AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಅತ್ಯಾಚಾರ, 5 ಬಾರಿ ಗರ್ಭಪಾತ: ಚಳ್ಳಕೆರೆ CPI ವಿರುದ್ಧ ರೇಪ್​ ಕೇಸ್​ ದಾಖಲಿಸಿ ಈಗ ಉಲ್ಟಾ ಹೊಡೆದ ಯುವತಿ

ಚಿತ್ರದುರ್ಗದ ಚಳ್ಳಕೆರೆ ಠಾಣೆಯ ಸಿಪಿಐ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದೂರು ನೀಡಿದ್ದ ಯುವತಿಯೇ ಇದೀಗ ಉಲ್ಟಾ ಹೊಡೆದಿದ್ದಾಳೆ.

ನಿರಂತರ ಅತ್ಯಾಚಾರ, 5 ಬಾರಿ ಗರ್ಭಪಾತ: ಚಳ್ಳಕೆರೆ CPI ವಿರುದ್ಧ ರೇಪ್​ ಕೇಸ್​ ದಾಖಲಿಸಿ ಈಗ ಉಲ್ಟಾ ಹೊಡೆದ ಯುವತಿ
Challakere CPI Umesh
TV9 Web
| Edited By: |

Updated on:Oct 24, 2022 | 5:42 PM

Share

ಚಿತ್ರದುರ್ಗ: ಯುವತಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಲ್ಲದೇ ಒಂದಲ್ಲ, ಎರಡಲ್ಲ ಐದು ಬಾರಿ ಗರ್ಭಪಾತ ಮಾಡಿಸಿದ ಆರೋಪದ ಮೇಲೆ ಚಿತ್ರದುರ್ಗದ ಚಳ್ಳಕೆರೆ ಠಾಣೆಯ ಸಿಪಿಐ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಯುವತಿಯೇ ಸಿಪಿಐ ವಿರುದ್ಧ ಚಿತ್ರದುರ್ಗ ಮಹಿಳಾ ಠಾಣೆಗೆ ದೂರು ನೀಡಿದ್ದರು. ಆದ್ರೆ, ಇದೀಗ ದೂರು ಕೊಟ್ಟ ಯುವತಿಯೇ ಉಲ್ಟಾ ಹೊಡೆದಿದ್ದಾಳೆ.

ಸಿಪಿಐರಿಂದ ಲೈಂಗಿಕ ದೌರ್ಜನ್ಯ ಆಗಿಲ್ಲ.ಮಾನಸಿಕ ಒತ್ತಡದಿಂದ ದೂರು ನೀಡಿದ್ದೆ ಎಂದು ಯುವತಿ ಮಹಿಳಾ ಪೊಲೀಸ್ ಠಾಣೆಗೆ ಆಗಮಿಸಿ ಹೇಳಿಕೆ ನೀಡಿದ್ದಾಳೆ. ಇದರೊಂದಿಗೆ ಈ ಪ್ರಕರಣ ಬೇರೆ ತಿರುವುಪಡೆದುಕೊಂಡಂತಾಗಿದೆ.

ಚಳ್ಳಕೆರೆ ಠಾಣೆ ಸಿಪಿಐ ವಿರುದ್ಧ ರೇಪ್ ಕೇಸ್ ದಾಖಲು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಠಾಣೆಯ ಸಿಪಿಐ ಜಿ.ಬಿ.ಉಮೇಶ್​ ವಿರುದ್ಧ ಅತ್ಯಾಚಾರ ಆರೋಪ ಮಾಡಿ ಯುವತಿ ನಗರದ ಮಹಿಳಾ ಠಾಣೆಗೆ ದೂರು ನೀಡಿದ್ದಳು. ಇದರ ಬೆನ್ನಲ್ಲೇ ಇಂದು(ಅ.24) ಬೆಳಗ್ಗೆ ಸಿಪಿಐ ಜಿ.ಬಿ.ಉಮೇಶ್ ಅಮಾನತುಗೊಳಿಸಿ ಐಜಿಪಿ ಆದೇಶ ಹೊರಡಿಸಿದ್ದರು. ಆದ್ರೆ, ಇದೀಗ ಯುವತಿ, ಸಿಪಿಐನಿಂದ ಯಾವುದೇ ಅತ್ಯಾಚಾರವಾಗಿಲ್ಲ ಎಂದು ಮಹಿಳಾ ಪೊಲೀಸ್ ಠಾಣೆಗೆ ಆಗಮಿಸಿ ಮರು ಹೇಳಿಕೆ ನೀಡಿದ್ದು ಅಚ್ಚರಿಗೆ ಕಾರಣವಾಗಿದೆ.

ಪ್ರಕರಣ ಹಿನ್ನೆಲೆ

ಸೋದರ ಮಾವನ ಮಗ ಜಿ.ಬಿ. ಉಮೇಶ್ ವಿರುದ್ಧ ಯುವತಿ ದೂರು ನೀಡಿದ್ದ ಯುವತಿ, 5 ವರ್ಷಗಳ ಹಿಂದೆ ದಾವಣಗೆರೆಯಲ್ಲಿ ಇನ್ಸ್​ಪೆಕ್ಟರ್ ಆಗಿದ್ದ ಉಮೇಶ್ ನಿರಂತರವಾಗಿ ಅತ್ಯಾಚಾರ, ಬಲತ್ಕಾರ ಮಾಡಿದ್ದಾರೆ. ಪರಿಣಾಮವಾಗಿ ಐದು ಬಾರಿ ಗರ್ಭಪಾತ ಮಾಡಲಾಗಿದೆ ಎಂದು ಆರೋಪಿಸಿದ್ದರು.

ಐದು ವರ್ಷಗಳ ಹಿಂದೆ ದಾವಣಗೆರೆಯಲ್ಲಿ ನಿವೇಶನದ ಸಮಸ್ಯೆ ಹಿನ್ನೆಲೆ‌ ಯುವತಿಯ ಕುಟುಂಬಸ್ಥರು ಉಮೇಶ್ ಬಳಿ ಸಹಾಯ ಕೇಳಿದ್ದರು. ಅದರಂತೆ ಚಿತ್ರದುರ್ಗದಿಂದ ದಾವಣಗೆರೆಗೆ ಯುವತಿಯನ್ನು ಕರೆಸಿಕೊಂಡ ಸೋದರ ಮಾವನೂ ಆಗಿರುವ ಇನ್​ಸ್ಪೆಕ್ಟರ್ ಉಮೇಶ್, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದನು. ಬಳಿಕ ಕರೆದಾಗ ಹೋಗದಿದ್ದಕ್ಕೆ ಶಿವಮೊಗ್ಗಕ್ಕೆ ಬಂದು ಬಲತ್ಕಾರ ಮಾಡಿದ್ದನು. ಶಿವಮೊಗ್ಗದಲ್ಲಿ ಯುವತಿ ಬಿಇಡಿ ಓದುತ್ತಿದ್ದಾಗ ಅತ್ಯಾಚಾರ ಎಸಗಿರುವ ಆರೋಪ ಮಾಡಲಾಗಿತ್ತು.

ಉಮೇಶನ ಈ ದುಷ್ಕೃತ್ಯದಿಂದ ಯುವತಿ ಐದು ಸಲ ಗರ್ಭಾವತಿಯಾಗಿದ್ದು, ಐದು ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಈಗಾಗಲೇ ಉಮೇಶನಿಗೆ ಇಬ್ಬರು ಹೆಂಡತಿಯರಿದ್ದಾರೆ. 3ನೇ ಪತ್ನಿ ಹಾಗೇ ಇರು ಎಂದು ಯುವತಿಯನ್ನು ಒತ್ತಾಯಿಸುತ್ತಿದ್ದನು. ಅಲ್ಲದೆ ದಾವಣಗೆರೆಯ ನಿವೇಶನ ನಿಮಗೆ ಸಿಗದಂತೆ ಮಾಡುತ್ತೇನೆ, ನಿಮ್ಮ ತಂದೆ ತಾಯಿಯ ಬದುಕು ಬೀದಿಗೆ ತರುತ್ತೇನೆಂದು ಜೀವ ಬೆದರಿಕೆ ಹಾಕಿರುವುದಾಗಿ ದೂರು ನೀಡಲಾಗಿದೆ. ಅದರ ಅನ್ವಯ ಪೊಲೀಸರು ಕಲಂ 376 ಕ್ಲಾಸ್ (2)(k)(n), 323, 504, 506 ಐಪಿಸಿ ಅಡಿ ಪ್ರಕರಣ ದಾಖಲಿಸಿದ್ದರು.

Published On - 5:31 pm, Mon, 24 October 22

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!