AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೋಪಾಲ್: ಸಾರ್ವಜನಿಕರ ಮುಂದೆಯೇ ಪತ್ನಿಯ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿದ ವ್ಯಕ್ತಿ

22ರ ಮಹಿಳೆ ದೇಹಕ್ಕೆ ಬೆಂಕಿ ಹೊತ್ತಿಕೊಂಡಾಗ ಸಹಾಯಕ್ಕಾಗಿ ಅಂಗಲಾಚುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಕೆಯನ್ನು ಕಾಪಾಡುವುದಕ್ಕಾಗಿ ಜನರು ಆಕೆಯ ಮೈಮೇಲೆ ನೀರು ಸುರಿದಿದ್ದಾರೆ

ಭೋಪಾಲ್: ಸಾರ್ವಜನಿಕರ ಮುಂದೆಯೇ ಪತ್ನಿಯ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿದ ವ್ಯಕ್ತಿ
ಸಾಂಕೇತಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 07, 2022 | 4:41 PM

Share

ಭೋಪಾಲ್: ಭೋಪಾಲ್​​ನಲ್ಲಿ (Bhopal) ಎಲ್ಲರೂ ನೋಡುತ್ತಿದ್ದಂತೆಯೇ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಪೆಟ್ರೋಲ್ (petrol) ಸುರಿದು ಬೆಂಕಿ ಹಚ್ಚಿದ ಘಟನೆ ಮಂಗಳವಾರ ನಡೆದಿದೆ. ಆ ಕೃತ್ಯವೆಸಗಿದ ಆರೋಪಿಯನ್ನು ರಯೀಸ್ ಖಾನ್ ಎಂದು ಗುರುತಿಸಲಾಗಿದೆ. ಸಂಶಯದಿಂದ ನೋಡುತ್ತಾ, ದಿನನಿತ್ಯ ಹಲ್ಲೆ ಮಾಡುವ ಪತಿಯಿಂದ ರೋಸಿಹೋಗಿದ್ದ ಪತ್ನಿ ವಿವಾಹ ವಿಚ್ಛೇದನ ಕೇಳಿದ್ದಳು ಎಂದು ಕೋಪಗೊಂಡ ಖಾನ್ ಈ ಕೃತ್ಯವೆಸಗಿದ್ದಾನೆ. 22ರ ಮಹಿಳೆ ದೇಹಕ್ಕೆ ಬೆಂಕಿ ಹೊತ್ತಿಕೊಂಡಾಗ ಸಹಾಯಕ್ಕಾಗಿ ಅಂಗಲಾಚುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಕೆಯನ್ನು ಕಾಪಾಡುವುದಕ್ಕಾಗಿ ಜನರು ಆಕೆಯ ಮೈಮೇಲೆ ನೀರು ಸುರಿದಿದ್ದಾರೆ. ಇನ್ನು ಕೆಲವರು ತಮ್ಮ ಮನೆಯಿಂದ ಬಕೆಟ್ ನೀರು ಹೊತ್ತು ತಂದು ಬೆಂಕಿ ನಂದಿಸುತ್ತಿರುವುದು ವಿಡಿಯೊದಲ್ಲಿದೆ.  ರಯೀಸ್ ಖಾನ್ ಅಲ್ಲಿಂದ ಕಾಲ್ಕಿತ್ತಿದ್ದು ಇನ್ನೂ ಈತನನ್ನು ಬಂಧಿಸಿಲ್ಲ.

ರಾಜಸ್ಥಾನದ ಅಲೀಗಂಜ್ ಛಬ್ದಾ ನಿವಾಸಿಯಾಗಿರುವ ರಯೀಸ್, ಭೋಪಾಲದ ಮುಸ್ಕಾನ್ ಖಾನ್​​ನ್ನು 2019 ಏಪ್ರಿಲ್ 4ರಂದು ವಿವಾಹವಾಗಿದ್ದನು. ಮುಸ್ಕಾನ್ ಆಕೆಯ ಕುಟುಂಬದವರಿಗೆ ಕರೆ ಮಾಡಿದರೂ ರಯೀಸ್ ಆಕೆ ಮೇಲೆ ಸಂಶಯ ವ್ಯಕ್ತಪಡಿಸಿ ಹಲ್ಲೆ ಮಾಡುತ್ತಿದ್ದ ಎಂದು ಕೊಟ್ವಾಲಿ ಎಸಿಪಿ ನಾಗೇಂದ್ರ ಪಟೇರಿಯಾ ಹೇಳಿದ್ದಾರೆ.

ಈತನ ದೌರ್ಜನ್ಯ ಸಹಿಸಲಾರದೆ ಆಕೆ ಮಾರ್ಚ್ 18ರಂದು ಭೋಪಾಲಕ್ಕೆ ಮರಳಿ ಆಕೆಯ ಸಹೋದರಿಯೊಂದಿಗೆ ವಾಸಿಸುತ್ತಿದ್ದಳು. ವಿವಾಹ ವಿಚ್ಛೇದನಕ್ಕಾಗಿ ಕೋರ್ಟ್ ಮೊರೆ ಹೋಗಿದ್ದ ಆಕೆ ಕೇರ್ ಟೇಕರ್ ಆಗಿ ಹೊಸ ಬದುಕು ಆರಂಭಿಸಿದ್ದಳು. ಹತ್ಯೆಗೆ ಯತ್ನ ನಡೆಸಿದ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದು ರಯೀಸ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ