AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್

ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ವಿದ್ಯಾ ಲೋಕಾಯುಕ್ತ ಬಲೆಗೆ ಬಿದ್ದ ಆಫೀಸರ್​.

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್
ಲೋಕಾಯುಕ್ತ ಕಚೇರಿImage Credit source: prajavani.net
ಗಂಗಾಧರ​ ಬ. ಸಾಬೋಜಿ
|

Updated on:Mar 01, 2023 | 4:31 PM

Share

ಬೆಂಗಳೂರು: ಲಂಚ (bribe) ಸ್ವೀಕರಿಸುತ್ತಿದ್ದ ವೇಳೆ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ವಿದ್ಯಾ ಲೋಕಾಯುಕ್ತ ಬಲೆಗೆ ಬಿದ್ದ ಆಫೀಸರ್​. ಬೆಂಗಳೂರಿನ ಕಸ್ತೂರಿನಗರ ಸಬ್​ಡಿವಿಷನ್​ ವ್ಯಾಪ್ತಿಯ ಬೆನ್ನಿಗಾನಹಳ್ಳಿ ಘಟನೆ ನಡೆದಿದೆ. ವಿದ್ಯುತ್ ಕಂಬ ತೆರವುಗೊಳಿಸಲು ಅರವಿಂದ ಎನ್ನುವವರಿಂದ 25 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಇಂದು ಮುಂಗಡವಾಗಿ 5 ಸಾವಿರ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದಿದ್ದಾರೆ. ಸದ್ಯ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿರುವ ಲೋಕಾಯುಕ್ತ ಪೊಲೀಸರು ಬೆಸ್ಕಾಂ ಇಒ ವಿದ್ಯಾರನ್ನು ವಶಕ್ಕೆ ಪಡೆದಿದ್ದಾರೆ.

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ, ಆರೋಪಿ ಅರೆಸ್ಟ್

ಬೆಂಗಳೂರು: ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ನೈಜೀರಿಯಾ ಪ್ರಜೆ ನೋಕೊಚಾ. ಯುಕೆಯಲ್ಲಿ ಉದ್ಯೋಗ ಕೊಡಿಸುವುದಾಗಿ ದೊಡ್ಡಗುಬ್ಬಿ ಮೂಲದ ಮಹಿಳೆ ಬಳಿ 37 ಲಕ್ಷ ಹಣ ಪಡೆದು ವಂಚಿಸಿದ್ದ. ಮಹಿಳೆ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನಿಂದ ಲ್ಯಾಪ್​ಟಾಪ್​​​​​, 6 ಮೊಬೈಲ್​, ಸಿಮ್​​ಕಾರ್ಡ್, ಪಾಸ್​ಪೋರ್ಟ್ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಪ್ರಜ್ಞೆ ತಪ್ಪಿ ಬಿದ್ದು ಪ್ರತಿಭಟನಾನಿರತ ವಿದ್ಯಾರ್ಥಿ ಸಾವು: ಸುಳ್ಳು ಆರೋಪವೆಂದ ಅಜೀಂ ಪ್ರೇಮ್​ ಜಿ ವಿವಿ

ಎರಡು ಕುಟುಂಬಗಳ ನಡುವೆ ಗಲಾಟೆ: ವೇಳೆ ತೀವ್ರ ಗಾಯಗೊಂಡಿದ್ದ ವ್ಯಕ್ತಿ ಸಾವು

ಚಿತ್ರದುರ್ಗ: ಎರಡು ಕುಟುಂಬದ ಗಲಾಟೆ ವೇಳೆ ತೀವ್ರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ತಾಲೂಕಿನ ಜೋಡಿಚಿಕ್ಕೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಜೋಡಿಚಿಕ್ಕೇನಹಳ್ಳಿ ಗೊಲ್ಲರಹಟ್ಟಿ ನಿವಾಸಿ ಬೊಮ್ಮಲಿಂಗಪ್ಪ(30) ಮೃತ ವ್ಯಕ್ತಿ. ಪ್ರೇಮಿಗಳು ಊರು ಬಿಟ್ಟು ಹೋಗಿದ್ದಕ್ಕೆ 2 ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆ ಬಿಡಿಸಲು ಹೋಗಿದ್ದ ಬೊಮ್ಮಲಿಂಗಪ್ಪ ಮೇಲೆ ಹಲ್ಲೆ ಮಾಡಲಾಗಿತ್ತು. ತಲೆ ಹಾಗೂ ಎದೆ ಭಾಗಕ್ಕೆ ಹಲ್ಲೆ ಹಿನ್ನೆಲೆ ಬೊಮ್ಮಲಿಂಗಪ್ಪ ಮೃತಪಟ್ಟಿದ್ದಾರೆ.  ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bengaluru: ಪ್ರೀತಿಸಿ ಅವೈಡ್ ಮಾಡಿದ ಪ್ರಿಯತಮೆ; ಮನಸೋ ಇಚ್ಛೆ ಇರಿದು ಯುವತಿಯನ್ನು ಕೊಲೆ ಮಾಡಿದ ಪಾಗಲ್ ಪ್ರೇಮಿ!

ಜಾಗಟಕಲ್​ನಲ್ಲಿ ಶಾರ್ಟ್​ ಸರ್ಕ್ಯೂಟ್​​ನಿಂದ ಹೊತ್ತಿ ಉರಿದ ಹತ್ತಿ

ರಾಯಚೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಭಾರೀ ಅವಘಡ ಸಂಭವಿಸಿದ್ದು, ಕೂದಲೆಳೆಯ ಅಂತರದಲ್ಲಿ ದೊಡ್ಡ ದುರಂತ ತಪ್ಪಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಗಟಕಲ್ ಗ್ರಾಮದಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಹತ್ತಿ ರಾಶಿಗೆ ಬೆಂಕಿ ಹೊತ್ತಿಕೊಂಡಿದೆ. ನಂತರ ನೋಡ ನೋಡುತ್ತಲೇ ಹತ್ತಿ ರಾಶಿ ಪಕ್ಕದ ಗುಡಿಸಲುಗಳಿಗೆ ಬೆಂಕಿ ವ್ಯಾಪಿಸಿದೆ. ಈ ವೇಳೆ ಗುಡಿಸಲಿನಲ್ಲಿದ್ದ ಒಂದು ಸಿಲಿಂಡರ್ ಕೂಡ ಬ್ಲಾಸ್ಟ್ ಆಗಿದೆ.

ಅಗ್ನಿ ಅವಘಡದಲ್ಲಿ ಅಪಾರ ಪ್ರಮಾಣದ ಹತ್ತಿ ಜೊತೆಗೆ ಐದಾರು ಗುಡಿಸಲುಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆಂದ್ರ ಮೂಲದ ರೈತರಿಗೆ ಸೇರಿದ ಗುಡಿಸಲು ಎನ್ನಲಾಗುತ್ತಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ದೇವದುರ್ಗ ಗ್ರಾಮೀಣ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನ ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 4:17 pm, Wed, 1 March 23

ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್