Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಟನ್ ಗ್ರೇವಿಗಾಗಿ ಗಂಡ-ಹೆಂಡತಿ ಮಧ್ಯೆ ಜಗಳ: ನಡುವೆ ನುಸುಳಿದ ವ್ಯಕ್ತಿ ಹತ್ಯೆಗೀಡಾದ!

ಇವರಿಬ್ಬರ ಜಗಳ ಪಕ್ಕದ ಮನೆಯಲ್ಲಿದ್ದ ಬಿಲ್ಲು ಎಂಬಾತನ ಕಣ್ಣಿಗೆ ಬಿದ್ದಿದೆ. ಗಂಡ ಹೆಂಡತಿಯನ್ನು ತಿದ್ದಲು, ಅವರ ಮಧ್ಯೆ ತಿಳಿವಾತಾವರಣ ಮೂಡಿಸಲು ಮುಂದಾಗಿದ್ದಾನೆ. ಇದರಿಂದ ತೀವ್ರ ಅವಮಾನಕ್ಕೊಳಗಾದ ಗಂಡ ಪಪ್ಪು, ಬಿಲ್ಲುನನ್ನು ಕೋಲಿನಿಂದ ಬಡಿದು ಕೊಂದಿದ್ದಾನೆ.

ಮಟನ್ ಗ್ರೇವಿಗಾಗಿ ಗಂಡ-ಹೆಂಡತಿ ಮಧ್ಯೆ ಜಗಳ: ನಡುವೆ ನುಸುಳಿದ ವ್ಯಕ್ತಿ ಹತ್ಯೆಗೀಡಾದ!
ಮಟನ್ ಗ್ರೇವಿಗಾಗಿ ಗಂಡ-ಹೆಂಡತಿ ಮಧ್ಯೆ ಜಗಳ: ನಡುವೆ ನುಸುಳಿದ ವ್ಯಕ್ತಿ ಹತ್ಯೆಗೀಡಾದ!
Follow us
TV9 Web
| Updated By: ಸಾಧು ಶ್ರೀನಾಥ್​

Updated on: Oct 22, 2022 | 1:15 PM

ಪತಿ-ಪತ್ನಿ ಜಗಳ ಆಡುವಾಗ ಮೂರನೇ ವ್ಯಕ್ತಿ ಅಪ್ಪಿತಪ್ಪಿಯೂ ಆ ಕಡೆ ನುಸುಳಬಾರದು, ಆ ಜಗಳಕ್ಕೆ ಅಡ್ಡಿಪಡಿಸಬಾರದು ಎಂಬ ತಿಳಿವಳಿಕೆಯನ್ನು ಹಿರಿಯರು ಆಗಾಗ ಹೇಳುತ್ತಿರುತ್ತಾರೆ. ಅದನ್ನು ನಿರ್ಲಕ್ಷಿಸಿಯೂ ಮಧ್ಯೆ ಹೋದರೆ ಪ್ರಾಣವನ್ನೇ ಕಳೆದುಕೊಳ್ಳಬೇಕಾದೀತು. ಇಂತಹ ಘಟನೆ ಮಧ್ಯಪ್ರದೇಶದ ರಾಜಧಾನಿಯಲ್ಲಿ ನಡೆದಿದೆ.

ಕೆಲವರಿಗೆ ಮಾಂಸ ಎಂದರೆ ಯಮ ಪ್ರೀತಿ. ಮಾಂಸವನ್ನು ತುಂಬಾ ಇಷ್ಟಪಡುತ್ತಾರೆ. ಇಲ್ಲೊಬ್ಬ ವ್ಯಕ್ತಿ ತನ್ನ ಮನೆಗೆ ಕುರಿ ಮಾಂಸ ತಂದಿದ್ದ. ಆದರೆ ಹೆಂಡತಿ ಮಾಂಸದ ಅಡುಗೆ ಮಾಡಲು ನಿರಾಕರಿಸಿದಳು. ಮಂಗಳವಾರದ ದಿನ ಮನೆಯಲ್ಲಿ ಮಟನ್ ಅಡುಗೆ ಮಾಡಬಾರದು, ಆಗೋದಿಲ್ಲವೆಂದು ಪತಿಗೆ ದಿಟವಾಗಿ ಹೇಳಿದ್ದಾಳೆ. ಇದು ಅವರಿಬ್ಬರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ. ಈ ಮಧ್ಯೆ ಪತಿ-ಪತ್ನಿಯ ನಡುವಿನ ಜಗಳ ಬಿಡಿಸಲು ಮೂರನೆಯ ವ್ಯಕ್ತಿ ಬಂದಿದ್ದಾನೆ. ಆದರೆ ಆ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪತಿ-ಪತ್ನಿಯರ ನಡುವೆ ಜಗಳವಾದಾಗ ಮೂರನೇ ವ್ಯಕ್ತಿ ಮೂಗುತೂರಿಸಬಾರದು ಎಂಬ ಹಿರಿಯರ ಸಲಹೆಯನ್ನು ನಿರ್ಲಕ್ಷಿಸಿ ಪ್ರಾಣ ಕಳೆದುಕೊಂಡಿದ್ದಾನೆ.

ಈ ಘಟನೆ ಮಧ್ಯ ಪ್ರದೇಶದ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ಪಪ್ಪು ಅಹಿರ್ವಾರ್ ಎಂಬ ವ್ಯಕ್ತಿ ತನ್ನ ಹೆಂಡತಿಯೊಂದಿಗೆ ಭೋಪಾಲ್‌ನಲ್ಲಿ ವಾಸವಿದ್ದಾನೆ. ಆತ ತನ್ನ ನೆಚ್ಚಿನ ಕುರಿ ಮರಿಯೊಂದನ್ನು ಮನೆಗೆ ತಂದಿದ್ದಾನೆ. ಅವನು ತನ್ನ ಹೆಂಡತಿಗೆ ಅಡುಗೆ ಮಾಡಲು ಆದೇಶಿಸಿದ್ದಾನೆ. ಆದರೆ ಮಂಗಳವಾರ ಹನುಮಂತನಿಗೆ ಪೂಜೆ ನಡೆಯಲಿರುವ ಕಾರಣ ಮಟನ್ ಅಡುಗೆ ಮಾಡದಿರಲು ಹೆಂಡತಿ ನಿರ್ಧರಿಸಿದ್ದಾಳೆ. ಅಸಲಿಗೆ ಮನೆಗೆ ಕುರಿ ಮರಿ ಏಕೆ ತಂದಿರಿ ಎಂದು ಪ್ರಶ್ನಿಸಿದ್ದಾಳೆ. ಆದರೆ ಪತಿರಾಯನೇ ಮಾಂಸದ ಅಡುಗೆ ಮಾಡಲು ಸಿದ್ಧನಾಗಿದ್ದಾನೆ. ಈ ಸಂದರ್ಭದಲ್ಲಿ ಪತಿ-ಪತ್ನಿಯ ನಡುವೆ ತೀವ್ರ ವಾಗ್ವಾದ ನಡೆದಿದೆ.

ಇವರಿಬ್ಬರ ಜಗಳ ಪಕ್ಕದ ಮನೆಯಲ್ಲಿದ್ದ ಬಿಲ್ಲು ಎಂಬಾತನ ಕಣ್ಣಿಗೆ ಬಿದ್ದಿದೆ. ಗಂಡ ಹೆಂಡತಿಯನ್ನು ತಿದ್ದಲು, ಅವರ ಮಧ್ಯೆ ತಿಳಿವಾತಾವರಣ ಮೂಡಿಸಲು ಮುಂದಾಗಿದ್ದಾನೆ. ಇದರಿಂದ ತೀವ್ರ ಅವಮಾನಕ್ಕೊಳಗಾದ ಪಪ್ಪು, ಬಿಲ್ಲುನನ್ನು ಕೋಲಿನಿಂದ ಬಡಿದು ಕೊಂದಿದ್ದಾನೆ. ಬಿಲ್ಲು ಗಂಭೀರವಾಗಿ ಗಾಯಗೊಂಡಿದ್ದಾರೆ. ನೆರೆಹೊರೆಯವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು. ತಲೆಗೆ ತೀವ್ರ ಪೆಟ್ಟುಬಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಬಿಲ್ಲು ಸಾವನ್ನಪ್ಪಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ಪತಿ ಪಪ್ಪು ಅಹಿರ್ವಾರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದ ಎಲ್ಲಾ ಸಾಕ್ಷ್ಯಗಳನ್ನು ಸಂಗ್ರಹಿಸಿದ ನಂತರ ಪೊಲೀಸರು ಪಪ್ಪು ಅಹಿರ್ವಾರ್ ನನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕಾಗಿ ಭೋಪಾಲ್ ಸೆಂಟ್ರಲ್ ಜೈಲಿಗೆ ಕಳುಹಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್