AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಕೊಲೆ ಕೇಸ್​ಗೆ ಬಿಗ್​ ಟ್ವಿಸ್ಟ್; ಆಪ್ತನಿಂದಲೇ ಜೈನಮುನಿ ಹತ್ಯೆ

ಜಿಲ್ಲೆಯ ಚಿಕ್ಕೋಡಿ(Chikkodi) ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ (Acharya Shri 108 Kamkumarnandi Maharaj) ಕೊಲೆ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದ್ದು, ಆಪ್ತನಿಂದಲೇ ಜೈನಮುನಿಗಳು ಹತ್ಯೆಯಾಗಿದ್ದಾರೆ.

ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಕೊಲೆ ಕೇಸ್​ಗೆ ಬಿಗ್​ ಟ್ವಿಸ್ಟ್; ಆಪ್ತನಿಂದಲೇ ಜೈನಮುನಿ ಹತ್ಯೆ
ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜ
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 08, 2023 | 11:18 AM

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ(Chikkodi) ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ (Acharya Shri 108 Kamkumarnandi Maharaj) ಕೊಲೆ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದ್ದು, ಆಪ್ತನಿಂದಲೇ ಜೈನಮುನಿಗಳು ಹತ್ಯೆಯಾಗಿದ್ದಾರೆ. ಜೊತೆಗೆ ಆಶ್ರಮದಲ್ಲೇ ಜೈನಮುನಿಯವರನ್ನ ಕೊಲೆ ಮಾಡಿ, ಸಂಬಂಧಿಕರ ಗದ್ದೆಯಲ್ಲಿ ಶವ ಎಸೆದಿರುವ ಕುರಿತು ಆರೋಪಿಗಳು ಪ್ರಾಥಮಿಕ ತನಿಖೆಯಲ್ಲಿ ಹೇಳಿರುವುದಾಗಿ ಚಿಕ್ಕೋಡಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಕೊಲೆಗೆ ಕಾರಣವೇನು?

ಮೂಲತಃ ಖಟಕಬಾವಿ ಗ್ರಾಮದವನೇ ಆಗಿದ್ದ ಪ್ರಮುಖ ಆರೋಪಿ, ಜೈನಮುನಿ ಜೊತೆ ಉತ್ತಮ ಒಡನಾಟ ಹೊಂದಿದ್ದು, ಜೈನಮುನಿಗಳ ವಿಶ್ವಾಸಗಳಿಸಿ ಹಿರೇಕೋಡಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದನಂತೆ. ಬಳಿಕ ಇದನ್ನೇ ಲಾಭ ಮಾಡಿಕೊಂಡು ಅವರ ಬಳಿ ಲಕ್ಷಾಂತರ ರೂಪಾಯಿ ಹಣವನ್ನ ಪಡೆದಿದ್ದಾನೆ. ಇದೇ ಹಣವನ್ನ ವಾಪಸ್ ಕೇಳಿದ್ದಕ್ಕೆ ಇದೀಗ ಜೈನಮುನಿಯನ್ನು ಕೊಲೆ ಮಾಡಿದ್ದಾನೆ.

ಇದನ್ನೂ ಓದಿ:ನಾಪತ್ತೆಯಾಗಿದ್ದ ಜೈನಮುನಿಯ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ಅರೆಸ್ಟ್​

ಕೃತ್ಯಕ್ಕೆ ಚಿಕ್ಕೋಡಿ ಮೂಲದ ಯುವಕನ ಸಹಾಯ ಪಡೆದಿದ್ದ ಪ್ರಮುಖ ಆರೋಪಿ

ಇನ್ನು ಕೊಟ್ಟ ಹಣವನ್ನ ವಾಪಾಸ್​ ಕೇಳಿದ ಕಾರಣಕ್ಕೆ ಹತ್ಯೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿರುವ ಪ್ರಮುಖ ಆರೋಪಿ, ಈ ಕೃತ್ಯಕ್ಕೆ ಚಿಕ್ಕೋಡಿ ಮೂಲದ ಯುವಕನ ಸಹಾಯವನ್ನ ಪಡೆದಿದ್ದನಂತೆ. ಆಶ್ರಮದಲ್ಲೇ ಜೈನಮುನಿಯವರನ್ನ ಕೊಂದು, ಸಂಬಂಧಿಕರ ಗದ್ದೆಯ ಕೊಳವೆಬಾವಿಯಲ್ಲಿ ಎಸೆದಿದ್ದಾಗಿ ವಿಚಾರಣೆ ವೇಳೆ ಪ್ರಮುಖ ಆರೋಪಿ ಹೇಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ಇಬ್ಬರನ್ನೂ ಬಂಧಿಸಿ, ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಆದರೆ, ಇನ್ನೂ ಜೈನಮುನಿಗಳ ಮೃತ ದೇಹ ಸಿಕ್ಕಿಲ್ಲ.

ಜೈನಮುನಿ ಕೊಂದ ಆರೋಪಿಗಳ ವಿರುದ್ಧ ಭಕ್ತರ ಆಕ್ರೋಶ

ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನ ಹತ್ಯೆ ಮಾಡಿ ತುಂಡು ಮಾಡಿದ ಹಾಗೆಯೇ ಆರೋಪಿಗಳನ್ನು ಕೂಡ ತುಂಡು ತುಂಡಾಗಿ ಮಾಡಬೇಕು ಎಂದು ಭಕ್ತೆ ಸುನೀತಾ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಇರುವೆ ಹತ್ಯೆ ಮಾಡೋದೆ ಮಹಾಪಾಪ, ಗುರು ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ ಆಗಬೇಕು. ಮಹಾರಾಜರು ಎಲ್ಲರ ಜೊತೆ ಚೆನ್ನಾಗಿ ಇದ್ದರು. ಯಾರ ಜೊತೆಯೂ ವೈರತ್ವ ಇರಲಿಲ್ಲ. ಬಡವರಿಗೆ ಸಹಾಯ ಮಾಡುತ್ತಿದ್ದರು ಎಂದು ನೋವುನ್ನ ತೋಡಿಕೊಂಡಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:17 am, Sat, 8 July 23

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್