AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ: ಪೊಲೀಸ್ ವೇಷ ಧರಿಸಿ ವಿದೇಶಿ ಹಣ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ

ಚಿನ್ನ ತರಲು ಮುಂಬೈಗೆ ಹೊರಟಿದ್ದ ವ್ಯಕ್ತಿಯ ಮೇಲೆ ಪೊಲೀಸ್​ ವೇಷಧಾರಿಗಳು ದಾಳಿ ಮಾಡಿ ಆತನ ಬಳಿ ಇದ್ದ 80 ಸಾವಿರ ವಿದೇಶಿ ಕರೆನ್ಸಿಯನ್ನು ಕದ್ದು ಪರಾರಿಯಾಗಿರುವ ಘಟನೆ ಬೀದರ್​​​ನಲ್ಲಿ ನಡೆದಿದೆ. ಇನ್ನು ಬೀದರನ 16 ​ಠಾಣೆಗಳಿಗೆ ಬೇಕಾಗಿದ್ದ 32 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೀದರ: ಪೊಲೀಸ್ ವೇಷ ಧರಿಸಿ ವಿದೇಶಿ ಹಣ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ
ಬೀದರ​ ಪೊಲೀಸ್​
Follow us
ಸುರೇಶ ನಾಯಕ
| Updated By: ವಿವೇಕ ಬಿರಾದಾರ

Updated on: Apr 02, 2024 | 12:49 PM

ಬೀದರ್​, ಏಪ್ರಿಲ್​ 02: ಪೊಲೀಸ್ (Police) ವೇಷ ಧರಿಸಿ ಕಳ್ಳತನ ‌ಮಾಡಿದ್ದ ಮೂವರುನ್ನು ಬಸವಕಲ್ಯಾಣ (Basavakalyan) ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿನ್ನದ ವ್ಯಾಪಾರಿ ತನ್ನ ಸಿಬ್ಬಂದಿ ಬಳಿ 21 ಲಕ್ಷ ರೂಪಾಯಿ ‌ಮೌಲ್ಯದ 80 ಸಾವಿರ ವಿದೇಶಿ ಕರೆನ್ಸಿ ಕೊಟ್ಟು ಚಿನ್ನ ತರಲು ಕಳುಹಿಸಿದ್ದರು. ಸಿಬ್ಬಂದಿ ವಿದೇಶಿ ಕರೆನ್ಸಿಯನ್ನು ತೆಗೆದುಕೊಂಡು ಜಾಗ್ವಾರ ಬಸ್​ನಲ್ಲಿ ಹೈದ್ರಾಬಾದ್​ನಿಂದ ಬಸವಕಲ್ಯಾಣ ಮೂಲಕ ಮುಂಬೈಗೆ ಹೋಗುತ್ತಿದ್ದರು.

ಈ ಮಾಹಿತಿಯನ್ನು ತಿಳಿದಿದ್ದ ಕಳ್ಳರು, ಪೊಲೀಸ್ ವೇಷ ಧರಿಸಿಕೊಂಡು, ಬಸ್ ಮೇಲೆ ದಾಳಿ ಮಾಡಿದ್ದಾರೆ. ಬಳಿಕ ಅಗತ್ಯಕಿಂತ ಹೆಚ್ಚಿನ‌ ಹಣ ತೆಗೆದುಕೊಂಡು ಹೋಗುತ್ತಿದ್ದೀಯಾ ಎಂದು ಸಿಬ್ಬಂದಿ ಬಳಿ ಇದ್ದ ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಾದ ಮೂರೇ ದಿನಗಳಲ್ಲಿ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ಪತ್ನಿಯನ್ನು ಕೊಂದು ರಾತ್ರಿಯಿಡೀ ಶವದ ಜತೆ ಮಲಗಿದ ಪತಿ

16 ಪೊಲೀಸ್ ‌ಠಾಣೆಯ 31 ಕಳ್ಳತನ ಪ್ರಕರಣ ಭೇದಿಸಿದ ಪೊಲೀಸ್

16 ಪೊಲೀಸ್ ‌ಠಾಣೆಗಳಿಗೆ ಬೇಕಾಗಿದ್ದ 32 ಆರೋಪಿಗಳನ್ನು ಬೀದರ್​ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು 31 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಆರೋಪಿಗಳ ಬಳಿ ಇದ್ದ 65 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿಗಳು ಕಳೆದ ಒಂದು ತಿಂಗಳಿನಿಂದ ವಿದೇಶಿ ಕರೆನ್ಸಿ, ಬಂಗಾರ, ಜಾನುವಾರ, ಬೈಕ್, ಮೊಬೈಲ್, ಜೀಪ್, ಆಟೋ ಕದ್ದು ಗ್ಯಾಂಗ್​ ಪರಾರಿಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Daily horoscope: ಇಂದು ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲ
Daily horoscope: ಇಂದು ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?