AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar Crime: ಬಿಹಾರದಲ್ಲೊಂದು ಮರ್ಯಾದಾ ಹತ್ಯೆ: ಪ್ರೀತಿ ವಿಷಯ ತಿಳಿದು ತಮ್ಮ ಇಬ್ಬರು ಹೆಣ್ಣುಮಕ್ಕಳನ್ನೇ ಹತ್ಯೆ ಮಾಡಿದ ದಂಪತಿ

ಬಿಹಾರ(Bihar) ದ ಹಾಜಿಪುರದಲ್ಲಿ ಮರ್ಯಾದಾ ಹತ್ಯೆ ನಡೆದಿದೆ, ಇಬ್ಬರು ಮಕ್ಕಳು ಪ್ರೀತಿ(Love)  ಮಾಡುತ್ತಿರುವ ವಿಷಯ ತಿಳಿದ ಪೋಷಕರು ಕೋಪಗೊಂಡು ತಮ್ಮ 16, 18 ವರ್ಷದ ಹೆಣ್ಣುಮಕ್ಕಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

Bihar Crime: ಬಿಹಾರದಲ್ಲೊಂದು ಮರ್ಯಾದಾ ಹತ್ಯೆ: ಪ್ರೀತಿ ವಿಷಯ ತಿಳಿದು ತಮ್ಮ ಇಬ್ಬರು ಹೆಣ್ಣುಮಕ್ಕಳನ್ನೇ ಹತ್ಯೆ ಮಾಡಿದ ದಂಪತಿ
ಬಿಹಾರದಲ್ಲಿ ಮನೆಯ ಮುಂದೆ ನೆರೆದಿರುವ ಸ್ಥಳೀಯರುImage Credit source: NDTV
ನಯನಾ ರಾಜೀವ್
|

Updated on: Apr 16, 2023 | 9:43 AM

Share

ಬಿಹಾರ(Bihar) ದ ಹಾಜಿಪುರದಲ್ಲಿ ಮರ್ಯಾದಾ ಹತ್ಯೆ ನಡೆದಿದೆ, ಇಬ್ಬರು ಮಕ್ಕಳು ಪ್ರೀತಿ(Love)  ಮಾಡುತ್ತಿರುವ ವಿಷಯ ತಿಳಿದ ಪೋಷಕರು ಕೋಪಗೊಂಡು ತಮ್ಮ 16, 18 ವರ್ಷದ ಹೆಣ್ಣುಮಕ್ಕಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಕ್ಕಳು ಮಲಗಿದ್ದಾಗ ಅವರನ್ನು ಹತ್ಯೆ ಮಾಡಿರುವ ಕುರಿತು ಪೋಷಕರು ಒಪ್ಪಿಕೊಂಡಿದ್ದಾರೆ, ಪೊಲೀಸರು ಅಪರಾಧ ಸ್ಥಳಕ್ಕೆ ಬಂದಾಗ ಎರಡು ಶವಗಳ ಬಳಿ ತಾಯಿ ರಿಂಕು ದೇವಿ ಕುಳಿತಿರುವುದು ಕಂಡುಬಂದಿದೆ.

ಪರಾರಿಯಾಗಿರುವ ಪತಿ ನರೇಶ್ ಬೈತಾಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಪೊಲೀಸರು ತಾಯಿಯನ್ನು ವಿಚಾರಿಸಿದಾಗ ಇಬ್ಬರೂ ಹುಡುಗಿಯರು ಬೇರೆ ಬೇರೆ ಜಾತಿಯವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎಂದು ತಿಳಿಸಿದ್ದಾರೆ. ಆಗಾಗ ಪಾಲಕರಿಗೆ ತಿಳಿಸದೆ ಮನೆ ಬಿಟ್ಟು ಹೋಗುತ್ತಿದ್ದ ಬಾಲಕಿಯರ ವರ್ತನೆ ಸಹಿಸಲಾರದೆ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಮತ್ತಷ್ಟು ಓದಿ: ಇಷ್ಟ ಬಂದಂತೆ ಪ್ರೀತಿಸಿದ ಎಳಸು ಪ್ರೇಮಿಗಳ ದುರಂತ ಅಂತ್ಯ, ಜೊತೆಗೆ ಘೋರ ಮರ್ಯಾದಾ ಹತ್ಯೆಯ ಕಮಟು ವಾಸನೆ!

ಪ್ರಾಥಮಿಕ ತನಿಖೆಯ ನಂತರ ತಂದೆ-ತಾಯಿ ಇಬ್ಬರೂ ಕೊಲೆಯಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊದಲು ತನ್ನ ಪತಿ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿರುವುದಾಗಿ ತಿಳಿಸಿದ್ದರು, ಬಳಿಕ ಇಬ್ಬೂ ಒಟ್ಟಾಗಿ ಮಕ್ಕಳನ್ನು ಕೊಂದಿರುವುದಾಗಿ ತಿಳಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಓಂ ಪ್ರಕಾಶ್ ತಿಳಿಸಿದ್ದಾರೆ.

ಇತರೆ ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್