AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ದಿನದ ಹೆಣ್ಣುಮಗುವನ್ನು ರೈಲ್ವೆ ಹಳಿ ಮೇಲೆ ಎಸೆದ ನರ್ಸ್; ಸಿಸಿಟಿವಿ ವಿಡಿಯೋ ವೈರಲ್

ಭೂಪಾಲ್​ನಲ್ಲಿ ಶಾಕಿಂಗ್ ಘಟನೆಯೊಂದು ನಡೆದಿದ್ದು, ಆಸ್ಪತ್ರೆಯ ನರ್ಸ್ ಒಬ್ಬರು 2 ದಿನದ ನವಜಾತ ಹೆಣ್ಣುಮಗುವನ್ನು ರೈಲ್ವೆ ಹಳಿಯ ಮೇಲೆ ಎಸೆದು ಹೋಗಿದ್ದಾರೆ. ಈ ಘಟನೆ ಸಿಸಿಟಿವಿ ವಿಡಿಯೋದಲ್ಲಿ ಸೆರೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ 17 ವರ್ಷದ ತಾಯಿ ಮತ್ತು ಆಕೆಯ ಕುಟುಂಬಸ್ಥರ ವಿರುದ್ಧ ಕೇಸ್ ದಾಖಲಿಸಲಾಗಿದೆ.

2 ದಿನದ ಹೆಣ್ಣುಮಗುವನ್ನು ರೈಲ್ವೆ ಹಳಿ ಮೇಲೆ ಎಸೆದ ನರ್ಸ್; ಸಿಸಿಟಿವಿ ವಿಡಿಯೋ ವೈರಲ್
ಹೆಣ್ಣುಮಗುವನ್ನು ರೈಲ್ವೆ ಹಳಿ ಮೇಲೆ ಎಸೆದ ನರ್ಸ್
ಸುಷ್ಮಾ ಚಕ್ರೆ
|

Updated on: Oct 10, 2024 | 8:12 PM

Share

ಭೂಪಾಲ್: ಭೂಪಾಲ್‌ನಲ್ಲಿ ಎರಡು ದಿನಗಳ ಹೆಣ್ಣು ಮಗುವನ್ನು ರೈಲ್ವೆ ಹಳಿಯ ಮೇಲೆ ಎಸೆಯಲಾಗಿದೆ. ಇದರ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಮಗುವನ್ನು ಎಸೆದ ಆರೋಪದ ಮೇಲೆ ಆರೋಪಿಯಾಗಿರುವ ನರ್ಸ್ ಆಸ್ಮಾನ್ ಖಾನ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. 17 ವರ್ಷದ ಅಪ್ರಾಪ್ತ ಬಾಲಕಿಗೆ ಮಗು ಜನಿಸಿರುವುದು ತನಿಖೆಯಿಂದ ತಿಳಿದುಬಂದಿದೆ. ಆಕೆಯ ಮೇಲೆ ಮಾತ್ರವಲ್ಲದೆ ಆಕೆಯ ಕುಟುಂಬದ ಸದಸ್ಯರ ವಿರುದ್ಧವೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 93 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಿಸಿಟಿವಿ ವಿಡಿಯೋ ಕ್ಲಿಪ್‌ನಲ್ಲಿ ನರ್ಸ್ ಎಂದು ಹೇಳಲಾದ ಮಧ್ಯವಯಸ್ಕ ಮಹಿಳೆಯೊಬ್ಬರು ಹಳದಿ ಮತ್ತು ನೀಲಿ ಬಣ್ಣದ ಬ್ಯಾಗ್ ಅನ್ನು ಹೊತ್ತೊಯ್ಯುತ್ತಿರುವುದನ್ನು ನೋಡಬಹುದು. ಇದರಲ್ಲಿ 2 ದಿನದ ಹೆಣ್ಣು ಮಗುವನ್ನು ಇಟ್ಟು, ಆ ಬ್ಯಾಗನ್ನು ರೈಲ್ವೆ ಹಳಿಯ ಮೇಲೆ ಎಸೆಯಲಾಗಿತ್ತು. ಆಕೆ ತನ್ನ ಸ್ಕೂಟರ್‌ನಿಂದ ರೈಲ್ವೇ ಟ್ರ್ಯಾಕ್‌ನ ಬಳಿ ಬ್ಯಾಗ್ ಅನ್ನು ತೆಗೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ನಂತರ ಆಕೆ ಬರಿಗೈಯಲ್ಲಿ ಹಿಂದಿರುಗುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.

ಇದನ್ನೂ ಓದಿ: ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ಶಾಕಿಂಗ್ ವಿಡಿಯೋ ಇಲ್ಲಿದೆ

ಬುಧವಾರ ಭೋಪಾಲ್‌ನ ಬಾಗ್ ಉಮ್ರಾವ್ ದುಲ್ಹಾದಲ್ಲಿ ಹಳಿಗಳ ಬಳಿ ಮಗುವಿನ ಅಳು ಕೇಳಿದ ಸ್ಥಳೀಯರಿಗೆ ನವಜಾತ ಶಿಶು ಪತ್ತೆಯಾಗಿದೆ. ಶಬ್ದವನ್ನು ಅನುಸರಿಸಿ, ಅವರು ಒಳಗೆ ಹೆಣ್ಣು ಮಗುವಿದ್ದ ಚೀಲವನ್ನು ಕಂಡುಕೊಂಡರು. ಆಕೆಯ ಹೊಕ್ಕುಳಬಳ್ಳಿಯನ್ನು ಇನ್ನೂ ಕತ್ತರಿಸಿರಲಿಲ್ಲ. ತಕ್ಷಣ ಆಕೆಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಈ ವಿಷಯ ಗೊತ್ತಾದ ಬಳಿಕ ಆ ಮಗುವನ್ನು ಬುಧವಾರ ಕಮಲಾ ನೆಹರೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಆ ಮಗು ಸಾವನ್ನಪ್ಪಿದೆ. ಅಪ್ರಾಪ್ತ ವಯಸ್ಸಿನಲ್ಲಿ ಮದುವೆಯಾಗದೆ ಮಗುವನ್ನು ಹೆತ್ತಿದ್ದರಿಂದ ಆ ಯುವತಿ ನರ್ಸ್ ಬಳಿ ಹೇಳಿ ಮಗುವನ್ನು ಬಿಸಾಡಲು ಹೇಳಿದ್ದಾಳೆ ಎನ್ನಲಾಗಿದೆ. ಆಕೆಯ ಕುಟುಂಬವು ಈ ಹೆರಿಗೆಯನ್ನು ಸಮಾಜದಿಂದ ಮರೆಮಾಚಲು ಪ್ರಯತ್ನಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್