AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದವಳನ್ನು ಭೇಟಿಯಾಗಲು ಬಂದ ವಿದ್ಯಾರ್ಥಿ, ಆತನನ್ನೇ ಕಿಡ್ನ್ಯಾಪ್ ಮಾಡಿ 50 ಲಕ್ಷಕ್ಕೆ ಬೇಡಿಕೆ ಇಟ್ಟ ಅಪ್ರಾಪ್ತ ಬಾಲಕಿ

ನಿವೃತ್ತ ಪಶುವೈದ್ಯರ ಮೊಮ್ಮಗನನ್ನು ಅಪಹರಿಸಿ ಬಾಲಕಿಯೊಬ್ಬಳು 50 ಲಕ್ಷ ರೂ. ಗೆ ಬೇಡಿಕೆ ಇಟ್ಟಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.

ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದವಳನ್ನು ಭೇಟಿಯಾಗಲು ಬಂದ ವಿದ್ಯಾರ್ಥಿ, ಆತನನ್ನೇ ಕಿಡ್ನ್ಯಾಪ್ ಮಾಡಿ 50 ಲಕ್ಷಕ್ಕೆ ಬೇಡಿಕೆ ಇಟ್ಟ ಅಪ್ರಾಪ್ತ ಬಾಲಕಿ
ಅಪರಾಧImage Credit source: Scroll.in
ನಯನಾ ರಾಜೀವ್
|

Updated on: Jul 05, 2023 | 8:44 AM

Share

ನಿವೃತ್ತ ಪಶುವೈದ್ಯರ ಮೊಮ್ಮಗನನ್ನು ಅಪಹರಿಸಿ ಬಾಲಕಿಯೊಬ್ಬಳು 50 ಲಕ್ಷ ರೂ. ಗೆ ಬೇಡಿಕೆ ಇಟ್ಟಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ. ಅಪಹರಣಕ್ಕೊಳಗಾದವನು ಡಿಪ್ಲೊಮಾ ವಿದ್ಯಾರ್ಥಿ, ಆತ ಇನ್​ಸ್ಟಾಗ್ರಾಂನಲ್ಲಿನಲ್ಲಿ ಬಾಲಕಿಯನ್ನು ಭೇಟಿಯಾಗಿದ್ದ, ಆಕೆಯನ್ನು ಭೇಟಿ ಮಾಡಲು ಗಯಾದಿಂದ ಪಾಟ್ನಾಗೆ ಬಂದಿದ್ದ, ಆಗ ಬಾಲಕಿ ಆತನನ್ನು ಅಪಹರಿಸಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾಳೆ.

ಈ ಘಟನೆ ಕುರಿತು ಕುಟುಂಬದವರು ಪೊಲೀಸರಿಗೆ ದೂರು ನೀಡಿ, ಎಫ್​ಐಆರ್​ ದಾಖಲಿಸಿದ್ದರು. ವಿಷಯದ ಗಂಭೀರತೆಯನ್ನು ಅರಿತ ಎಸ್​ಎಸ್​ಪಿ ಆಶಿಶ್ ಭಾರ್ತಿ ಅವರು ಬೆಳಗಂಜ್ ಪೊಲೀಸ್ ಠಾಣೆಗೆ ಆಗಮಿಸಿ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಂಪೂರ್ಣ ತನಿಖೆ ನಡೆಸಿದ್ದಾರೆ.

ರಿಷಭ್ ಕುಮಾರ್ ಬೈಕ್​ನಲ್ಲಿ ಪಾಟ್ನಾಗೆ ಹೋಗಿದ್ದರು, ರಿಷಬ್ ಮೊಬೈಲ್​ ಲೊಕೇಷನ್​ ಅಲ್ಲಿಯೇ ತೋರಿಸುತ್ತಿತ್ತು. ಶನಿವಾರ ಬೆಳಗ್ಗೆ 7 ಗಂಟೆಗೆ ರಿಷಬ್ ಮೊಬೈಲ್​ನಿಂದ ಕುಟುಂಬ ಸದಸ್ಯರಿಗೆ ಕರೆ ಬಂದಿತ್ತು, ನಿಮ್ಮ ಮಗ ಜೀವಂತ ಬೇಕೆಂದರೆ 50 ಲಕ್ಷ ರೂ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಆತನ ಸ್ನೇಹಿತರ ಬಳಿ ಮಾತನಾಡಿದಾಗ ರಿಷಬ್ ಇನ್​ಸ್ಟಾಗ್ರಾಂನಲ್ಲಿ ಯುವತಿಯೊಬ್ಬಳನ್ನು ಭೇಟಿಯಾಗಿದ್ದ, ಆಕೆಯನ್ನು ಬೇಟಿಯಾಗಲು ಹೋಗಿದ್ದಾಗಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ

ರಿಷಭ್‌ನ ಮೊಬೈಲ್ ಫೋನ್ ಅನ್ನು ಟ್ರೇಸ್ ಮಾಡುವುದರಿಂದ ಪಾಟ್ನಾದ ಸಂಪತ್‌ಚಕ್‌ನಲ್ಲಿ ಅವನ ಕೊನೆಯ ಸ್ಥಳವನ್ನು ತೋರಿಸಲಾಯಿತು. ಬಳಿಕ ಫೋನ್ ಸ್ವಿಚ್ ಆಫ್ ಆಗಿತ್ತು. ಬಾಲಕಿಯನ್ನು ಪಾಟ್ನಾದ ಗಾರ್ಡನಿಬಾಗ್‌ನಲ್ಲಿ ಬಂಧಿಸಲಾಯಿತು ಮತ್ತು ಪೊಲೀಸರು ಆಕೆ ಅಪ್ರಾಪ್ತ ವಯಸ್ಕಳು ಎಂಬುದು ತಿಳಿದುಬಂದಿದೆ.

ಆಕೆಯ ಸುಳಿವು ಅನುಸರಿಸಿ, ರಿಷಬ್‌ನ ಅಪಹರಣಕ್ಕೆ ಸಹಾಯ ಮಾಡಿದ ಆಕೆಯ ಮೂವರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು