AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ದಿನದ ಹೆಣ್ಣುಮಗುವನ್ನು ರೈಲ್ವೆ ಹಳಿ ಮೇಲೆ ಎಸೆದ ನರ್ಸ್; ಸಿಸಿಟಿವಿ ವಿಡಿಯೋ ವೈರಲ್

ಭೂಪಾಲ್​ನಲ್ಲಿ ಶಾಕಿಂಗ್ ಘಟನೆಯೊಂದು ನಡೆದಿದ್ದು, ಆಸ್ಪತ್ರೆಯ ನರ್ಸ್ ಒಬ್ಬರು 2 ದಿನದ ನವಜಾತ ಹೆಣ್ಣುಮಗುವನ್ನು ರೈಲ್ವೆ ಹಳಿಯ ಮೇಲೆ ಎಸೆದು ಹೋಗಿದ್ದಾರೆ. ಈ ಘಟನೆ ಸಿಸಿಟಿವಿ ವಿಡಿಯೋದಲ್ಲಿ ಸೆರೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ 17 ವರ್ಷದ ತಾಯಿ ಮತ್ತು ಆಕೆಯ ಕುಟುಂಬಸ್ಥರ ವಿರುದ್ಧ ಕೇಸ್ ದಾಖಲಿಸಲಾಗಿದೆ.

2 ದಿನದ ಹೆಣ್ಣುಮಗುವನ್ನು ರೈಲ್ವೆ ಹಳಿ ಮೇಲೆ ಎಸೆದ ನರ್ಸ್; ಸಿಸಿಟಿವಿ ವಿಡಿಯೋ ವೈರಲ್
ಹೆಣ್ಣುಮಗುವನ್ನು ರೈಲ್ವೆ ಹಳಿ ಮೇಲೆ ಎಸೆದ ನರ್ಸ್
ಸುಷ್ಮಾ ಚಕ್ರೆ
|

Updated on: Oct 10, 2024 | 8:12 PM

Share

ಭೂಪಾಲ್: ಭೂಪಾಲ್‌ನಲ್ಲಿ ಎರಡು ದಿನಗಳ ಹೆಣ್ಣು ಮಗುವನ್ನು ರೈಲ್ವೆ ಹಳಿಯ ಮೇಲೆ ಎಸೆಯಲಾಗಿದೆ. ಇದರ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಮಗುವನ್ನು ಎಸೆದ ಆರೋಪದ ಮೇಲೆ ಆರೋಪಿಯಾಗಿರುವ ನರ್ಸ್ ಆಸ್ಮಾನ್ ಖಾನ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. 17 ವರ್ಷದ ಅಪ್ರಾಪ್ತ ಬಾಲಕಿಗೆ ಮಗು ಜನಿಸಿರುವುದು ತನಿಖೆಯಿಂದ ತಿಳಿದುಬಂದಿದೆ. ಆಕೆಯ ಮೇಲೆ ಮಾತ್ರವಲ್ಲದೆ ಆಕೆಯ ಕುಟುಂಬದ ಸದಸ್ಯರ ವಿರುದ್ಧವೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 93 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಿಸಿಟಿವಿ ವಿಡಿಯೋ ಕ್ಲಿಪ್‌ನಲ್ಲಿ ನರ್ಸ್ ಎಂದು ಹೇಳಲಾದ ಮಧ್ಯವಯಸ್ಕ ಮಹಿಳೆಯೊಬ್ಬರು ಹಳದಿ ಮತ್ತು ನೀಲಿ ಬಣ್ಣದ ಬ್ಯಾಗ್ ಅನ್ನು ಹೊತ್ತೊಯ್ಯುತ್ತಿರುವುದನ್ನು ನೋಡಬಹುದು. ಇದರಲ್ಲಿ 2 ದಿನದ ಹೆಣ್ಣು ಮಗುವನ್ನು ಇಟ್ಟು, ಆ ಬ್ಯಾಗನ್ನು ರೈಲ್ವೆ ಹಳಿಯ ಮೇಲೆ ಎಸೆಯಲಾಗಿತ್ತು. ಆಕೆ ತನ್ನ ಸ್ಕೂಟರ್‌ನಿಂದ ರೈಲ್ವೇ ಟ್ರ್ಯಾಕ್‌ನ ಬಳಿ ಬ್ಯಾಗ್ ಅನ್ನು ತೆಗೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ನಂತರ ಆಕೆ ಬರಿಗೈಯಲ್ಲಿ ಹಿಂದಿರುಗುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.

ಇದನ್ನೂ ಓದಿ: ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ಶಾಕಿಂಗ್ ವಿಡಿಯೋ ಇಲ್ಲಿದೆ

ಬುಧವಾರ ಭೋಪಾಲ್‌ನ ಬಾಗ್ ಉಮ್ರಾವ್ ದುಲ್ಹಾದಲ್ಲಿ ಹಳಿಗಳ ಬಳಿ ಮಗುವಿನ ಅಳು ಕೇಳಿದ ಸ್ಥಳೀಯರಿಗೆ ನವಜಾತ ಶಿಶು ಪತ್ತೆಯಾಗಿದೆ. ಶಬ್ದವನ್ನು ಅನುಸರಿಸಿ, ಅವರು ಒಳಗೆ ಹೆಣ್ಣು ಮಗುವಿದ್ದ ಚೀಲವನ್ನು ಕಂಡುಕೊಂಡರು. ಆಕೆಯ ಹೊಕ್ಕುಳಬಳ್ಳಿಯನ್ನು ಇನ್ನೂ ಕತ್ತರಿಸಿರಲಿಲ್ಲ. ತಕ್ಷಣ ಆಕೆಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಈ ವಿಷಯ ಗೊತ್ತಾದ ಬಳಿಕ ಆ ಮಗುವನ್ನು ಬುಧವಾರ ಕಮಲಾ ನೆಹರೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಆ ಮಗು ಸಾವನ್ನಪ್ಪಿದೆ. ಅಪ್ರಾಪ್ತ ವಯಸ್ಸಿನಲ್ಲಿ ಮದುವೆಯಾಗದೆ ಮಗುವನ್ನು ಹೆತ್ತಿದ್ದರಿಂದ ಆ ಯುವತಿ ನರ್ಸ್ ಬಳಿ ಹೇಳಿ ಮಗುವನ್ನು ಬಿಸಾಡಲು ಹೇಳಿದ್ದಾಳೆ ಎನ್ನಲಾಗಿದೆ. ಆಕೆಯ ಕುಟುಂಬವು ಈ ಹೆರಿಗೆಯನ್ನು ಸಮಾಜದಿಂದ ಮರೆಮಾಚಲು ಪ್ರಯತ್ನಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ