಿ.ಸಿ.ಮೈಲಾರಪ್ಪಆಕೆಯ ಗಂಡನ ಸಾವಿನ ಬಗ್ಗೆ ಮಹಾಲಕ್ಷ್ಮೀ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಮತ್ತು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಆಕೆಯ ಪರ ವಾದಿಸಿ, ಸಾಕಷ್ಟು ಓಡಾಟ ನಡೆಸಿದ್ದರು.

ಸಾರ್ವಜನಿಕೆರುದೇ ಮಹಿಳೆಯ ಮೇಲೆ ಹಲ್ಲೆ

ಸಂತ್ರಸ್ತೆಯ ತಂದೆಯ ಆಸ್ತಿಯ ಭಾಗದ ವಿಷಯವಾಗಿಯೂ ಹಲವು ಮನಸ್ತಾಪಗಳುಂಟಾಗಿತ್ತು. ತಂದೆ ಆಸ್ತಿಯ ಭಾಗಾಂಶಕ್ಕಾಗಿ  ಸಂತ್ರಸ್ತೆ ಅಣ್ಣ , ವಕೀಲರಾದ ರಘು ಎನ್ನುವವರ ಸಹಾಯದಿಂದ ನ್ಯಾಯಾಲಯದಲ್ಲಿ ಕೇಸು ದಾಖಲಿಸಿದ್ದರು. ಈ ವಿಷಯವಾಗಿ ವಕೀಲರು ಆಗಾಗ ಸಂತ್ರಸ್ತೆಯನ್ನು ಭೇಟಿ ಮಾಡುವ ಸುದ್ದಿ ತಿಳಿದ ಮೈಲಾರಪ್ಪ ಒಂದು ಹೋಟೆಲ್ ಬಳಿ ಮಾತನಾಡಬೇಕೆಂದು ಸಂತ್ರಸ್ತೆಯನ್ನು ಕರೆಸಿಕೊಂಡಿದ್ದರು. ಭೇಟಿ ಮಾಡಲು ಬಂದಾಗ ಆಕೆಗೆ ಒಂದಿಷ್ಟು ದಾಖಲಾತಿಗಳನ್ನು ನೀಡಿ, ಸಹಿ ಹಾಕುವಂತೆ ಹೇಳಿದ್ದರು. ದಾಖಲಾತಿ ಪರಿಶೀಲಿಸಿದಾಗ, ‘ನನ್ನ ಜೀವನದಲ್ಲಿ ಏನೇ ತೊಂದರೆಯಾದರೂ ಅದಕ್ಕೆ ವಕೀಲ ರಘು ಕಾರಣ’ ಎಂದು ಬರೆದಿದ್ದನ್ನು ನೋಡಿ, ಸಹಿ ಹಾಕಲು ಸಂತ್ರಸ್ತೆ ನಿರಾಕರಿಸಿದ್ದರು. ಹೀಗೆ ಬರೆದು ಸಹಿ ಹಾಕಿಸಿಕೊಳ್ಳಲು ನೀವು ಯಾರೆಂದು ಆಕೆ ಪ್ರಶ್ನಿಸಿದಾಗ ಕೋಪಗೊಂಡ ಮೈಲಾರಪ್ಪ, ನಡುರಸ್ತೆಯಲ್ಲಿಯೇ ನಿಂದಿಸಿ, ಆಕೆಯ ಜುಟ್ಟನ್ನು ಹಿಡಿದು ಹಲ್ಲೆ ನಡೆಸಿದ್ದರು.

ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ

ಇಷ್ಟಕ್ಕೇ ಸುಮ್ಮನಾಗದೇ ಮಹಿಳೆಯ ಮನೆಯ ಬಳಿ ಬಂದು ಬಾಗಿಲು ತೆರೆಯುವಂತೆ ಒತ್ತಾಯಿಸಿದ್ದರು. ಮಹಿಳೆಗೆ ಬೆದರಿಕೆ ಹಾಕಿದ್ದ ಆರೋಪದಲ್ಲಿಯೂ ಸಹ ಕಾಮಾಕ್ಷಿಪಾಳ್ಯ ದಲ್ಲಿ ಕೇಸ್ ದಾಖಲಾಗಿತ್ತು. ಆದರೂ ಆಕೆಗೆ ಕರೆ ಮಾಡಿ ಸಹಕರಿಸುವಂತೆ ಬಲವಂತಪಡಿಸಿದ್ದಾಗಿಯೂ ಮಹಿಳೆ ಹೇಳಿಕೊಂಡಿದ್ದಾರೆ. ಮಹಿಳೆಯ ದೂರಿನ ಆಧಾರ ಮೇಲೆ ಬಸವೇಶ್ವರನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಪ್ರೊ.ಬಿ.ಸಿ.ಮೈಲಾರಪ್ಪ ಬಂಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:55 am, Fri, 31 October 25

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!