AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದವಳನ್ನು ಭೇಟಿಯಾಗಲು ಬಂದ ವಿದ್ಯಾರ್ಥಿ, ಆತನನ್ನೇ ಕಿಡ್ನ್ಯಾಪ್ ಮಾಡಿ 50 ಲಕ್ಷಕ್ಕೆ ಬೇಡಿಕೆ ಇಟ್ಟ ಅಪ್ರಾಪ್ತ ಬಾಲಕಿ

ನಿವೃತ್ತ ಪಶುವೈದ್ಯರ ಮೊಮ್ಮಗನನ್ನು ಅಪಹರಿಸಿ ಬಾಲಕಿಯೊಬ್ಬಳು 50 ಲಕ್ಷ ರೂ. ಗೆ ಬೇಡಿಕೆ ಇಟ್ಟಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.

ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದವಳನ್ನು ಭೇಟಿಯಾಗಲು ಬಂದ ವಿದ್ಯಾರ್ಥಿ, ಆತನನ್ನೇ ಕಿಡ್ನ್ಯಾಪ್ ಮಾಡಿ 50 ಲಕ್ಷಕ್ಕೆ ಬೇಡಿಕೆ ಇಟ್ಟ ಅಪ್ರಾಪ್ತ ಬಾಲಕಿ
ಅಪರಾಧImage Credit source: Scroll.in
ನಯನಾ ರಾಜೀವ್
|

Updated on: Jul 05, 2023 | 8:44 AM

Share

ನಿವೃತ್ತ ಪಶುವೈದ್ಯರ ಮೊಮ್ಮಗನನ್ನು ಅಪಹರಿಸಿ ಬಾಲಕಿಯೊಬ್ಬಳು 50 ಲಕ್ಷ ರೂ. ಗೆ ಬೇಡಿಕೆ ಇಟ್ಟಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ. ಅಪಹರಣಕ್ಕೊಳಗಾದವನು ಡಿಪ್ಲೊಮಾ ವಿದ್ಯಾರ್ಥಿ, ಆತ ಇನ್​ಸ್ಟಾಗ್ರಾಂನಲ್ಲಿನಲ್ಲಿ ಬಾಲಕಿಯನ್ನು ಭೇಟಿಯಾಗಿದ್ದ, ಆಕೆಯನ್ನು ಭೇಟಿ ಮಾಡಲು ಗಯಾದಿಂದ ಪಾಟ್ನಾಗೆ ಬಂದಿದ್ದ, ಆಗ ಬಾಲಕಿ ಆತನನ್ನು ಅಪಹರಿಸಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾಳೆ.

ಈ ಘಟನೆ ಕುರಿತು ಕುಟುಂಬದವರು ಪೊಲೀಸರಿಗೆ ದೂರು ನೀಡಿ, ಎಫ್​ಐಆರ್​ ದಾಖಲಿಸಿದ್ದರು. ವಿಷಯದ ಗಂಭೀರತೆಯನ್ನು ಅರಿತ ಎಸ್​ಎಸ್​ಪಿ ಆಶಿಶ್ ಭಾರ್ತಿ ಅವರು ಬೆಳಗಂಜ್ ಪೊಲೀಸ್ ಠಾಣೆಗೆ ಆಗಮಿಸಿ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಂಪೂರ್ಣ ತನಿಖೆ ನಡೆಸಿದ್ದಾರೆ.

ರಿಷಭ್ ಕುಮಾರ್ ಬೈಕ್​ನಲ್ಲಿ ಪಾಟ್ನಾಗೆ ಹೋಗಿದ್ದರು, ರಿಷಬ್ ಮೊಬೈಲ್​ ಲೊಕೇಷನ್​ ಅಲ್ಲಿಯೇ ತೋರಿಸುತ್ತಿತ್ತು. ಶನಿವಾರ ಬೆಳಗ್ಗೆ 7 ಗಂಟೆಗೆ ರಿಷಬ್ ಮೊಬೈಲ್​ನಿಂದ ಕುಟುಂಬ ಸದಸ್ಯರಿಗೆ ಕರೆ ಬಂದಿತ್ತು, ನಿಮ್ಮ ಮಗ ಜೀವಂತ ಬೇಕೆಂದರೆ 50 ಲಕ್ಷ ರೂ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಆತನ ಸ್ನೇಹಿತರ ಬಳಿ ಮಾತನಾಡಿದಾಗ ರಿಷಬ್ ಇನ್​ಸ್ಟಾಗ್ರಾಂನಲ್ಲಿ ಯುವತಿಯೊಬ್ಬಳನ್ನು ಭೇಟಿಯಾಗಿದ್ದ, ಆಕೆಯನ್ನು ಬೇಟಿಯಾಗಲು ಹೋಗಿದ್ದಾಗಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ

ರಿಷಭ್‌ನ ಮೊಬೈಲ್ ಫೋನ್ ಅನ್ನು ಟ್ರೇಸ್ ಮಾಡುವುದರಿಂದ ಪಾಟ್ನಾದ ಸಂಪತ್‌ಚಕ್‌ನಲ್ಲಿ ಅವನ ಕೊನೆಯ ಸ್ಥಳವನ್ನು ತೋರಿಸಲಾಯಿತು. ಬಳಿಕ ಫೋನ್ ಸ್ವಿಚ್ ಆಫ್ ಆಗಿತ್ತು. ಬಾಲಕಿಯನ್ನು ಪಾಟ್ನಾದ ಗಾರ್ಡನಿಬಾಗ್‌ನಲ್ಲಿ ಬಂಧಿಸಲಾಯಿತು ಮತ್ತು ಪೊಲೀಸರು ಆಕೆ ಅಪ್ರಾಪ್ತ ವಯಸ್ಕಳು ಎಂಬುದು ತಿಳಿದುಬಂದಿದೆ.

ಆಕೆಯ ಸುಳಿವು ಅನುಸರಿಸಿ, ರಿಷಬ್‌ನ ಅಪಹರಣಕ್ಕೆ ಸಹಾಯ ಮಾಡಿದ ಆಕೆಯ ಮೂವರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ