AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೋಪಾಲ್: ಸಾರ್ವಜನಿಕರ ಮುಂದೆಯೇ ಪತ್ನಿಯ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿದ ವ್ಯಕ್ತಿ

22ರ ಮಹಿಳೆ ದೇಹಕ್ಕೆ ಬೆಂಕಿ ಹೊತ್ತಿಕೊಂಡಾಗ ಸಹಾಯಕ್ಕಾಗಿ ಅಂಗಲಾಚುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಕೆಯನ್ನು ಕಾಪಾಡುವುದಕ್ಕಾಗಿ ಜನರು ಆಕೆಯ ಮೈಮೇಲೆ ನೀರು ಸುರಿದಿದ್ದಾರೆ

ಭೋಪಾಲ್: ಸಾರ್ವಜನಿಕರ ಮುಂದೆಯೇ ಪತ್ನಿಯ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿದ ವ್ಯಕ್ತಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jul 07, 2022 | 4:41 PM

Share

ಭೋಪಾಲ್: ಭೋಪಾಲ್​​ನಲ್ಲಿ (Bhopal) ಎಲ್ಲರೂ ನೋಡುತ್ತಿದ್ದಂತೆಯೇ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಪೆಟ್ರೋಲ್ (petrol) ಸುರಿದು ಬೆಂಕಿ ಹಚ್ಚಿದ ಘಟನೆ ಮಂಗಳವಾರ ನಡೆದಿದೆ. ಆ ಕೃತ್ಯವೆಸಗಿದ ಆರೋಪಿಯನ್ನು ರಯೀಸ್ ಖಾನ್ ಎಂದು ಗುರುತಿಸಲಾಗಿದೆ. ಸಂಶಯದಿಂದ ನೋಡುತ್ತಾ, ದಿನನಿತ್ಯ ಹಲ್ಲೆ ಮಾಡುವ ಪತಿಯಿಂದ ರೋಸಿಹೋಗಿದ್ದ ಪತ್ನಿ ವಿವಾಹ ವಿಚ್ಛೇದನ ಕೇಳಿದ್ದಳು ಎಂದು ಕೋಪಗೊಂಡ ಖಾನ್ ಈ ಕೃತ್ಯವೆಸಗಿದ್ದಾನೆ. 22ರ ಮಹಿಳೆ ದೇಹಕ್ಕೆ ಬೆಂಕಿ ಹೊತ್ತಿಕೊಂಡಾಗ ಸಹಾಯಕ್ಕಾಗಿ ಅಂಗಲಾಚುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಕೆಯನ್ನು ಕಾಪಾಡುವುದಕ್ಕಾಗಿ ಜನರು ಆಕೆಯ ಮೈಮೇಲೆ ನೀರು ಸುರಿದಿದ್ದಾರೆ. ಇನ್ನು ಕೆಲವರು ತಮ್ಮ ಮನೆಯಿಂದ ಬಕೆಟ್ ನೀರು ಹೊತ್ತು ತಂದು ಬೆಂಕಿ ನಂದಿಸುತ್ತಿರುವುದು ವಿಡಿಯೊದಲ್ಲಿದೆ.  ರಯೀಸ್ ಖಾನ್ ಅಲ್ಲಿಂದ ಕಾಲ್ಕಿತ್ತಿದ್ದು ಇನ್ನೂ ಈತನನ್ನು ಬಂಧಿಸಿಲ್ಲ.

ರಾಜಸ್ಥಾನದ ಅಲೀಗಂಜ್ ಛಬ್ದಾ ನಿವಾಸಿಯಾಗಿರುವ ರಯೀಸ್, ಭೋಪಾಲದ ಮುಸ್ಕಾನ್ ಖಾನ್​​ನ್ನು 2019 ಏಪ್ರಿಲ್ 4ರಂದು ವಿವಾಹವಾಗಿದ್ದನು. ಮುಸ್ಕಾನ್ ಆಕೆಯ ಕುಟುಂಬದವರಿಗೆ ಕರೆ ಮಾಡಿದರೂ ರಯೀಸ್ ಆಕೆ ಮೇಲೆ ಸಂಶಯ ವ್ಯಕ್ತಪಡಿಸಿ ಹಲ್ಲೆ ಮಾಡುತ್ತಿದ್ದ ಎಂದು ಕೊಟ್ವಾಲಿ ಎಸಿಪಿ ನಾಗೇಂದ್ರ ಪಟೇರಿಯಾ ಹೇಳಿದ್ದಾರೆ.

ಈತನ ದೌರ್ಜನ್ಯ ಸಹಿಸಲಾರದೆ ಆಕೆ ಮಾರ್ಚ್ 18ರಂದು ಭೋಪಾಲಕ್ಕೆ ಮರಳಿ ಆಕೆಯ ಸಹೋದರಿಯೊಂದಿಗೆ ವಾಸಿಸುತ್ತಿದ್ದಳು. ವಿವಾಹ ವಿಚ್ಛೇದನಕ್ಕಾಗಿ ಕೋರ್ಟ್ ಮೊರೆ ಹೋಗಿದ್ದ ಆಕೆ ಕೇರ್ ಟೇಕರ್ ಆಗಿ ಹೊಸ ಬದುಕು ಆರಂಭಿಸಿದ್ದಳು. ಹತ್ಯೆಗೆ ಯತ್ನ ನಡೆಸಿದ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದು ರಯೀಸ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್