AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ​: ಮಲಗಿದ್ದ ಪತ್ನಿ ಮಕ್ಕಳಿಗೆ ಬೆಂಕಿ ಇಟ್ಟು ಕೊಂದು, ತಾನು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಶಿಡ್ಲಘಟ್ಟ ತಾಲೂಕಿನ ಹೆಣ್ಣೂರು ಗ್ರಾಮದಲ್ಲಿ ಮಲಗಿದ್ದ ಪತ್ನಿಯನ್ನ ಹೊಡೆದು ಕೊಂದು ಬಳಿಕ ಮಲಗಿದ್ದ ತನ್ನದೆ ಇಬ್ಬರು ಹೆಣ್ಣು ಮಕ್ಕಳ ಮೇಲೆ ಬೆಂಕಿ ಹಾಕಿ ಸುಟ್ಟು ಹಾಕಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ​: ಮಲಗಿದ್ದ ಪತ್ನಿ ಮಕ್ಕಳಿಗೆ ಬೆಂಕಿ ಇಟ್ಟು ಕೊಂದು, ತಾನು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಚಿಕ್ಕಬಳ್ಳಾಪುರದಲ್ಲಿ ಪತ್ನಿ ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ
TV9 Web
| Edited By: |

Updated on:Feb 22, 2023 | 8:42 PM

Share

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹೆಣ್ಣೂರು ಗ್ರಾಮದಲ್ಲಿ ಇಂದು(ಫೆ.22) ಬೆಳಿಗ್ಗೆ ಹೃದಯ ವಿದ್ರಾವಕ ಘಟನೆಯೊಂದು ನಡೆದುಹೋಗಿದೆ. ಇದೆ ಗ್ರಾಮದ ನೇತ್ರಾವತಿ ಹಾಗೂ ಸೊಣ್ಣಪ್ಪ ದಂಪತಿಯ ಮನೆಯಲ್ಲಿ ಬೆಳಕು ಹರಿಯುವುದಕ್ಕೂ ಮುನ್ನ ಬೆಂಕಿಯ ಕೆನ್ನಾಲಿಗೆ ಉರಿಯುತ್ತಿತ್ತು. ಇದನ್ನು ಗಮನಿಸಿದ ಸ್ಥಳಿಯರು ಹತ್ತಿರ ಹೋಗಿ ನೋಡುತ್ತಿದ್ದಂತೆ ನೇತ್ರಾವತಿಯ ನೆತ್ತರು ಹರಿಯುತ್ತಿತ್ತು. ಪಕ್ಕದಲ್ಲೆ ಆಕೆಯ ಗಂಡ ಸೊಣ್ಣಪ್ಪ ನರಳಾಡುತ್ತಿದ್ದ ರೂಮ್ ನ ಬೆಡ್ ಮೇಲೆ ದಂಪತಿಯ ದೊಡ್ಡ ಮಗಳು 11 ವರ್ಷದ ಬಾಲಕಿ ವರ್ಷಾ ಬೆಂಕಿಗೆ ಬಲಿಯಾಗಿದ್ದಳು. ಅವಳ ಪಕ್ಕದಲ್ಲೆ ಆಕೆಯ ತಂಗಿ 9 ವರ್ಷದ ಸ್ನೇಹ ಸಹ ಹೆಣವಾಗಿದ್ದಳು. ಅಷ್ಟರಲ್ಲೆ ಸ್ಥಳಿಯರು ಆಗಮಿಸಿ ನೀರಿನಿಂದ ಬೆಂಕಿ ನಂದಿಸಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಇನ್ನು ತಕ್ಷಣ ಸ್ಥಳಕ್ಕೆ ಬಂದ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್.ನಾಗೇಶ್​ ಹಾಗೂ ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಸೊಣ್ಣಪ್ಪನೆ ಪತ್ನಿಯನ್ನು ಹೊಡೆದು ಕೊಂದ ನಂತರ ಮಲಗಿದ್ದ ಮಕ್ಕಳ ಮೇಲೆ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇನ್ನು ಸೊಣ್ಣಪ್ಪನೂ ಸಹ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಾಯಾಳುವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಇತ್ತ ಮಗಳು ಹಾಗೂ ಮೊಮ್ಮಕ್ಕಳ ಸಾವಿನ ಸುದ್ದಿ ಅರಿತು ಸ್ಥಳಕ್ಕೆ ಬಂದ ನೇತ್ರಾವತಿಯ ತಂದೆ, ಗಂಡ ಹೆಂಡತಿ ಚನ್ನಾಗಿಯೆ ಇದ್ದರು. ಸೊಣ್ಣಪ್ಪನ ಅಣ್ಣ ತಮ್ಮಂದಿರ ಮಧ್ಯೆ ಜಮೀನು ವಿವಾದ ಇತ್ತು, ಗಂಡನ ಆಸ್ತಿಗಾಗಿ ನೇತ್ರಾವತಿ ಕೇಸ್ ಹಾಕಿದ್ದಳು. ಸೊಣ್ಣಪ್ಪ ಹಾಗೂ ಆತನ ಸಹೋದರರು ಸೇರಿಕೊಂಡು ನನ್ನ ಮಗಳು ಹಾಗೂ ಮೊಮ್ಮಕ್ಕಳನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಮೈಸೂರು: ಬುದ್ದಿವಾದ ಹೇಳಿದಕ್ಕೆ ಕಬಾಬ್​ ಅಂಗಡಿ ಮಾಲೀಕನನ್ನೇ ಕೊಲೆ ಮಾಡಿದ ಧುರಳರು

ಅಸಲಿಗೆ ಮೃತ ನೇತ್ರಾವತಿಗೆ ಅನೈತಿಕ ಸಂಬಂಧಗಳು ಇದ್ದವಂತೆ, ಇದ್ರಿಂದ ಗಂಡ ಸೊಣ್ಣಪ್ಪ ಹಾಗೂ ಆಕೆಯ ಮದ್ಯೆ ಪ್ರತಿದಿನ ಗಲಾಟೆ ನಡೆಯುತ್ತಿತ್ತಂತೆ, ಜೊತೆಗೆ ಪೊಲೀಸ್ ಠಾಣೆ, ಕೋರ್ಟ್​ ಕಚೇರಿಗಳಲ್ಲಿ ವ್ಯಾಜ್ಯ ನಡೆಯುತ್ತಿದೆ. ಇತ್ತಿಚೀಗೆ ತಂದೆನೇ ಮಗಳ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ ಎಂದು ಸ್ವತಃ ಹೆಂಡತಿಯೇ ಗಂಡನ ಮೇಲೆ ಪೊಲೀಸರಿಗೆ ಸುಳ್ಳು ದೂರು ನೀಡಿದ್ದಳಂತೆ. ಇದ್ರಿಂದ ಹತಾಶವಾಗಿ ಸೊಣ್ಣಪ್ಪ ಪತ್ನಿ ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಯತ್ನ ಮಾಡಿರುವ ಶಂಕೆ ವ್ಯಕ್ತವಾಗಿದೆ.

ವರದಿ: ಭೀಮಪ್ಪ ಪಾಟೀಲ್ ಟಿವಿ9 ಚಿಕ್ಕಬಳ್ಳಾಪುರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:39 pm, Wed, 22 February 23

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?