AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar Crime: ಮಹಿಳೆಯನ್ನು ಹೊಡೆದು ಕೊಂದು, ಕಣ್ಣುಗಳನ್ನು ಕಿತ್ತು ವಿರೂಪಗೊಳಿಸಿದ ಕ್ರೂರಿಗಳು

ಜಮೀನಿನ ವಿವಾದ ಕೊಲೆಯಲ್ಲಿ ಅಂತ್ಯವಾಗಿದೆ, ಮಹಿಳೆಯನ್ನು ಹೊಡೆದು ಕೊಂದು, ಕಣ್ಣುಗಳನ್ನು ಕಿತ್ತಿರುವ ಅಮಾನವೀಯ ಘಟನೆ ಬಿಹಾರದಲ್ಲಿ ನಡೆದಿದೆ.

Bihar Crime: ಮಹಿಳೆಯನ್ನು ಹೊಡೆದು ಕೊಂದು, ಕಣ್ಣುಗಳನ್ನು ಕಿತ್ತು ವಿರೂಪಗೊಳಿಸಿದ ಕ್ರೂರಿಗಳು
ಪೊಲೀಸ್
ನಯನಾ ರಾಜೀವ್
|

Updated on: Jul 10, 2023 | 2:20 PM

Share

ಜಮೀನಿನ ವಿವಾದ ಕೊಲೆಯಲ್ಲಿ ಅಂತ್ಯವಾಗಿದೆ, ಮಹಿಳೆಯನ್ನು ಹೊಡೆದು ಕೊಂದು, ಕಣ್ಣುಗಳನ್ನು ಕಿತ್ತಿರುವ ಅಮಾನವೀಯ ಘಟನೆ ಬಿಹಾರದಲ್ಲಿ ನಡೆದಿದೆ. 45 ವರ್ಷದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ, ಖಗಾರಿಯಾ ಜಿಲ್ಲೆಯಲ್ಲಿ ಮಹಿಳೆಯ ದೇಹವು ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ,   ಕಣ್ಣುಗಳು ಕಿತ್ತಿದ್ದು ಮತ್ತು ಆಕೆಯ ಖಾಸಗಿ ಭಾಗಗಳಲ್ಲಿ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಲೇಖಾ ದೇವಿ ಎಂಬ ಮಹಿಳೆ ಮೆಹಂದಿಪುರ ಗ್ರಾಮದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹಲ್ಲೆ ನಡೆಸಲಾಗಿದೆ. ಆಕೆಯ ಕುಟುಂಬದವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಮ್ಮ ಐವರು ನೆರೆಹೊರೆಯವರ ಮೇಲೆ ಆರೋಪ ಮಾಡಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ. ಶನಿವಾರ ಸುಲೇಖಾ ದೇವಿ ಅವರು ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ನಾಲ್ವರು ದಾಳಿ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಓದಿ: ಆರು ವರ್ಷದ ಬಾಲಕ ಸರಾಗವಾಗಿ ಹಾವುಗಳೊಂದಿಗೆ ಸರವಾಡುತ್ತಾನೆ, ಇಷ್ಟು ಚಿಕ್ಕ ವಯಸ್ಸಲ್ಲಿ ಇದೆಲ್ಲ ಬೇಕಿತ್ತಾ? ಎಂದು ಕೆಲವರು ಟೀಕಿಸಿದ್ದಾರೆ -ನೀವೇನಂತೀರಿ

ಹೊಡೆದು ಕೊಂದು ನಂತರ ಅವರು ಚಾಕುವಿನಿಂದ ಆಕೆಯ ಕಣ್ಣುಗಳನ್ನು ಕಿತ್ತು, ನಾಲಿಗೆಯನ್ನು ಕತ್ತರಿಸಿ ಆಕೆಯ ಖಾಸಗಿ ಅಂಗಗಳನ್ನು ವಿರೂಪಗೊಳಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಖಾತೆಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿಗಳು ತಿಳಿಸಿವೆ.

ಕೊಲೆ ಆರೋಪ ಸೇರಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಪರಾಧ ವರದಿಯಾದಾಗಿನಿಂದ ಆರೋಪಿಗಳು ಪರಾರಿಯಾಗಿದ್ದು, ಅವರನ್ನು ಬಂಧಿಸಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನಾವು ಐವರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ. ಅವರನ್ನು ಬಂಧಿಸಲು ನಾವು ಪ್ರತ್ಯೇಕ ತಂಡಗಳನ್ನು ರಚಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?