AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಬಿಹಾರದ ನಳಂದದಲ್ಲಿ ವೈದ್ಯರ ಶವ ಪತ್ತೆ; ಹೊಡೆದು ಕೊಂದ ದುಷ್ಕರ್ಮಿಗಳು

ಬಿಹಾರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ವೈದ್ಯರಾಗಿರುವ ಡಾ. ಸುಮನ್ ಅವರು ಬುಧವಾರ (ಜುಲೈ 31) ಪಕ್ಕದ ಮಹಾನಂದಪುರ ಗ್ರಾಮಕ್ಕೆ ರೋಗಿಗೆ ಚಿಕಿತ್ಸೆ ನೀಡಲು ಹೋದವರು ರಾತ್ರಿಯಾದರೂ ಮನೆಗೆ ಹಿಂತಿರುಗಲಿಲ್ಲ. ಕೊನೆಗೆ ಅವರು ಶವವಾಗಿ ಪತ್ತೆಯಾಗಿದ್ದಾರೆ.

Crime News: ಬಿಹಾರದ ನಳಂದದಲ್ಲಿ ವೈದ್ಯರ ಶವ ಪತ್ತೆ; ಹೊಡೆದು ಕೊಂದ ದುಷ್ಕರ್ಮಿಗಳು
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Aug 01, 2024 | 8:02 PM

Share

ನಳಂದಾ: ಬಿಹಾರದ ನಳಂದಾ ಜಿಲ್ಲೆಯಲ್ಲಿ ಕೊಲೆಯಾಗಿರುವ ವೈದ್ಯರ ಶವ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರನ್ನು ಆಸ್ತಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಚುಲ್ಹರಿ ಗ್ರಾಮದ ನಿವಾಸಿ ಡಾ. ಸುಮನ್ ಗಿರಿ ಎಂದು ಗುರುತಿಸಲಾಗಿದೆ. ತಡರಾತ್ರಿಯಾದರೂ ಡಾಕ್ಟರ್ ಸುಮನ್ ವಾಪಸ್ ಬಾರದೆ ಇದ್ದಾಗ ಮನೆಯವರು ಆಸ್ತಾವನ್ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆಯಾಗಿರುವ ದೂರು ದಾಖಲಿಸಿದ್ದಾರೆ.

ನಾಪತ್ತೆಯಾಗಿರುವ ದೂರನ್ನು ದಾಖಲಿಸಿ, ನನ್ನ ಸಹೋದರನ ಪತ್ತೆಗೆ ತ್ವರಿತ ಕ್ರಮ ಕೈಗೊಳ್ಳುವಂತೆ ನಾನು ಪೊಲೀಸ್ ಅಧಿಕಾರಿಗಳನ್ನು ಒತ್ತಾಯಿಸಿದೆ. ಆದರೆ ಅವರು ನಿರಾಕರಿಸಿದರು. ನಂತರ ದೂರು ದಾಖಲಿಸಿಕೊಂಡರು. ನಾನು ಮನೆಗೆ ಹಿಂದಿರುಗುವಾಗ ನಾನು ಅವನ ಬೈಕನ್ನು ನೋಡಿದೆ. ಸ್ವಲ್ಪ ದೂರದಲ್ಲಿ ಅವನ ಮೃತ ದೇಹವೂ ಪತ್ತೆಯಾಗಿದೆ’ ಎಂದು ಮೃತ ವೈದ್ಯರ ಸಹೋದರ ಹೇಳಿದ್ದಾರೆ.

ಇದನ್ನೂ ಓದಿ: Crime News: ಮದುವೆಯಾಗಲು ಒಪ್ಪದ ಯುವತಿಯ ಕತ್ತು ಸೀಳಿ, ಕೊಚ್ಚಿ ಕೊಂದ ಯುವಕ; ಮಹಾರಾಷ್ಟ್ರದಲ್ಲಿ ಭೀಕರ ಕೊಲೆ

ಕೂಡಲೇ ಕೊಲೆಯ ಬಗ್ಗೆ ಕುಟುಂಬಸ್ಥರಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯ ಸಮಯದಲ್ಲಿ, ಆ ವೈದ್ಯರನ್ನು ಹೊಡೆದು ಸಾಯಿಸಲಾಗಿದೆ ಎಂದು ತೋರುತ್ತದೆ. ಈ ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ನಾವು ಪ್ರಕರಣದ ತನಿಖೆ ನಡೆಸುತ್ತಿದ್ದೇವೆ ಮತ್ತು ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಆಸ್ತವಾನ್ ಗ್ರಾಮದ ಎಸ್‌ಎಚ್‌ಒ ಶಶಿ ಕುಮಾರ್ ಹೇಳಿದ್ದಾರೆ.

ಈ ಘಟನೆಯ ನಂತರ ಸ್ಥಳೀಯ ಗ್ರಾಮಸ್ಥರು ಶವವನ್ನು ರಸ್ತೆಯ ಮೇಲೆ ಇಟ್ಟು ಪೊಲೀಸ್ ಸಿಬ್ಬಂದಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !