AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ ಅಡ್ಡ ಗಟ್ಟಿ ಯುವಕನನ್ನ ಕಲ್ಲಿನಿಂದ ಜಜ್ಜಿ ಕೊಲೆ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಬೈಕ್ ಅಡ್ಡ ಗಟ್ಟಿ ಕಲ್ಲಿನಿಂದ ಜಜ್ಜಿ ಯುವಕನನ್ನು ಬರ್ಬರ್ ಹತ್ಯೆ ಮಾಡಿದ ಘಟನೆ ಬೀದರ್(Bidar) ತಾಲೂಕಿನ ಅಲಿಯಂಬರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತ ವ್ಯಕ್ತಿ ಯಾರ ಜೊತೆಗೂ ಜಗಳ ಮಾಡಿಕೊಂಡ ಉದಾಹರಣೆ ಇಲ್ಲ. ಆದರೆ, ಆತ ಕೊಲೆಯಾಗಲು ಕಾರಣ ಮಾತ್ರ ನಿಗೂಢವಾಗಿಯೇ ಇದೆ.

ಬೈಕ್​ ಅಡ್ಡ ಗಟ್ಟಿ ಯುವಕನನ್ನ ಕಲ್ಲಿನಿಂದ ಜಜ್ಜಿ ಕೊಲೆ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಮೃತ ವ್ಯಕ್ತಿ
ಸುರೇಶ ನಾಯಕ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 12, 2023 | 4:20 PM

Share

ಬೀದರ್, ನ.12: ಬೈಕ್ ಅಡ್ಡ ಗಟ್ಟಿ ಕಲ್ಲಿನಿಂದ ಜಜ್ಜಿ ಯುವಕನನ್ನು ಬರ್ಬರ್ ಹತ್ಯೆ ಮಾಡಿದ ಘಟನೆ ಬೀದರ್(Bidar) ತಾಲೂಕಿನ ಅಲಿಯಂಬರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ತಾಲೂಕಿನ ವಿಳಾಸಪೂರ ನಿವಾಸಿಯಾದ ಅಮೀತ್ ಮಾನಾಜಿ(35) ಕೊಲೆಯಾದ ಯುವಕ. ನಿನ್ನೆ(ನ.11) ರಾತ್ರಿ 9:30 ರ ಸುಮಾರಿಗೆ ಬೈಕ್ ಮೇಲೆ ಬರುತ್ತಿದ್ದಾ ತಡೆದು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದ್ದು, ಈ ಘಟನೆ ಜನವಾಡ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇನ್ನು ಮೃತ ಯುವಕ ಹಾಗೂ ಆತನ ತಂದೆ-ತಾಯಿಯ ಊರು ಬೀದರ್ ತಾಲೂಕಿನ ವಿಳಾಸಪುರ ಗ್ರಾಮವಾದರೂ ಕೂಡ ಅವರು ನೆಲೆಸಿದ್ದು ಮೈಸೂರಿನಲ್ಲಿ. ಅಮೀತ್ ಮಾನಾಜಿ ಅಲ್ಲಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಅಮೀತ್​ ಹತ್ತು ವರ್ಷದ ಹಿಂದೆ ಮದುವೆಯಾಗಿದ್ದ. ಜೊತೆಗೆ ಒಂದು ಮುದ್ದಾದ ಮಗು ಕೂಡ ಇತ್ತು. ಹೆಂಡತಿ, ಮಕ್ಕಳು ತಂದೆ-ತಾಯಿ ಎಲ್ಲರೂ ಕೂಡ ಮೈಸೂರಿನಲ್ಲಿಯೇ ವಾಸವಿದ್ದಾರೆ. ಆದರೆ, ಅಮೀತ್ ಮಾತ್ರ ಕೃಷಿ ಮಾಡಬೇಕು ಎನ್ನುವ ಉದ್ದೇಶದಿಂದ ಲಾಕ್ ಡೌನ್ ಅವಧಿಯಲ್ಲಿ ಬೀದರ್ ತಾಲೂಕಿನ ತನ್ನ ತಂದೆಯ ಊರಾದ ವಿಳಾಸಪುರ ಗ್ರಾಮಕ್ಕೆ ಬಂದಿದ್ದ.

ತನ್ನ ತಂದೆಯ 35 ಎಕರೆಯಷ್ಟು ನೀರಾವರಿ ಜಮೀನಿರುವ ಕಾರಣ ಕೃಷಿಯಲ್ಲಿಯೇ ಏನಾದರೂ ಹೊಸದನ್ನ ಮಾಡಬೇಕು ಎನ್ನುವ ಉದ್ದೇಶದಿಂದ ಎರಡು ವರ್ಷದ ಹಿಂದೆ ಬಂದಿದ್ದ. ಜೊತೆಗೆ ಕಳೆದ ಎರಡು ವರ್ಷದಿಂದ ಕಷ್ಟಪಟ್ಟು ಟೋಮ್ಯಾಟೋ ತರಕಾರಿ ಬೆಳೆಸಿಕೊಂಡು ಕೈ ತುಂಬಾ ಆದಾಯ ಗಳಿಸುತ್ತಿದ್ದ. ಬಿಡುವಿನ ವೇಳೆಯಲ್ಲಿ ಮೈಸೂರಿಗೆ ಹೋಗಿ ಬಂದು ಮಾಡುತ್ತಿದ್ದ, ಇತ್ತ ಹೆಂಡತಿಯೂ ಕೂಡ ಆಗಾಗ ಗಂಡನನ್ನ ನೋಡಲು ಬೀದರ್​ಗೆ ಬರುತ್ತಿದ್ದರು. ಸಂಸಾರವೂ ಕೂಡ ಚನ್ನಾಗಿಯೇ ಇತ್ತು. ಇನ್ನೂ ಊರವರ ಜೊತೆಗೆ ಕೂಡ ಅಮೀತ್ ಚನ್ನಾಗಿಯೇ ಇದ್ದು, ಊರಿನ ಜನರ ಪ್ರೀತಿ ವಿಶ್ವಾಸವನ್ನ ಘಳಿಸಿಕೊಂಡಿದ್ದ. ಆದರೆ, ನಿನ್ನೆ ರಾತ್ರಿ ಏಕಾಏಕಿ ಅಮೀತ್ ಕೊಲೆಯಾಗಿ ಹೋಗಿದ್ದಾನೆ. ಇದು ಸಹಜವಾಗಿಯೇ ಗ್ರಾಮಸ್ಥರ ಅಶ್ಚರ್ಯಕ್ಕೂ ಕೂಡ ಕಾರಣವಾಗಿದೆ.

ಇದನ್ನೂ ಓದಿ:ಬೆಂಗಳೂರು: ಡಿಜೆಯಲ್ಲಿ ಕನ್ನಡ, ತಮಿಳು ಹಾಡು ಹಾಕಲು ಸ್ನೇಹಿತರ ಮಧ್ಯೆ ವಾಗ್ವಾದ, ಕೊಲೆಯಲ್ಲಿ ಅಂತ್ಯ

ಭೀಕರವಾಗಿ ಕೊಲೆಯಾಗಿರುವ ಅಮೀತ್ ಮಾನಾಜಿ, ತನ್ನ ಹೊಲದಲ್ಲಿ ಸುಮಾರು 10 ಎಕರೆಯಷ್ಟೂ ಈ ಸಲ ಟೊಮ್ಯಾಟೋ ನಾಟಿ ಮಾಡಬೇಕು ಎಂದು ಯೋಚನೆ ಮಾಡಿದ್ದ. ಈ ಹಿನ್ನಲೆ ಅಮೀತ್ ಟೋಮೋಟೋ ಬೇಸಾಯದ ಬಗ್ಗೆ ಅರಿವಿದ್ದ ಹೊನ್ನಕೇರಿಯ ಪ್ರಗತಿ ಪರ ರೈತನಿಗೆ ಭೇಟಿಯಾಗಿ ಬೆಳೆ, ಮಾರುಕಟ್ಟೆ ಹಾಗೂ ಅದಕ್ಕೆ ಬರುವ ರೋಗದ ಬಗ್ಗೆ ಚರ್ಚೆ ಮಾಡಿ ರಾತ್ರಿ 9:30 ಸುಮಾರಿಗೆ ಮನೆಗೆ ಬರುತ್ತಿದ್ದಾಗ. ಇತನನ್ನು ಕೊಲೆ ಮಾಡಬೇಕು ಎಂದು ಯೋಜನೆ ಮಾಡಿಕೊಂಡಿದ್ದ ಹಂತಕ ಪಡೆ, ಆತ ನಿರ್ಜನ ಪ್ರದೇಶಕ್ಕೆ ಬರುತ್ತಿದ್ದಂತೆ ಅಡ್ಡ ಗಟ್ಟಿದ್ದಾರೆ. ಮೊದಲು ಹೊಡೆದು, ನಂತರ ಕಲ್ಲಿನಿಂದ ತಲೆ, ಬೆನ್ನಿಗೆ, ಕಾಲಿಗೆ ಜಜ್ಜಿದ್ದಾರೆ. ಬಳಿಕ ಜಾಕುವಿನಿಂದ ಹಿಂಬದಿ ಕುತ್ತಿಗೆಗೆ ಇರಿದು ಹತ್ಯೆ ಮಾಡಿದ್ದಾರೆ.

ಕೊಲೆ ಮಾಡಿದವರ್ಯಾರು ಎಂಬ ಯಕ್ಷ ಪ್ರಶ್ನೆ

ಹೌದು, ಮೃತ ವ್ಯಕ್ತಿ ಯಾರ ಜೊತೆಗೂ ಜಗಳ ಮಾಡಿಕೊಂಡ ಉದಾಹರಣೆ ಇಲ್ಲ. ಆದರೆ, ಆತ ಕೊಲೆಯಾಗಲು ಕಾರಣ ಮಾತ್ರ ನಿಗೂಢವಾಗಿಯೇ ಇದೆ. ಇನ್ನು ಕೊಲೆಯಾದ ವಿಷಯ ತಿಳಿಯುತ್ತಿದಂತೆ ಜನವಾಡ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳ, ಬೆರಳಚ್ಚು ತಜ್ಜರ ತಂಡ ಬಂದು ಕೊಲೆಗಾರರ ಸುಳಿವು ಪತ್ತೆ ಹಚ್ಚಲು ಮಾಹಿತಿ ಕಲೆಹಾಕಿ ಹೋಗಿದ್ದಾರೆ. ಘಟನಾ ಸ್ಥಳದಲ್ಲಿಯೇ ಜನಸಾಗರವೇ ತುಂಬಿಕೊಂಡಿತ್ತು, ಕುಟುಂಬಸ್ಥರ ಆಕ್ರಂಧನ ಕೂಡ ಮುಗಿಲು ಮುಟ್ಟಿತ್ತು, ಈ ಕೊಲೆಗೆ ಕಾರಣರಾದವರನ್ನ ಬೇಗ ಪತ್ತೆ ಹಚ್ಚಿ ಅವರಿಗೆ ಉಗ್ರವಾದ ಶಿಕ್ಷ ಕೊಡಬೇಕು ಎಂದು ಕುಟುಂಬಸ್ಥರ ಮನವಿ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!