AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar: 3 ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ

ಮಹಿಳೆಯೊಬ್ಬಳು ತನ್ನ 3 ಮಕ್ಕಳನ್ನು ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಗಯಾದ ಮಾಗ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Bihar: 3 ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ
ಸಾವು
ನಯನಾ ರಾಜೀವ್
|

Updated on: Apr 30, 2023 | 12:28 PM

Share

ಮಹಿಳೆಯೊಬ್ಬಳು ತನ್ನ 3 ಮಕ್ಕಳನ್ನು ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಗಯಾದ ಮಾಗ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಾಲ್ತಿ ದೇವಿ ಎಂಬಾಕೆ ಹಾಗೂ ಅವರ ಮೂರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಮಹಿಳೆ ಮೊದಲು ಮಕ್ಕಳಿಗೆ ನೇಣು ಹಾಕಿ ಹತ್ಯೆ ಮಾಡಿ, ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಪತಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಮತ್ತೊಂದು ಘಟನೆಯಲ್ಲಿ 34 ವರ್ಷದ ಮಹಿಳೆಯೊಬ್ಬಳು ಬ್ಯೂಟಿ ಪಾರ್ಲರ್​ಗೆ ತೆರಳಲು ಪತಿ ನಿರಾಕರಿಸಿದ್ದಕ್ಕೆ ಸಾವಿಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಇಂದೋರ್​ನಲ್ಲಿ ಈ ಘಟನೆ ನಡೆದಿದೆ, ಮೃತ ಮಹಿಳೆ ರೀನಾ ಯಾದವ್ ಎಂದು ಗುರುತಿಸಲಾಗಿದೆ. ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಓದಿ: ಬೆಂಗಳೂರು: ಡೆತ್​ನೋಟು ಬರೆದಿಟ್ಟು ಸರ್ಕಾರಿ ಆಸ್ಪತ್ರೆಯ ವೈದ್ಯ ನೇಣಿಗೆ ಶರಣು; ಕಾರಣ ಇಲ್ಲಿದೆ

ತನಿಖಾಧಿಕಾರಿ ಉಮಾ ಶಂಕರ್ ಯಾದವ್ ಮಾತನಾಡಿ, ಮಹಿಳೆಯು ಸುಮಾರು 15 ವರ್ಷಗಳ ಹಿಂದೆ ಬಲರಾಮ್ ಯಾದವ್ ಅವರನ್ನು ವಿವಾಹವಾಗಿದ್ದರು. ಗುರುವಾರ ಬ್ಯೂಟಿ ಪಾರ್ಲರ್‌ಗೆ ಹೋಗುವಂತೆ ಬಲರಾಮ್‌ಗೆ ಕೇಳಿದ್ದಳು ಆದರೆ ಅವರು ನಿರಾಕರಿಸಿದ್ದರು, ಅದಕ್ಕೆ ಕೋಪಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ