AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಎಐಎಂಐಎಂ ನಾಯಕ ಆರಿಫ್ ಜಮಾಲ್ ಹತ್ಯೆ

ಬಿಹಾರದಲ್ಲಿ ಎಐಎಂಐಎಂ ನಾಯಕ ಆರಿಫ್ ಜಮಾಲ್​ನನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಹುಸೈಂಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕುತುಬ್ ಛಾಪ್ರಾ ತಿರುವಿನಲ್ಲಿ ಈ ಘಟನೆ ನಡೆದಿದೆ. ಆರಿಫ್ ಜಮಾಲ್ ತನ್ನ ಅಂಗಡಿಯಲ್ಲಿ ಕುಳಿತಿದ್ದ ಸಮಯದಲ್ಲಿ ಬೈಕ್​ನಲ್ಲಿ ಬಂದ ಮೂವರು ಅಪರಿಚಿತರು ದಾಳಿ ನಡೆಸಿದ್ದಾರೆ.

ಬಿಹಾರದಲ್ಲಿ ಎಐಎಂಐಎಂ ನಾಯಕ ಆರಿಫ್ ಜಮಾಲ್ ಹತ್ಯೆ
ನಯನಾ ರಾಜೀವ್
|

Updated on: Dec 24, 2023 | 8:42 AM

Share

ಬಿಹಾರದಲ್ಲಿ ಎಐಎಂಐಎಂ ನಾಯಕ ಆರಿಫ್ ಜಮಾಲ್​ನನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಹುಸೈಂಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕುತುಬ್ ಛಾಪ್ರಾ ತಿರುವಿನಲ್ಲಿ ಈ ಘಟನೆ ನಡೆದಿದೆ. ಆರಿಫ್ ಜಮಾಲ್ ತನ್ನ ಅಂಗಡಿಯಲ್ಲಿ ಕುಳಿತಿದ್ದ ಸಮಯದಲ್ಲಿ ಬೈಕ್​ನಲ್ಲಿ ಬಂದ ಮೂವರು ಅಪರಿಚಿತರು ದಾಳಿ ನಡೆಸಿದ್ದಾರೆ.

ಆರಿಫ್ ಜಮಾಲ್ ಫಾಸ್ಟ್ ಫುಡ್ ಅಂಗಡಿ ಹೊಂದಿದ್ದಾರೆ, ರಾತ್ರಿ 8.30ರಿಂದ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಗುಂಡಿನ ದಾಳಿ ನಡೆಸಿದ ಬಳಿಕ ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಗೊಂಡಿದ್ದ ಆರಿಫ್ ಜಮಾಲ್ ನನ್ನು ಜನರು ತರಾತುರಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಲ್ಲಿ ತಪಾಸಣೆ ನಡೆಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಹುಸೈಂಗಂಜ್ ಪೊಲೀಸ್ ಠಾಣೆಯ ಪ್ರಭಾರಿ ವಿಜಯ್ ಯಾದವ್ ಅವರು ಆರಿಫ್ ಜಮಾಲ್ ಅವರನ್ನು ಕ್ರಿಮಿನಲ್‌ಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಹೇಳಿದ್ದಾರೆ. ಗುಂಡು ಅವರ ಹೊಟ್ಟೆಗೆ ತಗುಲಿತ್ತು. ಸ್ಥಳೀಯರು ಮತ್ತು ಕುಟುಂಬದವರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ.

ದುಷ್ಕರ್ಮಿಗಳು ಆರಿಫ್ ಜಮಾಲ್ ಹೊಟ್ಟೆಗೆ ಒಂದೇ ಒಂದು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಘಟನೆಯ ನಂತರ, ಜನರು ಮೊದಲು ಅವರನ್ನು ಸದರ್ ಆಸ್ಪತ್ರೆಗೆ ಕರೆದೊಯ್ದರು. ಇದಾದ ಬಳಿಕ ಇಲ್ಲಿಂದ ಖಾಸಗಿ ಆಸ್ಪತ್ರೆಗೆ ತೆರಳಿದ್ದರು.

ಮತ್ತಷ್ಟು ಓದಿ: ಹಾವೇರಿ: ಹೆತ್ತವರ ಕಣ್ಣು ಮುಂದೆಯೇ ಹರಿತು ಮಗಳ ನೆತ್ತರು!ಕೊಲೆ ಮಾಡಿದ ಪತಿಗೆ ಗ್ರಾಮಸ್ಥರಿಂದ ಧರ್ಮದೇಟು

ಆರಿಫ್ ಜಮಾಲ್ ಕೂಡ ಚುನಾವಣೆಗೆ ಸ್ಪರ್ಧಿಸಿದ್ದಾರೆ ಎನ್ನಲಾಗಿದೆ. 2015 ರಲ್ಲಿ ಅವರು ರಘುನಾಥಪುರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಇದಾದ ಬಳಿಕ 2022ರ ಜಿಲ್ಲಾ ಪರಿಷತ್ ಚುನಾವಣೆಗೂ ಸ್ಪರ್ಧಿಸಿದ್ದರು. ಘಟನೆ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ