AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ರಹಸ್ಯ ಕಾರ್ಯಾಚರಣೆ ವರದಿಯ ಬಿಗ್​ ಇಂಪ್ಯಾಕ್ಟ್: ಸೆಂಟ್ರಲ್ ಜೈಲಿನ 7 ಸಿಬ್ಬಂದಿ ವರ್ಗಾವಣೆ!

ಟಿವಿ9 ರಹಸ್ಯ ಕಾರ್ಯಾಚರಣೆ ವರದಿಯ ಬಿಗ್​ ಇಂಪ್ಯಾಕ್ಟ್: ‘ಪಾಪಿ ಪ್ರಪಂಚ' ಎಂಬ ಹೆಸರಿನಲ್ಲಿ ವರದಿ ಪ್ರಸಾರವಾದ ಬೆನ್ನಲ್ಲೆ ಕಾರಾಗೃಹದ 7 ಸಿಬ್ಬಂಗಳ ವಿರುದ್ಧ ಕ್ರಮ ಕೈಗೊಂಡು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಟಿವಿ9 ರಹಸ್ಯ ಕಾರ್ಯಾಚರಣೆ ವರದಿಯ ಬಿಗ್​ ಇಂಪ್ಯಾಕ್ಟ್: ಸೆಂಟ್ರಲ್ ಜೈಲಿನ 7 ಸಿಬ್ಬಂದಿ ವರ್ಗಾವಣೆ!
ಬೆಂಗಳೂರು ಸೆಂಟ್ರಲ್ ಜೈಲ್
TV9 Web
| Updated By: Rakesh Nayak Manchi|

Updated on:Jun 21, 2022 | 9:57 PM

Share

ಬೆಂಗಳೂರು: ನಗರದ ಸೆಂಟ್ರಲ್ ಜೈಲಿನಲ್ಲಿ ಅಕ್ರಮದ ಬಗ್ಗೆ ಟಿವಿ9 ರಹಸ್ಯ ಕಾರ್ಯಾಚರಣೆ ಮಾಡಿದ ವರದಿಯ ಪರಿಣಾಮ ಜೈಲಿನ 7 ಸಿಬ್ಬಂದಿಗಳನ್ನು ಎತ್ತಂಗಡಿ ಮಾಡಲಾಗಿದೆ. ಸೆಂಟ್ರಲ್‌ ಜೈಲಿನಲ್ಲಿ ಕೈದಿಗಳಿಗೆ ಲಕ್ಸುರಿ ಸೌಲಭ್ಯ ನೀಡುತ್ತಿ ಬಗ್ಗೆ ಮಾಹಿತಿ ತಿಳಿದ ಟಿವಿ9 ರಹಸ್ಯ ಕಾರ್ಯಾಚರಣೆ ನಡೆಸಿತ್ತು. ಅದರಂತೆ ‘ಪಾಪಿ ಪ್ರಪಂಚ’ ಎಂಬ ಹೆಸರಿನಲ್ಲಿ ವರದಿ ಪ್ರಸಾರ ಮಾಡಿತ್ತು. ಈ ವರದಿ ಸಲ್ಲಿಕೆ ಬೆನ್ನಲ್ಲೆ ಎಡಿಜಿಪಿ ಮುರುಗನ್ ವರದಿ ಆಧರಿಸಿ 7 ಮಂದಿ ಸಿಬ್ಬಂದಿಗಳನ್ನು ವಿವಿಧ ಜೈಲುಗಳಿಗೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಸಹೋದ್ಯೋಗಿ ಕಾನ್ಸ್​​ಟೇಬಲ್ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ, ಬ್ಲಾಕ್ ಮೇಲ್: 8 ಕಾನ್ಸ್​​ಟೇಬಲ್ಸ್​​ ವಜಾ ಎತ್ತಿಹಿಡಿದ ಹೈಕೋರ್ಟ್, ಏನಿದು ಪ್ರಕರಣ?

ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂಬ ನಿಟ್ಟಿನಲ್ಲಿ ಕಾನೂನು ಪ್ರಕಾರ ಜೈಲಿಗೆ ಕಳುಹಿಸಿದರೆ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ ಕೆಲವು ಸಿಬ್ಬಂದಿಗಳು ಹಣಕ್ಕಾಗಿ ಅಡ್ಡದಾರಿ ಹಿದಿರುವುದು ಎಷ್ಟು ಸರಿ? ಲಕ್ಷ ಲಕ್ಷ ಹಣ ಪಡೆದು ಕೈದಿಗಳಿಗೆ ಐಶಾರಾಮಿ ಸೌಲಭ್ಯಗಳನ್ನು ಸಿಬ್ಬಂದಿಗಳು ನೀಡುತ್ತಿದ್ದರು. ಅದರಂತೆ ಜೈಲಿನಲ್ಲೇ ಕುಳಿತುಕೊಂಡು ಕೈದಿಗಳು ಫೈನಾನ್ಸ್ ದಂಧೆ, ಕೊಲೆ ನಡೆಸಲು ಪ್ಲ್ಯಾನ್ ಹಾಕಲು ಪ್ರಾರಂಭಿಸಿದ್ದರು. ಅಲ್ಲದೆ ಜೈಲಿನ ರೂಂಗಳಿಗೆ ತಿಂಗಳಿಗೆ 3.5 ಲಕ್ಷ, 5 ಲಕ್ಷ ಬಾಡಿಗೆ ಕೂಡ ನೀಡಲಾಗುತ್ತಿತ್ತು. ಇದಕ್ಕೆ ಅಧಿಕಾರಿಗಳ ಕುಮ್ಮಕ್ಕು ಕೂಡ ಇದೆ. ಈ ಬಗ್ಗೆ ಟಿವಿ9 ರಹಸ್ಯ ಕಾರ್ಯಾಚರಣೆ ನಡೆಸಿದಾಗ ಜೈಲಿನಲ್ಲಿ ಅಕ್ರಮ ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: Crime News: ಮನೆ ನಿರ್ಮಾಣಕ್ಕೆ ಲೈಸನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಎಸಿಬಿ ಬಲೆಗೆ

ವರದಿ ಪ್ರಸಾರವಾಗಿದ್ದು ಮಾತ್ರವಲ್ಲದೆ, ವರದಿಯನ್ನು ಸಲ್ಲಿಸಿದ ಬಳಿಕ ಎಡಿಜಿಪಿ ಮುರುಗನ್ ಅವರು 18 ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದ್ದರು. ಈ ಪೈಕಿ 7 ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿ ಕಾರಾಗೃಹ ಇಲಾಖೆ ಆದೇಶ ಹೊರಡಿಸಿದೆ. ಸೆಂಟ್ರಲ್ ಜೈಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್.‌ಅಶೋಕ್ (ವಿಜಯಪುರ), ಎಸ್.ಎನ್.ರಮೇಶ್ (ಬಳ್ಳಾರಿ), ಶಿವಾನಂದ ಕೆ.ಗಾಣಿಗಾರ್ (ಬೆಳಗಾವಿ), ಉಮೇಶ್ ಆರ್.ದೊಡ್ಡಮನಿ (ಮೈಸೂರು), ಲೊಕೇಶ್ ಪಿ. (ಧಾರವಾಡ), ಭೀಮಣ್ಣ ದೇವಪ್ಪ ನೆದಲಗಿ (ಶಿವಮೊಗ್ಗ), ಮಹೇಶ್ ಸಿದ್ದನಗೌಡ ಪಾಟೀಲ್( ಕಲಬುರಗಿ) ಅವರನ್ನು ವರ್ಗಾವಣೆ ಮಾಡಲಾಗಿದೆ.

ಸರ್ಕಾರದ ಆದೇಶದಲ್ಲಿ ಗೊಂದಲ

ಜೈಲಿನಲ್ಲಿ ಅಕ್ರಮ ನಡೆದಿದೆ ಎನ್ನಲಾದ ಕುರಿತು ಸಿಬ್ಬಂದಿಗಳ ವಿರುದ್ಧ ಕ್ರಮಕೈಗೊಳ್ಳಲು ಅವರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಈ ಆದೇಶದಲ್ಲಿ ಗೊಂದಲ ಉಂಟಾಗಿದ್ದು, ಬಡ್ತಿ ನೀಡಿ ಆದೇಶ ಮಾಡಿರುವ ಬಗ್ಗೆ ಉಲ್ಲೇಖಿಸಲಾಗಿದೆ. ಏಳು ಜೈಲಾಧಿಕಾರಿಗಳಿಗೆ ಅಧಿಕಾರಿಗಳ ಮುಖ್ಯ ವೀಕ್ಷಕನಿಂದ ಮುಖ್ಯ ಅಧೀಕ್ಷಕ ಬಡ್ತಿ ಎಂದು ಆದೇಶದಲ್ಲಿ ನಮೂದು ಮಾಡಲಾಗಿದ್ದು, ಕಾಣ್ತಪ್ಪಿನಿಂದ ವಿಷಯಾಂತರ ಆಗಿರುವ ಸಾಧ್ಯತೆ ಇದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:39 pm, Tue, 21 June 22

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ