AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hit and Run: ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಬೈಕ್​ ಸವಾರ ಸ್ಥಳದಲ್ಲೇ ಸಾವು: ಮತ್ತಿಬ್ಬರಿಗೆ ಗಾಯ

ಹಿಟ್ ಅಂಡ್ ರನ್​ಗೆ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಸಿಲಿಕಾನ್​ ಸಿಟಿಯ ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ನಡೆದಿದೆ.

Hit and Run: ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಬೈಕ್​ ಸವಾರ ಸ್ಥಳದಲ್ಲೇ ಸಾವು: ಮತ್ತಿಬ್ಬರಿಗೆ ಗಾಯ
ಹಿಟ್ ಅಂಡ್ ರನ್ ಮಾಡಿದ ಕಾರು ಚಾಲಕ, ಕಾರು
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Feb 06, 2023 | 4:49 PM

Share

ಬೆಂಗಳೂರು: ಹಿಟ್ ಅಂಡ್ ರನ್​ಗೆ (Hit and Run) ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಸಿಲಿಕಾನ್​ ಸಿಟಿಯ ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ನಡೆದಿದೆ. ಮೃತ ವ್ಯಕ್ತಯನ್ನು ಮಾಜಿದ್ ಖಾನ್ (39) ಎಂದು ಗುರುತಿಸಲಾಗಿದೆ. ಅತೀ ವೇಗವಾಗಿ ಬಂದ ಕಾರ್ ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದಿದೆ. ಆ ಬಳಿಕ ದ್ವಿಚಕ್ರ ವಾಹನ ಸವಾರನ ತಲೆ ಮೇಲೆ ಕಾರು ಹರಿದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಹಲಸೂರು ಗೇಟ್ ಟ್ರಾಫಿಕ್ ಪೊಲೀಸರು ಪರಿಶೀಲನೆ ಮಾಡಿದರು. ಘಟನೆಯಿಂದ ಕೆಲಕಾಲ ನೃಪತುಂಗ ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಡೆತ್​ನೋಟ್​ ಬರೆದಿಟ್ಟು ಯುವಕ ಆತ್ಮಹತ್ಯೆ

ಚಿತ್ರದುರ್ಗ: ಡೆತ್​ನೋಟ್​ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಣೇಶ್ ನಾಯ್ಕ್(21) ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ಗಣೇಶ್ ನಾಯ್ಕ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇವರಿಬ್ಬರ ಪ್ರೀತಿಗೆ ಮನು ಎಂಬುವನು ಅಡ್ಡಿ ಆಗಿದ್ದಾನೆ. ನನ್ನ ಮೇಲೆ ಅನೇಕ ಬಾರಿ ಹಲ್ಲೆಗೈದು ಮನು ದೌರ್ಜನ್ಯ ನಡೆಸಿದ್ದಾನೆ. ಬಳಿಕ ಪ್ರೀತಿಸುತ್ತಿದ್ದ ಯುವತಿಯೂ ಕಾಲ್, ಮೆಸೇಜ್ ನಿಲ್ಲಿಸಿದಳು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗ್ತಿದ್ದೇನೆಂದು ಡೆತ್​ನೋಟ್​ನಲ್ಲಿ ಉಲ್ಲೇಖ ಮಾಡಲಾಗಿದೆ. ನನ್ನ ಸಾವಿಗೆ ಮನು ಕಾರಣ ಎಂದು ಮೃತ ಗಣೇಶ್ ಆರೋಪಿಸಿದ್ದಾನೆ. ಆರೋಪಿ ಬಂಧನಕ್ಕೆ ಆಗ್ರಹಿಸಿ ಮೃತನ ಸಂಬಂಧಿಕರಿಂದ ಜಿಲ್ಲೆಯ ಹಿರಿಯೂರು ಪೊಲೀಸ್ ಠಾಣೆ ಮುಂದೆ ಧರಣಿ ಮಾಡಲಾಗುತ್ತಿದೆ.

ಇದನ್ನೂ ಓದಿ: ಕಲಬುರಗಿ: ಮಾರಕಾಸ್ತ್ರದಿಂದ ಸಾರ್ವಜನಿಕರ ಮೇಲೆ ಹಲ್ಲೆಗೆ ಯತ್ನ, ಆರೋಪಿ ಮೇಲೆ ಫೈರಿಂಗ್‌

ನೀರು ತರಲು ಹೋಗಿ ಹೊಂಡದಲ್ಲಿ ಬಿದ್ದು ಸಹೋದರರು ಸಾವು

ವಿಜಯನಗರ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬನ್ನಿಕಲ್ಲು ಗ್ರಾಮದಲ್ಲಿ ನಡೆದಿದೆ. ಬನ್ನಿಕಲ್ಲು ಗ್ರಾಮದ ಅಭಿ (15), ಜಿತೇಂದ್ರ (8) ಮೃತರು. ಭಾನುವಾರ ಶಾಲೆಗೆ ರಜೆಯಿದ್ದ ಹಿನ್ನೆಲೆಯಲ್ಲಿ ಪಾಲಕರ ಜೊತೆ ಮಕ್ಕಳು ಮುಸುಕಿನ ಜೋಳದ ಸೊಪ್ಪೆ ಕೊಯ್ಯಲು ತೆರಳಿದ್ದರು. ಈ ವೇಳೆ ಊಟಕ್ಕೆ ನೀರು ತರಲು ತಮ್ಮ ಹೊಲದ ಪಕ್ಕದ ನಾಗರಾಜ ಎನ್ನುವವರ ಕೃಷಿ ಹೊಂಡಕ್ಕೆ ಜಿತೇಂದ್ರ ತೆರಳಿದ್ದು, ಕಾಲುಜಾರಿ ಹೊಂಡದಲ್ಲಿ ಬಿದ್ದಿದ್ದಾನೆ.

ಈತನನ್ನು ರಕ್ಷಿಸಲು ಹೋದ ಅಭಿ ಸಹ ನೀರು ಪಾಲಾಗಿದ್ದಾನೆ. ಬಹು ಹೊತ್ತಿನವರೆಗೂ ಮಕ್ಕಳು ಬಾರದಿದ್ದಾಗ ಸಂಶಯಗೊಂಡ ಪಾಲಕರು ಹೊಂಡದ ಬಳಿ ತೆರಳಿ ನೋಡಿದಾಗ ಮಕ್ಕಳು ಹೊಂಡದ ಪಾಲಾಗಿರುವುದು ಪತ್ತೆಯಾಗಿದೆ. ಒಂದೇ ಕುಟುಂಬದ ಅಣ್ಣತಮ್ಮಂದಿರು ಸಾವಿಗೀಡಾದ ಹಿನ್ನೆಲೆ ಕುಟುಂಬ ಸದಸ್ಯರ ರೋದನ ಮುಗಿಲು ಮುಟ್ಟಿತ್ತು. ಈ ಕುರಿತು ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಆರ್ಥಿಕ ಸಂಕಷ್ಟ: ಭದ್ರಾವತಿ ವಿಐಎಸ್​ಎಲ್ ಕಾರ್ಖಾನೆಯ ಗುತ್ತಿಗೆ ಕಾರ್ಮಿಕ ನೇಣಿಗೆ ಶರಣು

ರಸ್ತೆ ಅಪಘಾತದಲ್ಲಿ ಆರ್​ಟಿಒ ಸಿಬ್ಬಂದಿ ಸಾವು

ರಾಯಚೂರು: ಸ್ಕಾರ್ಪಿಯೋ ವಾಹನ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಆರ್​ಟಿಒ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ರಾಯಚೂರು ನಗರದ ಆರ್​ಟಿಒ ಸರ್ಕಲ್ ಸಮೀಪ ನಡೆದಿದೆ. ಆರ್​ಟಿಒ ಕಂಪ್ಯೂಟರ್ ಆಪರೇಟರ್ ಚಂದ್ರಕಾಂತ್(34) ಮೃತ ದುರ್ದೈವಿ. ಬೈಕ್​ನ ಹಿಂಬದಿ ಸವಾರ ನಿಲೇಶ್​ಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕಾರ್ಪಿಯೋ ವಾಹನ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಯಚೂರು ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:42 pm, Mon, 6 February 23

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್