Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಬಸ್​ಗೆ ಬೆಂಕಿ ಬಿದ್ದು ಕಂಡಕ್ಟರ್ ಸಜೀವ ದಹನ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್, ಬೆಂಕಿ ಹೊತ್ತಿಕೊಳ್ಳುವ ಮುನ್ನ ಹಣ ವರ್ಗಾವಣೆ

ಬಿಎಂಟಿಸಿ ಬಸ್​​ ಗೆ ಬೆಂಕಿ ಬಿದ್ದು ಕಂಡಕ್ಟರ್ ಸಜೀವ ದಹನ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆ ವೇಳೆ ರೋಚಕ ವಿಚಾರ ಬೆಳಕಿಗೆ ಬಂದಿದೆ.

ಬಿಎಂಟಿಸಿ ಬಸ್​ಗೆ ಬೆಂಕಿ ಬಿದ್ದು ಕಂಡಕ್ಟರ್ ಸಜೀವ ದಹನ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್, ಬೆಂಕಿ ಹೊತ್ತಿಕೊಳ್ಳುವ ಮುನ್ನ ಹಣ ವರ್ಗಾವಣೆ
ಬಿಎಂಟಿಸಿ ಬಸ್​ನಲ್ಲಿ ಸಜೀವ ದಹನವಾದ ಕಂಡಕ್ಟರ್
Follow us
ರಮೇಶ್ ಬಿ. ಜವಳಗೇರಾ
|

Updated on:Mar 23, 2023 | 11:17 AM

ಬೆಂಗಳೂರು: ಬಿಎಂಟಿಸಿ ಬಸ್​ಗೆ ಬೆಂಕಿ ತಗುಲಿ ನಿರ್ವಾಹಕ(BMTC Bus Conductor) ಸಜೀವ ದಹನ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆ ವೇಳೆ ಬಿಎಂಟಿಸಿ ಕಂಡಕ್ಟರ್ ಮುತ್ತಯ್ಯ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಾರ್ಚ್ 9 ರಂದು ಬ್ಯಾಡರಹಳ್ಳಿ ನಿಲ್ದಾಣದಲ್ಲಿ ಸುಮ್ಮನಹಳ್ಳಿ ಡಿಪೋ 31ಕ್ಕೆ ಸೇರಿದ್ದ ಬಿಎಂಟಿಸಿ ಬಸ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಈ ಘಟನೆಯಲ್ಲಿ ಕಂಡಕ್ಟರ್​ ಮುತ್ತಯ್ಯ ಸಜೀವ ದಹನವಾಗಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ವೇಳೆ ರೋಚಕ ವಿಚಾರಗಳು ಬೆಳಕಿಗೆ ಬಂದಿವೆ. ಮೃತ ಕಂಡಕ್ಟರ್​ ಮುತ್ತಯ್ಯ ಅವರ ಮೊಬೈಲ್ ಹಾಗೂ ಯುಪಿಐ ಐಡಿ ಪರಿಶೀಲನೆ ನಡೆಸಿದ್ದು, ಅಗ್ನಿ ದುರಂತದ ರಾತ್ರಿ ಮುತ್ತಯ್ಯ ಯುಪಿಐ ಐಡಿಯಿಂದ ಕೊನೆಯದಾಗಿ ಹಣ ವರ್ಗಾವಣೆಯಾಗಿರುವುದು ತಿಳಿದುಬಂದಿದೆ. ಅಗ್ನಿ ದುರಂತ ಸಂಭವಿಸಿದ ಸ್ಥಳದಿಂದ ಕೊಂಚ ದೂರ ಇರುವ ಪೆಟ್ರೋಲ್ ಬಂಕ್ ಖಾತೆಗೆ 700 ರೂಪಾಯಿ ಹಣ ವರ್ಗಾವಣೆಯಾಗಿದ್ದು, ಪೆಟ್ರೋಲ್, ಡಿಸೇಲ್ ಖರೀದಿಸಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಎರಡು ಲೀಟರ್ ಪೆಟ್ರೋಲ್, ಐದು ಲೀಟರ್ ಡಿಸೇಲ್ ತಂದು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆ ಎನ್ನುವ ಬಗ್ಗೆ ಕೆಲವು ಪೂರಕ ಅಂಶಗಳು ಪತ್ತೆಯಾಗಿವೆ.

ಇದನ್ನೂ ಓದಿ: ಬಿಎಂಟಿಸಿ ಬಸ್​ನಲ್ಲಿ ಕಂಡಕ್ಟರ್ ಸಜೀವ ದಹನ:​ ನಿರ್ವಾಹಕ ಸಾವಿನ ಸುತ್ತ ಅನುಮಾನಗಳ ಹುತ್ತ

ಬಸ್ ಹಾಲ್ಟ್ ಆದ ನಂತರ ಹೊರ ಹೋಗಿ ಬಂದಿದ್ದ ಮುತ್ತಯ್ಯ, ಡ್ರೈವರ್ ಪ್ರಕಾಶ್ ನನ್ನ ಮಲಗುವಂತೆ ಹೇಳಿ ಕಳುಹಿಸಿದ್ದರು. ಬಳಿಕ ಡ್ರೈವರ್ ಮಲಗಿದ ನಂತರ ಮುತ್ತಯ್ಯ ಬಸ್ ನಿಂದ ಹೊರ ಹೋಗಿ ಬಂದಿರುವ ಮಾಹಿತಿ ಸಿಕ್ಕಿದೆ. ಅಲ್ಲದೇ ಬಸ್​ನ ಎಲ್ಲ ಕಿಟಕಿಗಳು ಹಾಗೂ ಡೋರ್ ಒಳಗಿನಿಂದ ಕ್ಲೋಸ್ ಆಗಿದ್ದವು ಎನ್ನುವುದು ಕೂಡು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ. ಬೆಂಕಿ ಹೊತ್ತಿಕೊಂಡ ನಂತರ ಬೆಂಕಿಯ ತೀವ್ರತೆ ಮತ್ತು ಹೊಗೆಯಿಂದಾಗಿ ಕಿಟಕಿ ಗಾಜುಗಳು ಸ್ಪೋಟಗೊಂಡಿರುವ ಶಂಕೆ ವ್ಯಕ್ತವಾಗಿದ್ದು, ಆದ್ರೆ ಈ ಎಲ್ಲದಕ್ಕೂ ಎಫ್ಎಸ್ಎಲ್ ರಿಪೋರ್ಟ್ ನಿಂದ ಅಂತಿಮ ಸತ್ಯ ತಿಳಿಯಲಿದೆ. ಇದಲ್ಲದೆ ಕೆಲವು ತಾಂತ್ರಿಕ ಮತ್ತು ವೈಜ್ಞಾನಿಕ ಎವಿಡೆನ್ಸ್ ಕಲೆ ಹಾಕುತ್ತಿರುವ ಪೊಲೀಸರು, ಮುತ್ತಯ್ಯ ಹಣಕಾಸು ವಿಚಾರದ ಬಗ್ಗೆ ಸಂಬಂಧಪಟ್ಟವರನನ್ನು ವಿಚಾರಣೆ ನಡೆಸಿದ್ದಾರೆ. ಎಫ್ಎಸ್ಎಲ್ ರಿಪೋರ್ಟ್ ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಹೇಗೆ, ಕಾರಣ ಏನು ಎಂಬುದು ತಿಳಿಯಬೇಕು.

ಪೊಲೀಸರ ಗುಮಾನಿಗೆ ಕಾರಣಗಳೇನು ಗೊತ್ತಾ?

  •  ಬಸ್ ಹಾಲ್ಟ್ ಆದ ನಂತರ ಹೊರ ಹೋಗಿ ಬಂದಿರುವ ಮುತ್ತಯ್ಯ
  • ಡ್ರೈವರ್ ಪ್ರಕಾಶ್ ನನ್ನ ಮಲಗುವಂತೆ ಹೇಳಿ ಕಳುಹಿಸಿದ್ದ ಕಂಡಕ್ಟರ್
  • ಡ್ರೈವರ್ ಮಲಗಿದ ನಂತರ ಮುತ್ತಯ್ಯ ಬಸ್ ನಿಂದ ಹೊರ ಹೋಗಿ ಬಂದಿರುವ ಮಾಹಿತಿ ಪತ್ತೆ
  • ರಾತ್ರಿಯಲ್ಲಿ ಮುತ್ತಯ್ಯ ಯುಪಿಐ ಐಡಿಯಿಂದ ಕೊನೆಯದಾಗಿ ಹಣ ವರ್ಗಾವಣೆ
  • ಸುಮಾರು 700 ರೂಪಾಯಿ ಹಣ ವರ್ಗಾವಣೆ ಬೆಳಕಿಗೆ
  • ಹಣ ವರ್ಗಾವಣೆಯಾಗಿರುವುದು ಸ್ವಲ್ಪ ದೂರದಲ್ಲಿದ್ದ ಪೆಟ್ರೋಲ್ ಬಂಕ್ ಖಾತೆಗೆ
  • ಈ ಬಗ್ಗೆ ಮೊಬೈಲ್ ಹಾಗೂ ಯುಪಿಐ ಐಡಿ ಪರಿಶೀಲನೆ ನಡೆಸಿದ ಬ್ಯಾಡರಹಳ್ಳಿ ಪೊಲೀಸರು
  • ಪೆಟ್ರೋಲ್ ಬಂಕ್ ಗೆ ಹಣ ಪಾವತಿಸಿ ಪೆಟ್ರೋಲ್, ಡಿಸೇಲ್ ಖರೀದಿ
  • ಪೆಟ್ರೋಲ್, ಡಿಸೇಲ್ ಖರೀದಿ ಬಗ್ಗೆ ಪೆಟ್ರೋಲ್ ಬಂಕ್ ಸಿಬ್ಬಂದಿಯಿಂದ ಮಾಹಿತಿ
  • ಎರಡು ಲೀಟರ್ ಪೆಟ್ರೋಲ್, ಐದು ಲೀಟರ್ ಡಿಸೇಲ್ ತಂದು ಬೆಂಕಿ ಹಚ್ಚಿಕೊಂಡಿರುವ ಶಂಕೆ
  • ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆ ಅನ್ನೋ ಬಗ್ಗೆ ಕೆಲವು ಪೂರಕ ಅಂಶಗಳು ಪತ್ತೆ
  • ಯುಪಿಐ ಐಡಿ ಮೂಲಕ ಹಣ ವರ್ಗಾವಣೆ, ಪೆಟ್ರೋಲ್ ಬಂಕ್ ಸಿಸಿಟಿವಿ ವಿಡಿಯೋ ಸಂಗ್ರಹಿಸಿದ ಪೊಲೀಸರು
  • ಬಸ್ ನ ಎಲ್ಲ ಕಿಟಕಿಗಳು ಹಾಗೂ ಡೋರ್ ಒಳಗಿನಿಂದ ಕ್ಲೋಸ್ ಮಾಡಲಾಗಿದೆ
  • ಬೆಂಕಿ ಹೊತ್ತಿಕೊಂಡ ನಂತರ ಬೆಂಕಿಯ ತೀವ್ರತೆ ಮತ್ತು ಹೊಗೆಯಿಂದಾಗಿ ಕಿಟಕಿ ಗಾಜುಗಳು ಸ್ಪೋಟಗೊಂಡಿರುವ ಶಂಕೆ
  • ಸದ್ಯ ಹಲವು ಆಯಾಮಗಳಲ್ಲಿ ತನಿಖೆ ನಡೆಸಿರೋ ಪೊಲೀಸರು

Published On - 11:16 am, Thu, 23 March 23

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್