AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ರಹಸ್ಯ ಕಾರ್ಯಾಚರಣೆ ವರದಿಯ ಬಿಗ್​ ಇಂಪ್ಯಾಕ್ಟ್: ಸೆಂಟ್ರಲ್ ಜೈಲಿನ 7 ಸಿಬ್ಬಂದಿ ವರ್ಗಾವಣೆ!

ಟಿವಿ9 ರಹಸ್ಯ ಕಾರ್ಯಾಚರಣೆ ವರದಿಯ ಬಿಗ್​ ಇಂಪ್ಯಾಕ್ಟ್: ‘ಪಾಪಿ ಪ್ರಪಂಚ' ಎಂಬ ಹೆಸರಿನಲ್ಲಿ ವರದಿ ಪ್ರಸಾರವಾದ ಬೆನ್ನಲ್ಲೆ ಕಾರಾಗೃಹದ 7 ಸಿಬ್ಬಂಗಳ ವಿರುದ್ಧ ಕ್ರಮ ಕೈಗೊಂಡು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಟಿವಿ9 ರಹಸ್ಯ ಕಾರ್ಯಾಚರಣೆ ವರದಿಯ ಬಿಗ್​ ಇಂಪ್ಯಾಕ್ಟ್: ಸೆಂಟ್ರಲ್ ಜೈಲಿನ 7 ಸಿಬ್ಬಂದಿ ವರ್ಗಾವಣೆ!
ಬೆಂಗಳೂರು ಸೆಂಟ್ರಲ್ ಜೈಲ್
TV9 Web
| Edited By: |

Updated on:Jun 21, 2022 | 9:57 PM

Share

ಬೆಂಗಳೂರು: ನಗರದ ಸೆಂಟ್ರಲ್ ಜೈಲಿನಲ್ಲಿ ಅಕ್ರಮದ ಬಗ್ಗೆ ಟಿವಿ9 ರಹಸ್ಯ ಕಾರ್ಯಾಚರಣೆ ಮಾಡಿದ ವರದಿಯ ಪರಿಣಾಮ ಜೈಲಿನ 7 ಸಿಬ್ಬಂದಿಗಳನ್ನು ಎತ್ತಂಗಡಿ ಮಾಡಲಾಗಿದೆ. ಸೆಂಟ್ರಲ್‌ ಜೈಲಿನಲ್ಲಿ ಕೈದಿಗಳಿಗೆ ಲಕ್ಸುರಿ ಸೌಲಭ್ಯ ನೀಡುತ್ತಿ ಬಗ್ಗೆ ಮಾಹಿತಿ ತಿಳಿದ ಟಿವಿ9 ರಹಸ್ಯ ಕಾರ್ಯಾಚರಣೆ ನಡೆಸಿತ್ತು. ಅದರಂತೆ ‘ಪಾಪಿ ಪ್ರಪಂಚ’ ಎಂಬ ಹೆಸರಿನಲ್ಲಿ ವರದಿ ಪ್ರಸಾರ ಮಾಡಿತ್ತು. ಈ ವರದಿ ಸಲ್ಲಿಕೆ ಬೆನ್ನಲ್ಲೆ ಎಡಿಜಿಪಿ ಮುರುಗನ್ ವರದಿ ಆಧರಿಸಿ 7 ಮಂದಿ ಸಿಬ್ಬಂದಿಗಳನ್ನು ವಿವಿಧ ಜೈಲುಗಳಿಗೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಸಹೋದ್ಯೋಗಿ ಕಾನ್ಸ್​​ಟೇಬಲ್ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ, ಬ್ಲಾಕ್ ಮೇಲ್: 8 ಕಾನ್ಸ್​​ಟೇಬಲ್ಸ್​​ ವಜಾ ಎತ್ತಿಹಿಡಿದ ಹೈಕೋರ್ಟ್, ಏನಿದು ಪ್ರಕರಣ?

ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂಬ ನಿಟ್ಟಿನಲ್ಲಿ ಕಾನೂನು ಪ್ರಕಾರ ಜೈಲಿಗೆ ಕಳುಹಿಸಿದರೆ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ ಕೆಲವು ಸಿಬ್ಬಂದಿಗಳು ಹಣಕ್ಕಾಗಿ ಅಡ್ಡದಾರಿ ಹಿದಿರುವುದು ಎಷ್ಟು ಸರಿ? ಲಕ್ಷ ಲಕ್ಷ ಹಣ ಪಡೆದು ಕೈದಿಗಳಿಗೆ ಐಶಾರಾಮಿ ಸೌಲಭ್ಯಗಳನ್ನು ಸಿಬ್ಬಂದಿಗಳು ನೀಡುತ್ತಿದ್ದರು. ಅದರಂತೆ ಜೈಲಿನಲ್ಲೇ ಕುಳಿತುಕೊಂಡು ಕೈದಿಗಳು ಫೈನಾನ್ಸ್ ದಂಧೆ, ಕೊಲೆ ನಡೆಸಲು ಪ್ಲ್ಯಾನ್ ಹಾಕಲು ಪ್ರಾರಂಭಿಸಿದ್ದರು. ಅಲ್ಲದೆ ಜೈಲಿನ ರೂಂಗಳಿಗೆ ತಿಂಗಳಿಗೆ 3.5 ಲಕ್ಷ, 5 ಲಕ್ಷ ಬಾಡಿಗೆ ಕೂಡ ನೀಡಲಾಗುತ್ತಿತ್ತು. ಇದಕ್ಕೆ ಅಧಿಕಾರಿಗಳ ಕುಮ್ಮಕ್ಕು ಕೂಡ ಇದೆ. ಈ ಬಗ್ಗೆ ಟಿವಿ9 ರಹಸ್ಯ ಕಾರ್ಯಾಚರಣೆ ನಡೆಸಿದಾಗ ಜೈಲಿನಲ್ಲಿ ಅಕ್ರಮ ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: Crime News: ಮನೆ ನಿರ್ಮಾಣಕ್ಕೆ ಲೈಸನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಎಸಿಬಿ ಬಲೆಗೆ

ವರದಿ ಪ್ರಸಾರವಾಗಿದ್ದು ಮಾತ್ರವಲ್ಲದೆ, ವರದಿಯನ್ನು ಸಲ್ಲಿಸಿದ ಬಳಿಕ ಎಡಿಜಿಪಿ ಮುರುಗನ್ ಅವರು 18 ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದ್ದರು. ಈ ಪೈಕಿ 7 ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿ ಕಾರಾಗೃಹ ಇಲಾಖೆ ಆದೇಶ ಹೊರಡಿಸಿದೆ. ಸೆಂಟ್ರಲ್ ಜೈಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್.‌ಅಶೋಕ್ (ವಿಜಯಪುರ), ಎಸ್.ಎನ್.ರಮೇಶ್ (ಬಳ್ಳಾರಿ), ಶಿವಾನಂದ ಕೆ.ಗಾಣಿಗಾರ್ (ಬೆಳಗಾವಿ), ಉಮೇಶ್ ಆರ್.ದೊಡ್ಡಮನಿ (ಮೈಸೂರು), ಲೊಕೇಶ್ ಪಿ. (ಧಾರವಾಡ), ಭೀಮಣ್ಣ ದೇವಪ್ಪ ನೆದಲಗಿ (ಶಿವಮೊಗ್ಗ), ಮಹೇಶ್ ಸಿದ್ದನಗೌಡ ಪಾಟೀಲ್( ಕಲಬುರಗಿ) ಅವರನ್ನು ವರ್ಗಾವಣೆ ಮಾಡಲಾಗಿದೆ.

ಸರ್ಕಾರದ ಆದೇಶದಲ್ಲಿ ಗೊಂದಲ

ಜೈಲಿನಲ್ಲಿ ಅಕ್ರಮ ನಡೆದಿದೆ ಎನ್ನಲಾದ ಕುರಿತು ಸಿಬ್ಬಂದಿಗಳ ವಿರುದ್ಧ ಕ್ರಮಕೈಗೊಳ್ಳಲು ಅವರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಈ ಆದೇಶದಲ್ಲಿ ಗೊಂದಲ ಉಂಟಾಗಿದ್ದು, ಬಡ್ತಿ ನೀಡಿ ಆದೇಶ ಮಾಡಿರುವ ಬಗ್ಗೆ ಉಲ್ಲೇಖಿಸಲಾಗಿದೆ. ಏಳು ಜೈಲಾಧಿಕಾರಿಗಳಿಗೆ ಅಧಿಕಾರಿಗಳ ಮುಖ್ಯ ವೀಕ್ಷಕನಿಂದ ಮುಖ್ಯ ಅಧೀಕ್ಷಕ ಬಡ್ತಿ ಎಂದು ಆದೇಶದಲ್ಲಿ ನಮೂದು ಮಾಡಲಾಗಿದ್ದು, ಕಾಣ್ತಪ್ಪಿನಿಂದ ವಿಷಯಾಂತರ ಆಗಿರುವ ಸಾಧ್ಯತೆ ಇದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:39 pm, Tue, 21 June 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ