AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ದೋಚಲು ಹೋದ ಕಳ್ಳರಿಂದ 7 ಬೀದಿ ನಾಯಿಗಳ ಹತ್ಯೆ

ಕಳ್ಳರು ದೇವಸ್ಥಾನದ ಬಾಗಿಲು ಮುರಿದು ದರೋಡೆ ಮಾಡಲು ಒಳಗೆ ಹೋಗುವಾಗ ಹೊರಗೆ ಮಲಗಿದ್ದ ಬೀದಿ ನಾಯಿಗಳಿಗೆ ವಿಷ ಹಾಕಿ ಕೊಂದಿದ್ದಾರೆ. ಇದರಿಂದ ಆ 7 ನಾಯಿಗಳು ದೇವಸ್ಥಾನದ ಸಮೀಪವೇ ಸಾವನ್ನಪ್ಪಿವೆ.

ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ದೋಚಲು ಹೋದ ಕಳ್ಳರಿಂದ 7 ಬೀದಿ ನಾಯಿಗಳ ಹತ್ಯೆ
ಬೀದಿ ನಾಯಿ
TV9 Web
| Updated By: ಸುಷ್ಮಾ ಚಕ್ರೆ|

Updated on:Jan 29, 2022 | 3:35 PM

Share

ನವದೆಹಲಿ: ಬಿಹಾರದ ಕೈಮೂರ್‌ನ ದೇವಸ್ಥಾನದಲ್ಲಿ ನಡೆದ ದರೋಡೆಯ ವೇಳೆ ಏಳು ನಾಯಿಗಳನ್ನು ಕಳ್ಳರು ಕೊಂದಿರುವ ಭೀಕರ ಘಟನೆ ನಡೆದಿದೆ. ಆರೋಪಿಗಳು ದೇವಸ್ಥಾನದ ಬಾಗಿಲು ಮುರಿದು ದರೋಡೆ ಮಾಡಲು ಒಳಗೆ ಹೋಗುವಾಗ ಹೊರಗೆ ಮಲಗಿದ್ದ ಬೀದಿ ನಾಯಿಗಳಿಗೆ ವಿಷ (Poison) ಹಾಕಿ ಕೊಂದಿದ್ದಾರೆ. ಇದರಿಂದ ಆ 7 ನಾಯಿಗಳು ದೇವಸ್ಥಾನದ ಸಮೀಪವೇ ಸಾವನ್ನಪ್ಪಿವೆ. ಈ ವೇಳೆ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ 15,000 ರೂ.ಗಳನ್ನು ಕದ್ದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಕೈಮೂರ್‌ನ ಮೊಹಾನಿಯಾ ಪ್ರದೇಶದ ರೈಲ್ವೆ ಮಾಲ್ ಗೋಡೌನ್ ರಸ್ತೆಯ ಜಿಆರ್‌ಪಿ ಪೊಲೀಸ್ ಠಾಣೆ ಕ್ಯಾಂಪಸ್‌ನಲ್ಲಿರುವ ದೇವಸ್ಥಾನದ ಅರ್ಚಕರೊಬ್ಬರು ಶನಿವಾರ ಬೆಳಿಗ್ಗೆ ಅಲ್ಲಿಗೆ ಪೂಜೆ ಸಲ್ಲಿಸಲು ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ದೈನಿಕ್ ಜಾಗರಣ್ ವರದಿ ಮಾಡಿದೆ.

”ಕಳ್ಳತನ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದು ಜಿಆರ್‌ಪಿ ಪೊಲೀಸ್ ಠಾಣೆ ಪ್ರಭಾರಿ ಜೈಪ್ರಕಾಶ್ ಮಾಹಿತಿ ನೀಡಿದ್ದಾರೆ.

ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ದೇವಸ್ಥಾನದ ಕಾರ್ಯದರ್ಶಿ ಧೀರೇಂದ್ರ ಪ್ರತಾಪ್ ಸಿಂಗ್ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ”ದೇವಸ್ಥಾನದ ಬಾಗಿಲು ಮುರಿದು ಒಳಗೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯಲ್ಲಿದ್ದ 15ರಿಂದ 20 ಸಾವಿರ ರೂ. ಕದ್ದು, ದೇವಸ್ಥಾನದ ಬಳಿ ಮಲಗಿದ್ದ ಏಳು ಅಮಾಯಕ ಪ್ರಾಣಿಗಳಿಗೂ ವಿಷ ಹಾಕಿ ಸಾಯಿಸಿದ್ದಾರೆ. ಈ ಮುಗ್ಧ ಜೀವಿಗಳು ದೇವರಿಗೆ ಆರತಿ ಮಾಡಿದ ನಂತರ ನೀಡಲಾಗುವ ಪ್ರಸಾದ ತಿನ್ನಲು ದೇವಸ್ಥಾನದ ಹೊರಗೇ ಇರುತ್ತಿದ್ದವು. ಆ ಎಲ್ಲ ನಾಯಿಗಳಿಗೂ ವಿಷ ಹಾಕಿ ಕೊಲ್ಲಲಾಗಿದೆ. ಈ ವಿಷಯವನ್ನು ಆದಷ್ಟು ಬೇಗ ಬಹಿರಂಗಪಡಿಸಬೇಕೆಂದು ನಾನು ಆಡಳಿತವನ್ನು ಒತ್ತಾಯಿಸುತ್ತೇನೆ ಎಂದು ಧೀರೇಂದ್ರ ಪ್ರತಾಪ್ ಸಿಂಗ್ ವರದಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Crime News: ಬ್ಲಾಕ್ ಮ್ಯಾಜಿಕ್ ಶಂಕೆ; ವೃದ್ಧ ದಂಪತಿಯನ್ನು ಕೊಂದು, ಗುಡಿಸಲಲ್ಲಿ ಸುಟ್ಟು ಹಾಕಿದ ಯುವಕ

Crime News: ಜೈಲಿನ ಅಧಿಕಾರಿಗಳ ಕೈಗೆ ಸಿಕ್ಕಿ ಬೀಳುವ ಭಯದಲ್ಲಿ ಮೊಬೈಲನ್ನೇ ನುಂಗಿದ ಕೈದಿ!

Published On - 3:34 pm, Sat, 29 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ