AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೋಪಾಲ್: ಸಾರ್ವಜನಿಕರ ಮುಂದೆಯೇ ಪತ್ನಿಯ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿದ ವ್ಯಕ್ತಿ

22ರ ಮಹಿಳೆ ದೇಹಕ್ಕೆ ಬೆಂಕಿ ಹೊತ್ತಿಕೊಂಡಾಗ ಸಹಾಯಕ್ಕಾಗಿ ಅಂಗಲಾಚುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಕೆಯನ್ನು ಕಾಪಾಡುವುದಕ್ಕಾಗಿ ಜನರು ಆಕೆಯ ಮೈಮೇಲೆ ನೀರು ಸುರಿದಿದ್ದಾರೆ

ಭೋಪಾಲ್: ಸಾರ್ವಜನಿಕರ ಮುಂದೆಯೇ ಪತ್ನಿಯ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿದ ವ್ಯಕ್ತಿ
ಸಾಂಕೇತಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 07, 2022 | 4:41 PM

Share

ಭೋಪಾಲ್: ಭೋಪಾಲ್​​ನಲ್ಲಿ (Bhopal) ಎಲ್ಲರೂ ನೋಡುತ್ತಿದ್ದಂತೆಯೇ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಪೆಟ್ರೋಲ್ (petrol) ಸುರಿದು ಬೆಂಕಿ ಹಚ್ಚಿದ ಘಟನೆ ಮಂಗಳವಾರ ನಡೆದಿದೆ. ಆ ಕೃತ್ಯವೆಸಗಿದ ಆರೋಪಿಯನ್ನು ರಯೀಸ್ ಖಾನ್ ಎಂದು ಗುರುತಿಸಲಾಗಿದೆ. ಸಂಶಯದಿಂದ ನೋಡುತ್ತಾ, ದಿನನಿತ್ಯ ಹಲ್ಲೆ ಮಾಡುವ ಪತಿಯಿಂದ ರೋಸಿಹೋಗಿದ್ದ ಪತ್ನಿ ವಿವಾಹ ವಿಚ್ಛೇದನ ಕೇಳಿದ್ದಳು ಎಂದು ಕೋಪಗೊಂಡ ಖಾನ್ ಈ ಕೃತ್ಯವೆಸಗಿದ್ದಾನೆ. 22ರ ಮಹಿಳೆ ದೇಹಕ್ಕೆ ಬೆಂಕಿ ಹೊತ್ತಿಕೊಂಡಾಗ ಸಹಾಯಕ್ಕಾಗಿ ಅಂಗಲಾಚುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಕೆಯನ್ನು ಕಾಪಾಡುವುದಕ್ಕಾಗಿ ಜನರು ಆಕೆಯ ಮೈಮೇಲೆ ನೀರು ಸುರಿದಿದ್ದಾರೆ. ಇನ್ನು ಕೆಲವರು ತಮ್ಮ ಮನೆಯಿಂದ ಬಕೆಟ್ ನೀರು ಹೊತ್ತು ತಂದು ಬೆಂಕಿ ನಂದಿಸುತ್ತಿರುವುದು ವಿಡಿಯೊದಲ್ಲಿದೆ.  ರಯೀಸ್ ಖಾನ್ ಅಲ್ಲಿಂದ ಕಾಲ್ಕಿತ್ತಿದ್ದು ಇನ್ನೂ ಈತನನ್ನು ಬಂಧಿಸಿಲ್ಲ.

ರಾಜಸ್ಥಾನದ ಅಲೀಗಂಜ್ ಛಬ್ದಾ ನಿವಾಸಿಯಾಗಿರುವ ರಯೀಸ್, ಭೋಪಾಲದ ಮುಸ್ಕಾನ್ ಖಾನ್​​ನ್ನು 2019 ಏಪ್ರಿಲ್ 4ರಂದು ವಿವಾಹವಾಗಿದ್ದನು. ಮುಸ್ಕಾನ್ ಆಕೆಯ ಕುಟುಂಬದವರಿಗೆ ಕರೆ ಮಾಡಿದರೂ ರಯೀಸ್ ಆಕೆ ಮೇಲೆ ಸಂಶಯ ವ್ಯಕ್ತಪಡಿಸಿ ಹಲ್ಲೆ ಮಾಡುತ್ತಿದ್ದ ಎಂದು ಕೊಟ್ವಾಲಿ ಎಸಿಪಿ ನಾಗೇಂದ್ರ ಪಟೇರಿಯಾ ಹೇಳಿದ್ದಾರೆ.

ಈತನ ದೌರ್ಜನ್ಯ ಸಹಿಸಲಾರದೆ ಆಕೆ ಮಾರ್ಚ್ 18ರಂದು ಭೋಪಾಲಕ್ಕೆ ಮರಳಿ ಆಕೆಯ ಸಹೋದರಿಯೊಂದಿಗೆ ವಾಸಿಸುತ್ತಿದ್ದಳು. ವಿವಾಹ ವಿಚ್ಛೇದನಕ್ಕಾಗಿ ಕೋರ್ಟ್ ಮೊರೆ ಹೋಗಿದ್ದ ಆಕೆ ಕೇರ್ ಟೇಕರ್ ಆಗಿ ಹೊಸ ಬದುಕು ಆರಂಭಿಸಿದ್ದಳು. ಹತ್ಯೆಗೆ ಯತ್ನ ನಡೆಸಿದ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದು ರಯೀಸ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Follow Us
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ