AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಹಾಗೂ ಖಾಸಗಿ ಬಸ್​ ನಡುವೆ ಭೀಕರ ಅಪಘಾತ: ಆಟೋ ಚಾಲಕ ಸ್ಥಳದಲ್ಲೇ ದುರ್ಮರಣ

ಸಾಲ ವಾಪಸ್ ಕೊಡದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ಪ್ರಕರಣ ಹಿನ್ನೆಲೆ ಸೋಲದೇವನಹಳ್ಳಿ ಠಾಣೆ ಪೊಲೀಸರಿಂದ ಆರೋಪಿ ಗಜೇಂದ್ರ ಸೆರೆಹಿಡಿಯಲಾಗಿದೆ. ಏಪ್ರಿಲ್ 27ರಂದು ರತ್ನಮ್ಮ ಮೇಲೆ ರಾಡ್​ನಿಂದ ಹಲ್ಲೆ ಮಾಡಿ ಗಜೇಂದ್ರ ಪರಾರಿಯಾಗಿದ್ದ.

ಆಟೋ ಹಾಗೂ ಖಾಸಗಿ ಬಸ್​ ನಡುವೆ ಭೀಕರ ಅಪಘಾತ: ಆಟೋ ಚಾಲಕ ಸ್ಥಳದಲ್ಲೇ ದುರ್ಮರಣ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 30, 2022 | 2:52 PM

Share

ತುಮಕೂರು: ಆಟೋ ಹಾಗೂ ಖಾಸಗಿ ಬಸ್ ನಡುವೆ ಅಪಘಾತ (Accident) ಸಂಭವಿಸಿದ್ದು, ಮೂವರಿಗೆ ಗಾಯಗೊಂಡಿದ್ದರೆ, ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬೆನಿವಾರದ ಕೊಪ್ಪಲು ಬಳಿ ನಡೆದಿದೆ. ಆಟೋದಲ್ಲಿದ್ದ ರಾಮಣ್ಣ (60) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಗಡಿ ಮೂಲದ ರಾಮಣ್ಣ ತಮ್ಮ ಮಕ್ಕಳ ಜೊತೆ ದೇವಸ್ಥಾನಕ್ಕೆ ಆಟೋದಲ್ಲಿ ತೆರಳುತ್ತಿದ್ದರು. ಈ ವೇಳೆ ಕುಣಿಗಲ್​ನಲ್ಲಿ ನಡೆಯುತ್ತಿರುವ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಖಾಸಗಿ ಬಸ್ ಬರುತ್ತಿತ್ತು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋದಲ್ಲಿದ್ದ ರಾಮಣ್ಣ ಸಾವನ್ನಪ್ಪಿದ್ದು, ಮೂವರಿಗೆ ಗಾಯವಾಗಿದೆ. ಗಾಯಾಳುಗಳು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಹುಲಿಯೂರು ದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಾಲ ವಾಪಸ್ ಕೊಡದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ; ಆರೋಪಿ ಅರೆಸ್ಟ್

ನೆಲಮಂಗಲ: ಸಾಲ ವಾಪಸ್ ಕೊಡದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ಪ್ರಕರಣ ಹಿನ್ನೆಲೆ ಸೋಲದೇವನಹಳ್ಳಿ ಠಾಣೆ ಪೊಲೀಸರಿಂದ ಆರೋಪಿ ಗಜೇಂದ್ರ ಸೆರೆಹಿಡಿಯಲಾಗಿದೆ. ಏಪ್ರಿಲ್ 27ರಂದು ರತ್ನಮ್ಮ ಮೇಲೆ ರಾಡ್​ನಿಂದ ಹಲ್ಲೆ ಮಾಡಿ ಗಜೇಂದ್ರ ಪರಾರಿಯಾಗಿದ್ದ. ಗಾಯಾಳು ರತ್ನಮ್ಮಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ ಘಟನೆ ನಡೆದಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಂಗಳೂರಿನಲ್ಲಿ ನಿಗೂಢವಾಗಿ ಕೊಲೆಯಾದ ಮಹಿಳಾ ಉದ್ಯಮಿ

ಬೆಂಗಳೂರು: ಸದಾಶಿವನಗರದ ಇ-ಕಾಮರ್ಸ್ ಉದ್ಯಮಿ ಸುನೀತಾ(54) ನಿಗೂಢವಾಗಿ ಕೊಲೆಯಾದ (Murder) ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ವರ್ತೂರು ಪೊಲೀಸರು ಈಗಾಗಲೇ ಪ್ರಕರಣದ ಪ್ರಮುಖ ಆರೋಪಿ ಕಿರಣ್​ನ ಬಂಧಿಸಿದ್ದಾರೆ. ಪರಿಚಿತರೆ ಮಹಿಳಾ ಉದ್ಯಮಿಯನ್ನು (Business Woman) ಹತ್ಯೆಗೈದಿರುವ ಬಗ್ಗೆ ಪೊಲೀಸರಿಗೆ ಅನುಮಾನ ಇತ್ತು. ಮಾರ್ಚ್ 31 ರಂದು ಮಲ್ಲೇಶ್ವರ ನಿವಾಸದಿಂದ ಬ್ಯುಸಿನೆಸ್ ಮೀಟಿಂಗ್ ಅಂತ ಹೇಳಿ ಉದ್ಯಮಿ ಮಹಿಳೆ ಹೊರಟಿದ್ದರು. ನಾಲ್ಕು ದಿನದ ಬಳಿಕ ವರ್ತೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಹಲವು ಆಯಾಮಗಳಲ್ಲಿ ವರ್ತೂರು ಪೊಲೀಸರು ತನಿಖೆ ಚುರುಕುಗೊಳಿಸಿದ್ದರು.

ಇನ್ನು ಮಹಿಳಾ ಉದ್ಯಮಿ ಮಿಸ್ಸಿಂಗ್ ಕೇಸ್-ಮರ್ಡರ್ ಮಿಸ್ಟರಿ ಬಗ್ಗೆ ಟಿವಿ9​ಗೆ ಮಾಹಿತಿ ಲಭ್ಯವಾಗಿದೆ. ಸುನೀತಾ ಸದಾಶಿವನಗರದಲ್ಲಿ ತತ್ವ ವಂಶಿ ಇ- ಕಾಮರ್ಸ್ ಬ್ಯುಸಿನೆಸ್ ನಡೆಸುತ್ತಿದ್ದರು. ಉದ್ಯಮಿ ತೆರಳಿದ್ದ ಕಾರಿನ ಸಮೇತ ಕಿರಣ್ ನಾಪತ್ತೆಯಾಗಿದ್ದ. ಉದ್ಯಮಿ ಸುನೀತಾಗೆ ಆರು ತಿಂಗಳ ಹಿಂದೆ ಕಿರಣ್ ಪರಿಚಿತನಾಗಿದ್ದ. ಶ್ರೀಮಂತೆ ಸುನೀತಾ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಆರೋಪಿ ಕಿರಣ್, ಪರಿಚಿತನಾಗಿ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ:

ಆರ್ಥಿಕತೆ ಉತ್ತಮವಾಗಿದೆ, ಬಿಸಿಲು ಭಯಂಕರವಾಗಿದೆ; ಹಾಗಾಗಿ ವಿದ್ಯುತ್​ ಬೇಡಿಕೆ ಅಗಾಧವಾಗಿದೆ- ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ

‘ಇಲ್ಲಿಗೆ ಬರಲು ನಂಗೆ ಧೈರ್ಯ ಸಾಕಾಗಲ್ಲ’: ಕಲಾವಿದರ ಭವನದಲ್ಲಿ ಅಂಬರೀಷ್​ ನೆನೆದು ರಾಕ್​ಲೈನ್​ ಭಾವುಕ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ