AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ: ಪೊಲೀಸ್ ವೇಷ ಧರಿಸಿ ವಿದೇಶಿ ಹಣ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ

ಚಿನ್ನ ತರಲು ಮುಂಬೈಗೆ ಹೊರಟಿದ್ದ ವ್ಯಕ್ತಿಯ ಮೇಲೆ ಪೊಲೀಸ್​ ವೇಷಧಾರಿಗಳು ದಾಳಿ ಮಾಡಿ ಆತನ ಬಳಿ ಇದ್ದ 80 ಸಾವಿರ ವಿದೇಶಿ ಕರೆನ್ಸಿಯನ್ನು ಕದ್ದು ಪರಾರಿಯಾಗಿರುವ ಘಟನೆ ಬೀದರ್​​​ನಲ್ಲಿ ನಡೆದಿದೆ. ಇನ್ನು ಬೀದರನ 16 ​ಠಾಣೆಗಳಿಗೆ ಬೇಕಾಗಿದ್ದ 32 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೀದರ: ಪೊಲೀಸ್ ವೇಷ ಧರಿಸಿ ವಿದೇಶಿ ಹಣ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ
ಬೀದರ​ ಪೊಲೀಸ್​
ಸುರೇಶ್ ನಾಯಕ್
| Edited By: ವಿವೇಕ ಬಿರಾದಾರ|

Updated on: Apr 02, 2024 | 12:49 PM

Share

ಬೀದರ್​, ಏಪ್ರಿಲ್​ 02: ಪೊಲೀಸ್ (Police) ವೇಷ ಧರಿಸಿ ಕಳ್ಳತನ ‌ಮಾಡಿದ್ದ ಮೂವರುನ್ನು ಬಸವಕಲ್ಯಾಣ (Basavakalyan) ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿನ್ನದ ವ್ಯಾಪಾರಿ ತನ್ನ ಸಿಬ್ಬಂದಿ ಬಳಿ 21 ಲಕ್ಷ ರೂಪಾಯಿ ‌ಮೌಲ್ಯದ 80 ಸಾವಿರ ವಿದೇಶಿ ಕರೆನ್ಸಿ ಕೊಟ್ಟು ಚಿನ್ನ ತರಲು ಕಳುಹಿಸಿದ್ದರು. ಸಿಬ್ಬಂದಿ ವಿದೇಶಿ ಕರೆನ್ಸಿಯನ್ನು ತೆಗೆದುಕೊಂಡು ಜಾಗ್ವಾರ ಬಸ್​ನಲ್ಲಿ ಹೈದ್ರಾಬಾದ್​ನಿಂದ ಬಸವಕಲ್ಯಾಣ ಮೂಲಕ ಮುಂಬೈಗೆ ಹೋಗುತ್ತಿದ್ದರು.

ಈ ಮಾಹಿತಿಯನ್ನು ತಿಳಿದಿದ್ದ ಕಳ್ಳರು, ಪೊಲೀಸ್ ವೇಷ ಧರಿಸಿಕೊಂಡು, ಬಸ್ ಮೇಲೆ ದಾಳಿ ಮಾಡಿದ್ದಾರೆ. ಬಳಿಕ ಅಗತ್ಯಕಿಂತ ಹೆಚ್ಚಿನ‌ ಹಣ ತೆಗೆದುಕೊಂಡು ಹೋಗುತ್ತಿದ್ದೀಯಾ ಎಂದು ಸಿಬ್ಬಂದಿ ಬಳಿ ಇದ್ದ ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಾದ ಮೂರೇ ದಿನಗಳಲ್ಲಿ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ಪತ್ನಿಯನ್ನು ಕೊಂದು ರಾತ್ರಿಯಿಡೀ ಶವದ ಜತೆ ಮಲಗಿದ ಪತಿ

16 ಪೊಲೀಸ್ ‌ಠಾಣೆಯ 31 ಕಳ್ಳತನ ಪ್ರಕರಣ ಭೇದಿಸಿದ ಪೊಲೀಸ್

16 ಪೊಲೀಸ್ ‌ಠಾಣೆಗಳಿಗೆ ಬೇಕಾಗಿದ್ದ 32 ಆರೋಪಿಗಳನ್ನು ಬೀದರ್​ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು 31 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಆರೋಪಿಗಳ ಬಳಿ ಇದ್ದ 65 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿಗಳು ಕಳೆದ ಒಂದು ತಿಂಗಳಿನಿಂದ ವಿದೇಶಿ ಕರೆನ್ಸಿ, ಬಂಗಾರ, ಜಾನುವಾರ, ಬೈಕ್, ಮೊಬೈಲ್, ಜೀಪ್, ಆಟೋ ಕದ್ದು ಗ್ಯಾಂಗ್​ ಪರಾರಿಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!