Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದವಳನ್ನು ಭೇಟಿಯಾಗಲು ಬಂದ ವಿದ್ಯಾರ್ಥಿ, ಆತನನ್ನೇ ಕಿಡ್ನ್ಯಾಪ್ ಮಾಡಿ 50 ಲಕ್ಷಕ್ಕೆ ಬೇಡಿಕೆ ಇಟ್ಟ ಅಪ್ರಾಪ್ತ ಬಾಲಕಿ

ನಿವೃತ್ತ ಪಶುವೈದ್ಯರ ಮೊಮ್ಮಗನನ್ನು ಅಪಹರಿಸಿ ಬಾಲಕಿಯೊಬ್ಬಳು 50 ಲಕ್ಷ ರೂ. ಗೆ ಬೇಡಿಕೆ ಇಟ್ಟಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.

ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದವಳನ್ನು ಭೇಟಿಯಾಗಲು ಬಂದ ವಿದ್ಯಾರ್ಥಿ, ಆತನನ್ನೇ ಕಿಡ್ನ್ಯಾಪ್ ಮಾಡಿ 50 ಲಕ್ಷಕ್ಕೆ ಬೇಡಿಕೆ ಇಟ್ಟ ಅಪ್ರಾಪ್ತ ಬಾಲಕಿ
ಅಪರಾಧImage Credit source: Scroll.in
Follow us
ನಯನಾ ರಾಜೀವ್
|

Updated on: Jul 05, 2023 | 8:44 AM

ನಿವೃತ್ತ ಪಶುವೈದ್ಯರ ಮೊಮ್ಮಗನನ್ನು ಅಪಹರಿಸಿ ಬಾಲಕಿಯೊಬ್ಬಳು 50 ಲಕ್ಷ ರೂ. ಗೆ ಬೇಡಿಕೆ ಇಟ್ಟಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ. ಅಪಹರಣಕ್ಕೊಳಗಾದವನು ಡಿಪ್ಲೊಮಾ ವಿದ್ಯಾರ್ಥಿ, ಆತ ಇನ್​ಸ್ಟಾಗ್ರಾಂನಲ್ಲಿನಲ್ಲಿ ಬಾಲಕಿಯನ್ನು ಭೇಟಿಯಾಗಿದ್ದ, ಆಕೆಯನ್ನು ಭೇಟಿ ಮಾಡಲು ಗಯಾದಿಂದ ಪಾಟ್ನಾಗೆ ಬಂದಿದ್ದ, ಆಗ ಬಾಲಕಿ ಆತನನ್ನು ಅಪಹರಿಸಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾಳೆ.

ಈ ಘಟನೆ ಕುರಿತು ಕುಟುಂಬದವರು ಪೊಲೀಸರಿಗೆ ದೂರು ನೀಡಿ, ಎಫ್​ಐಆರ್​ ದಾಖಲಿಸಿದ್ದರು. ವಿಷಯದ ಗಂಭೀರತೆಯನ್ನು ಅರಿತ ಎಸ್​ಎಸ್​ಪಿ ಆಶಿಶ್ ಭಾರ್ತಿ ಅವರು ಬೆಳಗಂಜ್ ಪೊಲೀಸ್ ಠಾಣೆಗೆ ಆಗಮಿಸಿ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಂಪೂರ್ಣ ತನಿಖೆ ನಡೆಸಿದ್ದಾರೆ.

ರಿಷಭ್ ಕುಮಾರ್ ಬೈಕ್​ನಲ್ಲಿ ಪಾಟ್ನಾಗೆ ಹೋಗಿದ್ದರು, ರಿಷಬ್ ಮೊಬೈಲ್​ ಲೊಕೇಷನ್​ ಅಲ್ಲಿಯೇ ತೋರಿಸುತ್ತಿತ್ತು. ಶನಿವಾರ ಬೆಳಗ್ಗೆ 7 ಗಂಟೆಗೆ ರಿಷಬ್ ಮೊಬೈಲ್​ನಿಂದ ಕುಟುಂಬ ಸದಸ್ಯರಿಗೆ ಕರೆ ಬಂದಿತ್ತು, ನಿಮ್ಮ ಮಗ ಜೀವಂತ ಬೇಕೆಂದರೆ 50 ಲಕ್ಷ ರೂ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಆತನ ಸ್ನೇಹಿತರ ಬಳಿ ಮಾತನಾಡಿದಾಗ ರಿಷಬ್ ಇನ್​ಸ್ಟಾಗ್ರಾಂನಲ್ಲಿ ಯುವತಿಯೊಬ್ಬಳನ್ನು ಭೇಟಿಯಾಗಿದ್ದ, ಆಕೆಯನ್ನು ಬೇಟಿಯಾಗಲು ಹೋಗಿದ್ದಾಗಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ

ರಿಷಭ್‌ನ ಮೊಬೈಲ್ ಫೋನ್ ಅನ್ನು ಟ್ರೇಸ್ ಮಾಡುವುದರಿಂದ ಪಾಟ್ನಾದ ಸಂಪತ್‌ಚಕ್‌ನಲ್ಲಿ ಅವನ ಕೊನೆಯ ಸ್ಥಳವನ್ನು ತೋರಿಸಲಾಯಿತು. ಬಳಿಕ ಫೋನ್ ಸ್ವಿಚ್ ಆಫ್ ಆಗಿತ್ತು. ಬಾಲಕಿಯನ್ನು ಪಾಟ್ನಾದ ಗಾರ್ಡನಿಬಾಗ್‌ನಲ್ಲಿ ಬಂಧಿಸಲಾಯಿತು ಮತ್ತು ಪೊಲೀಸರು ಆಕೆ ಅಪ್ರಾಪ್ತ ವಯಸ್ಕಳು ಎಂಬುದು ತಿಳಿದುಬಂದಿದೆ.

ಆಕೆಯ ಸುಳಿವು ಅನುಸರಿಸಿ, ರಿಷಬ್‌ನ ಅಪಹರಣಕ್ಕೆ ಸಹಾಯ ಮಾಡಿದ ಆಕೆಯ ಮೂವರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ